AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ
ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
Skanda
| Edited By: |

Updated on: Apr 12, 2021 | 6:57 PM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಬೆಳೆದು ನಿಂತಿರುವ ಮರಗಳನ್ನು ಕಡಿದು ಹೆಲಿಪ್ಯಾಡ್ ಮಾಡುವುದಕ್ಕೆ ಮೈಸೂರಿನ ಜನ ಅಸಮಾಧಾನ ಹೊರಹಾಕಿದ್ದರು. ಇದೀಗ ಜನರ ಧ್ವನಿಗೆ ಇನ್ನಷ್ಟು ಬಲ ಬಂದಂತಾಗಿದ್ದು ಸ್ವತಃ ಮೈಸೂರು ಸಂಸದ ಪ್ರತಾಪ್ ಸಿಂಹ ಈ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿ ಅಧಿಕಾರಗಳ ವಿರುದ್ಧ ಕಿಡಿಕಾರಿದ್ದಾರೆ. ಮರಗಳನ್ನು ಕಡಿದು ಹೆಲಿಪ್ಯಾಡ್ ಮಾಡುವಂತಹದ್ದೇನಿದೆ ಎಂದು ಪ್ರಶ್ನೆ ಎತ್ತಿರುವ ಪ್ರತಾಪ್​ ಸಿಂಹ ಮರದ ತೊಗಟೆ ಕೆತ್ತಿ ಗುರುತು ಮಾಡಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೆಲಿಟೂರಿಸಂ ಪ್ರಸ್ತಾವನೆಯ ಸ್ಥಳಕ್ಕೆ ಪ್ರತಾಪ್​ ಸಿಂಹ ಭೇಟಿ ನೀಡಿದ ವೇಳೆ ಜಾಗದ ಗುರುತಿಗಾಗಿ ಮರಗಳ ತೊಗಟೆ ತೆಗೆದು ಗುರುತು ಮಾಡಿದ್ದು ಅವರ ಗಮನಕ್ಕೆ ಬಂದಿದೆ. ಅದನ್ನು ನೋಡಿ ಸಿಟ್ಟಾದ ಸಂಸದರು ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದು ಬೇಸಿಗೆಯಲ್ಲಿ ಮರದ ತೊಗಟೆ ಒಡೆದು ಹಾಕಿದ್ದೀರಲ್ಲ. ಹೀಗೆ ಮಾಡಿದರೆ ಮರಗಳಿಗೆ ತೊಂದರೆ ಆಗುತ್ತೆ ಎನ್ನುವುದೂ ಗೊತ್ತಿಲ್ವಾ? ಎಂದು ಕೇಳಿದ್ದಾರೆ. ಆಗ ಪ್ರವಾಸೋದ್ಯಮ ಅಧಿಕಾರಿಗಳ ಸೂಚನೆ ಮೇರೆಗೆ ಕೆಲಸ ಮಾಡಿದ್ದಾಗಿ ಅರಣ್ಯಾಧಿಕಾರಿಗಳು ತಿಳಿಸಿದಾಗ, ಪ್ರವಾಸೋದ್ಯಮ ಇಲಾಖೆಯವ್ರ ತಲೇಲಿ ಗೊಬ್ಬರ ತುಂಬಿದೆ. ಯಾವ ಘನಕಾರ್ಯ ಮಾಡಲು ನೀವು ಮುಂದಾಗಿದ್ದೀರಿ ಎಂದು ಹರಿಹಾಯ್ದಿದ್ದಾರೆ.

ಸುಮ್ಮನೆ ಯೋಜನೆ ಮಾಡುವುದಲ್ಲ, ಅದಕ್ಕೊಂದು ರೂಪುರೇಷೆ ಬೇಕಲ್ಲವೇ? ಇಲ್ಲಿ ಮರ ಕಡಿದು ಹೆಲಿಪ್ಯಾಡ್ ನಿರ್ಮಾಣ ಮಾಡಬೇಕಾ? 10 ಮೀ.ಟರ್ ಪಕ್ಕದಲ್ಲಿ ಈಗಾಗಲೇ ಹೆಲಿಪ್ಯಾಡ್ ಇದೆ. ರಾಜಮನೆತನದವರನ್ನು ಕೇಳಿದರೆ ಬಾಡಿಗೆಗೆ ಹೆಲಿಪ್ಯಾಡ್ ಕೊಡಲ್ಲ ಅಂತಿದ್ರಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಮರಗಳ ತೊಗಟೆ ಒಡೆದು ಗುರುತು ಹಾಕಿದ್ದಕ್ಕೆ ಸಿಟ್ಟಾಗಿ, ನಾನು ಮಲೆನಾಡಿನವನು. ಮರಗಳ ಬಗ್ಗೆ ನಿಮಗಿಂತ ಹೆಚ್ಚು ಗೊತ್ತಿದೆ. ಹೀಗೆ ತೊಗಟೆ ತೆಗೆದರೆ ಅದು ಮರಗಳಿಗೆ ಹಾನಿ ಮಾಡಿದಂತೆ ಎಂದು ಪ್ರವಾಸೋದ್ಯಮ ಇಲಾಖೆ‌ ಅಸಿಸ್ಟೆಂಟ್ ಡೈರೆಕ್ಟರ್ ರಾಘವೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಲಲಿತ್ ಮಹಲ್ ಹೆಲಿಪ್ಯಾಡ್ ಜಾಗ ಅರಮನೆಗೆ ಸೇರಿದ್ದು -ವಿವಾದದ ಯಾತನೆ ಬಿಚ್ಚಿಟ್ಟ ರಾಜವಂಶಸ್ಥೆ ಪ್ರಮೋದಾದೇವಿ

ಇದನ್ನೂ ಓದಿ: ನೈಟ್​ ಕರ್ಫ್ಯೂ ಜಾರಿ; ಮೈಸೂರು ಪ್ರವಾಸಿ ತಾಣಗಳು ಜನರಿಲ್ಲದೆ ಖಾಲಿ ಖಾಲಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ