AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ […]

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ
ಆಯೇಷಾ ಬಾನು
| Edited By: |

Updated on:Sep 03, 2020 | 11:53 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ ಮ್ಯಾನೇಜರ್ ಶ್ರುತಿ ಮೋದಿಯವರನ್ನು ಬಂಧಿಸ್ತಾರೆ. ವಿಚಾರಣೆ ವೇಳೆ ಇಮ್ತಿಯಾಜ್ ಖಾತ್ರಿ ಹೆಸರು ಕೇಳಿ ಬರುತ್ತದೆ. ಈ ಇಮ್ತಿಯಾಜ್ ಖಾತ್ರಿ ಯಾರೆಂಬುವುದನ್ನು ನೀವೇ ಹುಡುಕಿ. ಇಮ್ತಿಯಾಜ್‌ಗೂ ಸಲ್ಮಾನ್‌ಗೂ ಏನು ಸಂಬಂಧ ಎಂಬುವುದನ್ನು ಹುಡುಕಿ. 2017ರಲ್ಲಿ ಮುಂಬೈನಲ್ಲಿ ಇಮ್ತಿಯಾಜ್ ಹುಟ್ಟುಹಬ್ಬ ಕಾರ್ಯಕ್ರಮ ನಡೆದಿತ್ತು. ಆ ಪಾರ್ಟಿಗೆ ಕನ್ನಡ ಚಿತ್ರರಂಗದವರು ಯಾರೆಲ್ಲಾ ಹೋಗಿದ್ದರು. ಅದರ ಬಗ್ಗೆ ಮೊದಲು ತನಿಖೆ ಮಾಡಲಿ ಎಂದು ಪ್ರಶಾಂತ್ ಸಂಬರಗಿ ಆಂಗಿಕ ಅಭಿನಯದೊಂದಿಗೆ ಸುದ್ದಿಗಾರರಿಗೆ ತಿಳಿಸಿದರು.

JDS‌ನಲ್ಲಿದ್ದ ನಾಯಕ ಕಾಂಗ್ರೆಸ್‌ಗೆ ಬಂದು ಗೆಲವು: ಇನ್ನು JDS ‌ನಲ್ಲಿದ್ದ ನಾಯಕ, ಕಾಂಗ್ರೆಸ್‌ಗೆ ಬಂದು ಗೆಲವು ಸಾಧಿಸ್ತಾರೆ. ಅವರ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟರನ್ನು ಕರೆಸುತ್ತಾರೆ. ಹುಟ್ಟುಹಬ್ಬದಲ್ಲಿ ಇಮ್ತಿಯಾಜ್ ಖಾತ್ರಿಯೂ ಭಾಗಿಯಾಗುತ್ತಾನೆ. ಹುಟ್ಟುಹಬ್ಬ ಕಾರ್ಯಕ್ರಮ ಬಳಿಕ ಆತ ಯಾರ ಕಾರಲ್ಲಿ ಓಡಾಡಿದ್ರು ಎಂಬುವುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮಾಡಲಿ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿಯಲ್ಲಿ ಇಮ್ತಿಯಾಜ್ ಖಾತ್ರಿ ಮತ್ತು ಜಮೀರ್ ಅಹ್ಮದ್ ಬಗ್ಗೆ ಆರೋಪದ ಬಾಣಗಳನ್ನು ಎಸೆದಿದ್ದಾರೆ.

Published On - 11:52 am, Thu, 3 September 20

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!