ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು. ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ:  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ […]

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ -ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ
ಸಾಧು ಶ್ರೀನಾಥ್​

Updated on: Dec 20, 2019 | 12:53 PM

ಮೈಸೂರು: ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ದ್ರೋಹವನ್ನು ಮುಚ್ಚಿಕೊಳ್ಳಲು ಅಮಾಯಕ ಮುಸ್ಲಿಮರನ್ನು ಬಲಿಕೊಡ್ತಿದ್ದಾರೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ವಿರೋಧಿಯಲ್ಲ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ತೊಂದರೆಯಾಗಲ್ಲ. ಪಾಕ್, ಬಾಂಗ್ಲಾದೇಶದಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ಕೊಡುವುದೇ ಸಿಎಎ ಉದ್ದೇಶವಾಗಿದೆ ಎಂದರು.

ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ: 
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾರಿಗೂ ಯಾವುದೇ ತೊಂದರೆ ಇಲ್ಲ. ಅಲ್ಲದೆ ಪರಂಪರೆಯಲ್ಲಿ ಏನು ನಡೆದುಕೊಂಡು ಬಂದಿದೆ ಅದನ್ನೇ ಮೋದಿ ಮಾಡಿದ್ದಾರೆ. ಹೊಸದಾಗಿ ಮೋದಿ ಏನನ್ನು ಮಾಡಿಲ್ಲ. ಯು.ಟಿ.ಖಾದರ್ ಪ್ರಕಾರ ಅಲ್ಲಿ ತುಳಿತಕ್ಕೊಳಗಾದವರಿಗೆ ಆಶ್ರಯ ನೀಡಬಾರದಾ? ನೇರವಾಗಿ ಹೇಳಲಿ. ಮಂಗಳೂರಿನಲ್ಲಿ ನಡೆಯುತ್ತಿರುವ ಗಲಭೆಗೆ ಯು.ಟಿ.ಖಾದರ್ ನೇರ ಹೊಣೆ. ಕಾಂಗ್ರೆಸ್ ಅವರನ್ನ ಉಚ್ಛಾಟಿಸಬೇಕು. ಮೈಸೂರಲ್ಲೂ ಶಾಂತಿಕದಡೋ ಯತ್ನ ಮಾಡಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

Published On - 12:50 pm, Fri, 20 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us