AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಜಿಯಾದರು ಕೆಲಸಕ್ಕಾಗಿ ನನಗೆ ಕರೆ ಮಾಡಿ ಎಂದ ಪ್ರತಾಪ್​ ಸಿಂಹ

ಪ್ರತಾಪ ಸಿಂಹರಿಂದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆ ಇದೀಗ ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ‌ ಮಾಡಿ ಎಂದು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ ಎಂದಿದ್ದಾರೆ.

ನಾನು ಮಾಜಿಯಾದರು ಕೆಲಸಕ್ಕಾಗಿ ನನಗೆ ಕರೆ ಮಾಡಿ ಎಂದ ಪ್ರತಾಪ್​ ಸಿಂಹ
ಪ್ರತಾಪ್ ​ಸಿಂಹ
ದಿಲೀಪ್​, ಚೌಡಹಳ್ಳಿ
| Edited By: |

Updated on:Mar 14, 2024 | 6:15 PM

Share

ಮೈಸೂರು, ಮಾರ್ಚ್​​ 14: ಎರಡು ಬಾರಿ ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದೆ. ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ. ನಿನ್ನೆ ಯದುವೀರ ಅವರಿಗೆ ಟಿಕೆಟ್​​ ಘೋಷಣೆ ಬಳಿಕ ಪ್ರತಾಪ್ ಸಿಂಹ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಇನ್ನೆರಡು ದಿನಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ ಎಂದಿದ್ದರು. ಇದೀಗ ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ‌ ಮಾಡಿ ಎಂದು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್

ಯದುವೀರ್​ಗೆ ಟಿಕೆಟ್ ಸಿಗುತ್ತೆಂಬ ಸುದ್ದಿ ಹರಿದಾಡುತ್ತಿದ್ದಾಗ ಪ್ರತಾಪ್ ಸಿಂಹ ಜಾಣತನದಿಂದ ಉತ್ತರಿಸಿದ್ದರು. ಮಹಾರಾಜರನ್ನ ಹೊಗಳುತ್ತಲೇ ಯದುವೀರ್ ಸಂಸದರಾದರೆ ಏನೆಲ್ಲಾ ಆಗಬಹುದು ಎನ್ನುವ ಸಣ್ಣ ಬ್ಲ್ಯೂ ಪ್ರಿಂಟ್ ಸಹ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಟಿಕೆಟ್ ಯಾರಿಗೆ ಸಿಗಲಿ ನಾನು ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.

ನನ್ನ ಓಡು ನೋಟಾಗೆ ಎಂದ ಪ್ರತಾಪ್ ಸಿಂಹ ಅಭಿಮಾನಿ

ಪ್ರತಾಪ್​​ ಸಿಂಹಗೆ ಟಿಕೆಟ್ ಮಿಸ್ ಆದ ಹಿನ್ನೆಲೆ ನೋಟಾಗೆ ನನ್ನ ಓಟು ಹಾಕುವುದಾಗಿ ಆಟೋ ಹಿಂಬದಿಯಲ್ಲಿ ಅಭಿಮಾನಿ ಬರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದಿಲ್ಲ: ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ

ಮೈಸೂರಿನ ಹಿನಕಲ್ ನಿವಾಸಿ ಪುನೀತ್ ಎಂಬ ಆಟೋ ಚಾಲಕ ತನಗಾದ ಬೇಸರವನ್ನ ಆಟೋದ ಹಿಂಬದಿಯಲ್ಲಿ ಬರೆಸಿಕೊಂಡು ಓಡಾಡುತ್ತಿದ್ದಾರೆ. ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬಹಳ ಬೇಸರದಿಂದ ಆಟೋದ ಹಿಂದೆ ಹೀಗೆ ಬರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:02 pm, Thu, 14 March 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್