AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. […]

ಜಮೀರ್ ವಿದೇಶ ಪ್ರವಾಸಕ್ಕೆ ಹೋದ ಮಾಹಿತಿಯನ್ನ ಸರ್ಕಾರಕ್ಕೆ ಕೊಟ್ಟಿಲ್ಲ -ಪ್ರಶಾಂತ್ ಸಂಬರಗಿ
KUSHAL V
|

Updated on: Sep 22, 2020 | 7:02 PM

Share

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ BS ಯಡಿಯೂರಪ್ಪರನ್ನು ಮಾತನಾಡಿಸಲು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಗಮಿಸಿದ್ದರು. ಆದರೆ, ಸಿಎಂ ಜೊತೆ ಮಾತುಕತೆ ನಡೆಸಲು ಸಂಬರಗಿಗೆ ಸಮಯ ಸಿಗದ ಹಿನ್ನೆಲೆಯಲ್ಲಿ ವಿಧಾನಸೌಧದ ಕಾರಿಡಾರ್​ನಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಶಾಂತ್ ಸಂಬರಗಿ ಶಾಸಕ ಜಮೀರ್ ಅಹ್ಮದ್ ಕಾನೂನು ಬಾಹಿರವಾಗಿ ವಿದೇಶ ಪ್ರಯಾಣ ಕೈಗೊಂಡಿದ್ದಾರೆ. ಜೊತೆಗೆ, ಪ್ರೋಟೋಕಾಲ್ ಪ್ರಕಾರ ಈ ಕುರಿತು ಯಾವುದೇ ದಾಖಲೆ ಸಹ ಕೊಟ್ಟಿಲ್ಲ. ಆ ಬಗ್ಗೆ ಸಿಎಂಗೆ ದೂರು‌ ನೀಡಿದ್ದೇನೆ. ಮತ್ತೆ ಸಿಸಿಬಿಗೆ ಹೋಗ್ತೀನಿ ಹಾಗೂ ಡಿಜಿಟಲ್ ಎವಿಡೆನ್ಸ್ ಕೊಡುತ್ತೇನೆ ಎಂದು ಪ್ರಶಾಂತ್​ ಹೇಳಿದರು.

ಜಮೀರ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ RTI ಮಾಹಿತಿಯನ್ನು ಸಹ ಕೊಡುತ್ತೇನೆ. ಶಾಸಕ ಜಮೀರ್ ಅಹ್ಮದ್​ ವಿದೇಶ ಪ್ರವಾಸ ಕೈಗೊಂಡಿರುವ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿಲ್ಲ. RTI ಮೂಲಕವೂ ಅವರ ಪ್ರವಾಸದ ಮಾಹಿತಿ ಸಿಗ್ತಿಲ್ಲ. ಹಿಂದೆ ಕ್ಯಾಬಿನೆಟ್ ಸಚಿವರಾದಾಗಲೂ ಅವರು ಸಾಕಷ್ಟು ಬಾರಿ ಕೊಲೊಂಬೋಗೆ ಹೋಗಿದ್ದರು ಎಂದು ಪ್ರಶಾಂತ್​ ಸಂಬರಗಿ ಆರೋಪಿಸಿದ್ದಾರೆ.

ಜಮೀರ್​ ಅಹ್ಮದ್​ ಪ್ರೋಟೋಕಾಲ್​ ಪ್ರಕಾರ ಸ್ಪೀಕರ್​ಗಾದರೂ ಮಾಹಿತಿ ನೀಡಬೇಕಿತ್ತು. ಹಾಗಾಗಿ, ಜಮೀರ್​ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ, ಇವರ ವಿರುದ್ಧ ತನಿಖೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದು ಪ್ರಶಾಂತ್​ ಸಂಬರಗಿ ತಿಳಿಸಿದ್ದಾರೆ.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್