AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. […]

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ
KUSHAL V
|

Updated on: Sep 22, 2020 | 7:02 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. ಮತ್ತೆ ಸಿಸಿಬಿಗೆ ಹೋಗ್ತೀನಿ ಹಾಗೂ ಡಿಜಿಟಲ್ ಎವಿಡೆನ್ಸ್ ಕೊಡುತ್ತೇನೆ ಎಂದು ಪ್ರಶಾಂತ್​ ಹೇಳಿದರು.

ಜಮೀರ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ RTI ಮಾಹಿತಿಯನ್ನು ಸಹ ಕೊಡುತ್ತೇನೆ. ಶಾಸಕ ಜಮೀರ್ ಅಹ್ಮದ್​ ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ. RTI ಮೂಲಕವೂ ಅವರ ಪ್ರವಾಸದ ಮಾಹಿತಿ ಸಿಗ್ತಿಲ್ಲ. ಹಿಂದೆ ಕ್ಯಾಬಿನೆಟ್ ಸಚಿವರಾದಾಗಲೂ ಅವರು ಸಾಕಷ್ಟು ಬಾರಿ ಕೊಲೊಂಬೋಗೆ ಹೋಗಿದ್ದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದ್ದಾರೆ.

ಜಮೀರ್​ ಅಹ್ಮದ್​ ಪ್ರೋಟೋಕಾಲ್​ ಪ್ರಕಾರ ಸ್ಪೀಕರ್​ಗಾದರೂ ಮಾಹಿತಿ ನೀಡಬೇಕಿತ್ತು. ಹಾಗಾಗಿ, ಜಮೀರ್​ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ, ಇವರ ವಿರುದ್ಧ ತನಿಖೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಪ್ರಶಾಂತ್​ ಸಂಬರಗಿ ತಿಳಿಸಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’