AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಲಿತ್ ಮಹಲ್ ಹೆಲಿಪ್ಯಾಡ್ ಜಾಗ ಅರಮನೆಗೆ ಸೇರಿದ್ದು -ವಿವಾದದ ಯಾತನೆ ಬಿಚ್ಚಿಟ್ಟ ರಾಜವಂಶಸ್ಥೆ ಪ್ರಮೋದಾದೇವಿ

ನಗರದ ಲಲಿತ್ ಮಹಲ್ ಹೋಟೆಲ್​ನಲ್ಲಿರುವ ಹೆಲಿಪ್ಯಾಡ್ ಜಾಗ ವಿವಾದದ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಮಾತನಾಡಿದರು. ಹೆಲಿಪ್ಯಾಡ್​ ಜಾಗ ಬಿ ಖರಾಬ್ ಅಂತಾ ಎಲ್ಲೂ ಇಲ್ಲ. ಅದು ಅರಮನೆಗೆ ಸೇರಿದ ಜಾಗ ಎಂದು ಸ್ಪಷ್ಟನೆ ನೀಡಿದರು.

ಲಲಿತ್ ಮಹಲ್ ಹೆಲಿಪ್ಯಾಡ್ ಜಾಗ ಅರಮನೆಗೆ ಸೇರಿದ್ದು -ವಿವಾದದ ಯಾತನೆ ಬಿಚ್ಚಿಟ್ಟ ರಾಜವಂಶಸ್ಥೆ ಪ್ರಮೋದಾದೇವಿ
ರಾಜವಂಶಸ್ಥೆ ಪ್ರಮೋದಾದೇವಿ (ಎಡ); ಲಲಿತ್ ಮಹಲ್ ಹೋಟೆಲ್ (ಬಲ)
KUSHAL V
|

Updated on:Jan 02, 2021 | 6:33 PM

Share

ಮೈಸೂರು: ನಗರದ ಲಲಿತ್ ಮಹಲ್ ಹೋಟೆಲ್​ನಲ್ಲಿರುವ ಹೆಲಿಪ್ಯಾಡ್ ಜಾಗ ವಿವಾದದ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಮಾತನಾಡಿದರು. ಹೆಲಿಪ್ಯಾಡ್​ ಜಾಗ ಬಿ ಖರಾಬ್ ಅಂತಾ ಎಲ್ಲೂ ಇಲ್ಲ. ಅದು ಅರಮನೆಗೆ ಸೇರಿದ ಜಾಗ ಎಂದು ಸ್ಪಷ್ಟನೆ ನೀಡಿದರು.

ಹರ್ಷಗುಪ್ತ ಡಿಸಿ ಆಗಿದ್ದಾಗ ಬಿ ಖರಾಬ್ ಅಂತಾ ಶುರುವಾಯ್ತು. ವಸ್ತ್ರದ್ ಬಂದ ವೇಳೆ ಅದು ಅರಮನೆಗೆ ಸೇರಿದ್ದೆಂದು ತೀರ್ಪು ನೀಡಿದ್ದರು. ಆದರೆ, ಬಳಿಕ ಡಿಸಿ ಶಿಖಾ ಬಂದ ವೇಳೆ ಸರ್ಕಾರಿ ಭೂಮಿ ಅಂತಾ ತೀರ್ಪು ಕೊಟ್ಟಿದರು.

ಹಾಗಾಗಿ, ಈ ತೀರ್ಪು ಪ್ರಶ್ನಿಸಿ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಇದೀಗ ಜೂ.19ರಂದು ಹೈಕೋರ್ಟ್ ಅರಮನೆಗೆ ಸೇರಿದ್ದೆಂದು ತೀರ್ಪು ನೀಡಿದೆ. ಅರಮನೆ ವಂಶಸ್ಥರಿಗೆ ಸೇರಿದ ಭೂಮಿ ಎಂದು ತೀರ್ಪು ಕೊಟ್ಟಿತ್ತು. ಇದನ್ನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರದ ಅರ್ಜಿ ಸಹ ವಜಾಗೊಂಡಿದೆ. ಸರ್ಕಾರದ ಅರ್ಜಿಯನ್ನು ಕೋರ್ಟ್​ ಕಳೆದ ಡಿಸೆಂಬರ್ 19ರಂದು ವಜಾ ಮಾಡಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

‘ಎಲ್ಲ ಸರ್ಕಾರಗಳೂ ತೊಂದರೆ ಕೊಟ್ಟಿವೆ, ಈಗಿನ ಸರ್ಕಾರ ತಟಸ್ಥ’ ಎಲ್ಲ ಸರ್ಕಾರಗಳೂ ತೊಂದರೆ ಕೊಟ್ಟಿವೆ, ಈಗಿನ ಸರ್ಕಾರ ತಟಸ್ಥ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದ್ದಾರೆ. ಕೆಲ ಸರ್ಕಾರಗಳು ನಮಗೆ ಜಾಸ್ತಿ ತೊಂದರೆಯನ್ನು ಕೊಟ್ಟಿವೆ. ಕೆಲ ಸರ್ಕಾರ ಕಡಿಮೆ ತೊಂದರೆ ಕೊಟ್ಟಿವೆ. ಆದರೆ, ಯಾವುದೇ ಸರ್ಕಾರ ಅಥವಾ ವ್ಯಕ್ತಿಯನ್ನು ದೂಷಿಸುವುದಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

ಹಿಂಬದಿ ಸವಾರರಿಗೆ ಥರ್ಡ್ ಪಾರ್ಟಿ ವಿಮೆ ಪರಿಹಾರವಿಲ್ಲ -ಹೈಕೋರ್ಟ್ ಮಹತ್ವದ ತೀರ್ಪು

Published On - 6:23 pm, Sat, 2 January 21

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು