AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ […]

ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ
ಆಯೇಷಾ ಬಾನು
| Edited By: |

Updated on:Sep 03, 2020 | 11:53 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಕೆಲ ಕುತೂಹಲಕಾರಿ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪದ ಬಗ್ಗೆ ಅನೇಕ ವಿಚಾರಗಳು ಬಹಿರಂಗವಾಗುತ್ತಿದ್ದಂತೆ ಬಾಲಿವುಡ್​ನಲ್ಲೂ ಈ ಜಾಲದ ನಶೆ ಪಸರಿಸಿರುವ ಬಗ್ಗೆ ಹಾಗೂ ಅದು ನಮ್ಮ ರಾಜ್ಯದ ಪ್ರಭಾವೀ ರಾಜಕಾರಣಿಯೊಬ್ಬರ ಹೆಸರಿನೊಂದಿಗೆ ತಳಕು ಹಾಕಿಕೊಂಡಿರುವುದನ್ನು ಪ್ರಶಾಂತ್ ಸಂಬರಗಿ ಪ್ರಸ್ತಾಪಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಮರ್ಡರ್ ಕೇಸ್‌ನಲ್ಲಿ ಮ್ಯಾನೇಜರ್ ಶ್ರುತಿ ಮೋದಿಯವರನ್ನು ಬಂಧಿಸ್ತಾರೆ. ವಿಚಾರಣೆ ವೇಳೆ ಇಮ್ತಿಯಾಜ್ ಖಾತ್ರಿ ಹೆಸರು ಕೇಳಿ ಬರುತ್ತದೆ. ಈ ಇಮ್ತಿಯಾಜ್ ಖಾತ್ರಿ ಯಾರೆಂಬುವುದನ್ನು ನೀವೇ ಹುಡುಕಿ. ಇಮ್ತಿಯಾಜ್‌ಗೂ ಸಲ್ಮಾನ್‌ಗೂ ಏನು ಸಂಬಂಧ ಎಂಬುವುದನ್ನು ಹುಡುಕಿ. 2017ರಲ್ಲಿ ಮುಂಬೈನಲ್ಲಿ ಇಮ್ತಿಯಾಜ್ ಹುಟ್ಟುಹಬ್ಬ ಕಾರ್ಯಕ್ರಮ ನಡೆದಿತ್ತು. ಆ ಪಾರ್ಟಿಗೆ ಕನ್ನಡ ಚಿತ್ರರಂಗದವರು ಯಾರೆಲ್ಲಾ ಹೋಗಿದ್ದರು. ಅದರ ಬಗ್ಗೆ ಮೊದಲು ತನಿಖೆ ಮಾಡಲಿ ಎಂದು ಪ್ರಶಾಂತ್ ಸಂಬರಗಿ ಆಂಗಿಕ ಅಭಿನಯದೊಂದಿಗೆ ಸುದ್ದಿಗಾರರಿಗೆ ತಿಳಿಸಿದರು.

JDS‌ನಲ್ಲಿದ್ದ ನಾಯಕ ಕಾಂಗ್ರೆಸ್‌ಗೆ ಬಂದು ಗೆಲವು: ಇನ್ನು JDS ‌ನಲ್ಲಿದ್ದ ನಾಯಕ, ಕಾಂಗ್ರೆಸ್‌ಗೆ ಬಂದು ಗೆಲವು ಸಾಧಿಸ್ತಾರೆ. ಅವರ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟರನ್ನು ಕರೆಸುತ್ತಾರೆ. ಹುಟ್ಟುಹಬ್ಬದಲ್ಲಿ ಇಮ್ತಿಯಾಜ್ ಖಾತ್ರಿಯೂ ಭಾಗಿಯಾಗುತ್ತಾನೆ. ಹುಟ್ಟುಹಬ್ಬ ಕಾರ್ಯಕ್ರಮ ಬಳಿಕ ಆತ ಯಾರ ಕಾರಲ್ಲಿ ಓಡಾಡಿದ್ರು ಎಂಬುವುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮಾಡಲಿ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿಯಲ್ಲಿ ಇಮ್ತಿಯಾಜ್ ಖಾತ್ರಿ ಮತ್ತು ಜಮೀರ್ ಅಹ್ಮದ್ ಬಗ್ಗೆ ಆರೋಪದ ಬಾಣಗಳನ್ನು ಎಸೆದಿದ್ದಾರೆ.

Published On - 11:52 am, Thu, 3 September 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ