AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Y. ವಿಜಯೇಂದ್ರಗೆ ಹೆಚ್ಚಿದ ಬೇಡಿಕೆ.. ಮಸ್ಕಿ ಬೈಎಲೆಕ್ಷನ್​ ಉಸ್ತುವಾರಿ ವಹಿಸಲು ‘ಮಸ್ಕಾ’!

ಬೆಂಗಳೂರು: ಮೊದಲು K.R. ಪೇಟೆ.. ಇದೀಗ ಶಿರಾ ಉಪಚುನಾವಣೆ. ಕರ್ನಾಟಕದಲ್ಲಿ ಕಮಲವನ್ನು ಅರಳಿಸಲು ಕೇಸರಿ ಪಕ್ಷ ಭಾರಿ ಕಸರತ್ತು ನಡೆಸಿದೆ. ಬಿಜೆಪಿ ನಡೆಸಿರುವ ಚುನಾವಣಾ ಅಶ್ವಮೇಧ ಯಾಗದಲ್ಲಿ ರಾಜ್ಯದ ಹಲವು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಪಡೆದಿದೆ. ಅದರಲ್ಲೂ ಪಕ್ಷದ ಯುವ ನಾಯಕ ಹಾಗೂ ಸಿಎಂ ಬಿ.ಎಸ್​. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಸಿಕೊಂಡರೆ ಬಿಜೆಪಿಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ಮಾತು ಕಮಲ ಪಾಳಯದಲ್ಲಿ ಜೋರಾಗಿ ರೌಂಡ್ಸ್​ ಹೊಡೀತಿದೆ. ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ […]

B.Y. ವಿಜಯೇಂದ್ರಗೆ ಹೆಚ್ಚಿದ ಬೇಡಿಕೆ.. ಮಸ್ಕಿ ಬೈಎಲೆಕ್ಷನ್​ ಉಸ್ತುವಾರಿ ವಹಿಸಲು ‘ಮಸ್ಕಾ’!
KUSHAL V
| Updated By: ಸಾಧು ಶ್ರೀನಾಥ್​|

Updated on:Nov 10, 2020 | 1:41 PM

Share

ಬೆಂಗಳೂರು: ಮೊದಲು K.R. ಪೇಟೆ.. ಇದೀಗ ಶಿರಾ ಉಪಚುನಾವಣೆ. ಕರ್ನಾಟಕದಲ್ಲಿ ಕಮಲವನ್ನು ಅರಳಿಸಲು ಕೇಸರಿ ಪಕ್ಷ ಭಾರಿ ಕಸರತ್ತು ನಡೆಸಿದೆ. ಬಿಜೆಪಿ ನಡೆಸಿರುವ ಚುನಾವಣಾ ಅಶ್ವಮೇಧ ಯಾಗದಲ್ಲಿ ರಾಜ್ಯದ ಹಲವು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಪಡೆದಿದೆ. ಅದರಲ್ಲೂ ಪಕ್ಷದ ಯುವ ನಾಯಕ ಹಾಗೂ ಸಿಎಂ ಬಿ.ಎಸ್​. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಚುನಾವಣೆಯ ಉಸ್ತುವಾರಿ ವಹಸಿಕೊಂಡರೆ ಬಿಜೆಪಿಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ಮಾತು ಕಮಲ ಪಾಳಯದಲ್ಲಿ ಜೋರಾಗಿ ರೌಂಡ್ಸ್​ ಹೊಡೀತಿದೆ.

ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕಾರಣ ವಿಜಯೇಂದ್ರ ಉಸ್ತುವಾರಿಗೆ ದುಂಬಾಲು! ಇದೀಗ, ಮಸ್ಕಿ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ವಹಿಸಬೇಕು ಎಂದು ಬಿಜೆಪಿಯ ಸಂಭವನೀಯ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಸ್ಕಿ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕಾರಣ ವಿಜಯೇಂದ್ರ ಅವರನ್ನೇ ಉಸ್ತುವಾರಿ ಮಾಡಿ ಎಂದು ನಿಯೋಗದ ಮೂಲಕ ಬಂದು ಸಿಎಂಗೆ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪ್ರತಾಪಗೌಡ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ, ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರತಾಪಗೌಡ ಪಾಟೀಲ್​ಗೆ ಸಿಎಂ ಭರವಸೆ ಕೊಟ್ಟಿದ್ದಾರೆ.

Published On - 1:37 pm, Tue, 10 November 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!