AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಚಿನ್ನದ ಅಂಬಾರಿ‌ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ ಕೇಳಿಬಂದಿದೆ. ಸದ್ಯ ಈ ವಿಚಾರವಾಗಿ ಪತ್ರ ಬರೆಯುವ ಮೂಲಕ ಗೊಂದಲಗಳಿಗೆ ಸ್ವತಃ ಪ್ರಮೋದಾದೇವಿ ಒಡೆಯರ್ ತೆರೆಯೆಳಿದಿದ್ದಾರೆ. ಇದು ಬೇಜವಾಬ್ದಾರಿ ಹೇಳಿಕೆ. ಏಕೆಂದರೆ ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಯ ನಂತರ 2 ನಿಮಿಷಕ್ಕೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.

ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
ಅಂಬಾರಿ ಹಸ್ತಾಂತರಿಸುವಲ್ಲಿ ವಿಳಂಬ ಆರೋಪ: ಪತ್ರದ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 13, 2024 | 5:04 PM

Share

ಮೈಸೂರು, ಅಕ್ಟೋಬರ್​​ 13: ನಾಡಹಬ್ಬ ಮೈಸೂರು ದಸರಾಗೆ (Dasara) ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ 10 ದಿನಗಳಿಂದ ವರ್ಣರಂಜಿತವಾಗಿ ನಡೆದ ಮೈಸೂರು ದಸರಾ ಪಂಜಿನ ಕವಾಯತಿನ ಮೂಲಕ ಸಾಂಪ್ರದಾಯಿಕವಾಗಿ ಅಂತ್ಯವಾಗಿದೆ. ಆದರೆ ಈ ಮಧ್ಯೆ ಚಿನ್ನದ ಅಂಬಾರಿ‌ ಕೊಡುವುದು ತಡವಾಯಿತು ಎಂಬ ಆರೋಪ ಕೇಳಿಬಂದಿದೆ. ಇದೀಗ ಈ ವಿಚಾರಕ್ಕೆ ಸ್ವತಃ ಪ್ರಮೋದಾದೇವಿ ಒಡೆಯರ್ ಪತ್ರದ ಮೂಲಕ​ ಸ್ಪಷ್ಟನೆ ನೀಡಿದ್ದಾರೆ.

ಇದು ಬೇಜವಾಬ್ದಾರಿ ಹೇಳಿಕೆ ಎಂದು ನಾನು ಹೇಳಲು ಬಯಸುತ್ತೇನೆ. ಏಕೆಂದರೆ ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಯ ನಂತರ 2 ನಿಮಿಷಕ್ಕೆ ಹಸ್ತಾಂತರಿಸಲಾಗಿದೆ. ಈ ವಿಷಯ ನಮಗೂ ಆತಂಕ ಉಂಟು ಮಾಡಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Mysuru Dasara: ಮೈಸೂರು ದಸರಾ ಜಂಬೂಸವಾರಿ: ಅದ್ಭುತ ಕ್ಷಣ ಕಣ್ತುಂಬಿಕೊಂಡ ಕೋಟ್ಯಂತರ ಜನರು

ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿಗಳು ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ‌ ಸ್ಥಳಾಂತರಿಸಲು ತೊಂದರೆ ಆಯಿತು.

ಅಂಬಾರಿ‌ ಹಸ್ತಾಂತರದ ಸಮಯದ ಬಗ್ಗೆ ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ನಾನು ಈ ಹೇಳಿಕೆಯನ್ನು ನೀಡಿದ್ದೇನೆ. ಸಂಬಂಧಪಟ್ಟ ಎಲ್ಲರಿಗೂ ಅನಗತ್ಯ ಆತಂಕವನ್ನು ತಪ್ಪಿಸುವ ಉದ್ದೇಶ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ. ಮುಂದೆ ಈ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಫಲಪುಷ್ಪಾ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ

ಮೈಸೂರು ಫಲಪುಷ್ಪ ಪ್ರದರ್ಶನದಲ್ಲಿ ಸಿಬ್ಬಂದಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದು, ಈ ಕುರಿತು ಪ್ರಶ್ನೆ ಮಾಡಿದವರ ಮೇಲೆ ಹಲ್ಲೆಗೆ ಯತ್ನ ಆರೋಪ ಕೇಳಿಬಂದಿದೆ.ಇಂದು ಉಚಿತವಾಗಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶವಿದ್ದರೂ ಸಿಬ್ಬಂದಿ ಟಿಕೆಟ್ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Mysuru Dasara Mahotsav-2024: ಮೈಸೂರು ದಸರಾ….ಹಾಡು ಕೇಳುತ್ತಾ ಜಂಬೂ ಸವಾರಿ ನೋಡ್ತಿದ್ರೆ ನೋಸ್ಟಾಲ್ಜಿಕ್ ಅನುಭವ!

ಕಳೆದ 10 ದಿನಗಳಿಗೆ ಮಾತ್ರ ಟಿಕೆಟ್ ಪಡೆದು ವೀಕ್ಷಣೆಗೆ ಅವಕಾಶವಿತ್ತು. ಆದರೆ ಇಂದು ಉಚಿತ ಪ್ರವೇಶ ಇದ್ದರೂ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ. ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಪ್ರವಾಸಿಗರಿಗೆ ಟಿಕೆಟ್ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ