AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. […]

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ
KUSHAL V
|

Updated on: Sep 22, 2020 | 7:02 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. ಮತ್ತೆ ಸಿಸಿಬಿಗೆ ಹೋಗ್ತೀನಿ ಹಾಗೂ ಡಿಜಿಟಲ್ ಎವಿಡೆನ್ಸ್ ಕೊಡುತ್ತೇನೆ ಎಂದು ಪ್ರಶಾಂತ್​ ಹೇಳಿದರು.

ಜಮೀರ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ RTI ಮಾಹಿತಿಯನ್ನು ಸಹ ಕೊಡುತ್ತೇನೆ. ಶಾಸಕ ಜಮೀರ್ ಅಹ್ಮದ್​ ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ. RTI ಮೂಲಕವೂ ಅವರ ಪ್ರವಾಸದ ಮಾಹಿತಿ ಸಿಗ್ತಿಲ್ಲ. ಹಿಂದೆ ಕ್ಯಾಬಿನೆಟ್ ಸಚಿವರಾದಾಗಲೂ ಅವರು ಸಾಕಷ್ಟು ಬಾರಿ ಕೊಲೊಂಬೋಗೆ ಹೋಗಿದ್ದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದ್ದಾರೆ.

ಜಮೀರ್​ ಅಹ್ಮದ್​ ಪ್ರೋಟೋಕಾಲ್​ ಪ್ರಕಾರ ಸ್ಪೀಕರ್​ಗಾದರೂ ಮಾಹಿತಿ ನೀಡಬೇಕಿತ್ತು. ಹಾಗಾಗಿ, ಜಮೀರ್​ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ, ಇವರ ವಿರುದ್ಧ ತನಿಖೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಪ್ರಶಾಂತ್​ ಸಂಬರಗಿ ತಿಳಿಸಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?