AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ಹತ್ಯೆ: ಕಾರ್ಯಕರ್ತರ ಆಕ್ರೋಶ, ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬಿಜೆಪಿ ಕಾರ್ಯಕರ್ತ ಪ್ರವೀಣ ಹತ್ಯೆ ಹಿನ್ನೆಲೆ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಜನಸಮಾವೇಶವನ್ನು ರದ್ದುಗೊಳಿಸಲಾಗಿದೆ.

ಪ್ರವೀಣ್ ಹತ್ಯೆ: ಕಾರ್ಯಕರ್ತರ ಆಕ್ರೋಶ, ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 28, 2022 | 6:59 AM

Share

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿ ಮೂರು ವರ್ಷಗಳು ತುಂಬಿರುವ ನಡುವಲ್ಲೇ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಹತ್ಯೆ (Praveen Murder) ಸರ್ಕಾರಕ್ಕೆ ಆಘಾತ ನೀಡಿತ್ತು. ಅಲ್ಲದೆ, ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದ ರಾಜ್ಯ ಬಿಜೆಪಿ ಸರ್ಕಾರ, ಇಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಕೂಡ ರದ್ದುಗೊಳಿಸಿದೆ. ಈ ಬಗ್ಗೆ ಮಧ್ಯರಾತ್ರಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪ್ರವೀಣ್ ಅವರ ಹತ್ಯೆ ಸಂದರ್ಭದಲ್ಲಿ ಕಾರ್ಯಕ್ರಮ ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದರು.

ಹತ್ಯೆ ನಡುವೆ ಕಾರ್ಯಕ್ರಮ ನಡೆಸಿದರೆ ಕಾರ್ಯಕರ್ತರ ಕೆಂಗಣ್ಣಿಗೆ ಮತ್ತಷ್ಟು ಗುರಿಯಾಗಬೇಕಾಗುತ್ತದೆ ಎಂಬ ಭಯ ರಾಜ್ಯ ಬಿಜೆಪಿ ನಾಯಕರಲ್ಲಿ ಹುಟ್ಟಿಕೊಂಡಿದೆ. ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಗಲಾಟೆ ಗದ್ದಲವೆಬ್ಬಿಸುವ ಆತಂಕವಿತ್ತು. ಇದೇ ಕಾರಣಕ್ಕೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳಿಂದ ತಿಳಿದುಬಂದಿದೆ.

ಪ್ರವೀಣನ ಹತ್ಯೆ ಸುದ್ದಿ ಬಂದ ಮೇಲೆ ಸಾಕಷ್ಟು ನೋವು, ಕಳವಳ ನನ್ನೊಳಗೆ ಆಗಿತ್ತು. ಪೊಲೀಸರಿಗೆ ಕೊಡಬೇಕಾದ ಎಲ್ಲಾ ಸೂಚನೆಗಳನ್ನ ಕೊಟ್ಟಿದ್ದೇನೆ. ಅಮಾಯಕ ಯುವಕನನ್ನ ಯೋಜನಾಬದ್ಧವಾಗಿ ಹತ್ಯೆಗೈದಿದ್ದು ಖಂಡನೀಯ, ಮಾತಿನಲ್ಲಿ ಖಂಡನೆಗಿಂದ ನಮ್ಮ ಮನಸ್ಸಿನಲ್ಲಿ‌ ಖಂಡನೆಯಿದೆ. ನಾಳೆ ಸರ್ಕಾರಕ್ಕೆ ಒಂದು ವರ್ಷ ಹಾಗೂ ಯಡಿಯೂರಪ್ಪನವರ ಸರ್ಕಾರಕ್ಕೆ ಎರಡು ವರ್ಷ ಆಗಲಿದ್ದು, ಒಟ್ಟು ಮೂರು ವರ್ಷಗಳ ಸಾಧನೆ ಜನರಿಗೆ ತೋರಿಸುವ ನಿಟ್ಟಿನಲ್ಲ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಡೀ ದಿನ ಅದೇ ಕಾರ್ಯಕ್ರಮದಲ್ಲಿದ್ದೆ ಎಂದರು.

ಪ್ರವೀಣನ ಹತ್ಯೆಯಾದ ಹಾಗೂ ಕಾರ್ಯಕರ್ತನ ತಾಯಿ ನೋವಿನಲ್ಲಿದ್ದಾಗ ಕಾರ್ಯಕ್ರಮ ನಡೆಸುವುದು ಸೂಕ್ತವಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಹಾಗೂ ವಿಧಾನಸೌಧದಲ್ಲಿ‌ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿದ್ದ, ಉತ್ಸುಕರಾಗಿದ್ದ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ. ಆದರೆ ಜನರಿಗಾಗಿ ಉದ್ದೇಶಿಸಲಾಗಿದ್ದ ಯೋಜನೆಗಳನ್ನ ನಾನು ಪ್ರಕಟಿಸಲಿದ್ದೇನೆ ಎಂದರು.

ಇದು ಕೋಮುದಂಗೆ, ಅಶಾಂತಿ ಸೃಷ್ಟಿಸುವ ಹುನ್ನಾರವಾಗಿದೆ. ಇದು ಕೇವಲ ಕರ್ನಾಟಕ ಮಾತ್ರವಲ್ಲ, ಕೇರಳಾ, ಉತ್ತರ ಪ್ರದೇಶ ಸೇರಿದಂತೆ ದೇಶದ್ಯಾಂತ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ 22ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ದುರ್ದೈವಿವೆಂದರೆ ಹತ್ಯೆಗೈದ ಸಂಘಟನೆಗಳ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ಕೂಡ ಹಿಂಪಡೆಯಲಾಯಿತು. ಅದರಿಂದಲೇ ಆ ತರಹದ ಸಂಘಟನೆಗಳಿಗೆ ಬಲ ಬಂದಂತಾಗಿದೆ. ಇಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿಯೇ ಒಂದು ವಿಶೇಷ ತರಬೇತಿ ಇರುವ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ರಚನೆಗೆ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ ಸಿಎಂ ಬೊಮ್ಮಾಯಿ, ದುಷ್ಕೃತ್ಯ ಎಸಗುತ್ತಿರುವ ಸಂಘಟನೆಗಳನ್ನ ನಿಷೇಧಿಸಲು ತನ್ನದೇ ಆದ ಕಾನೂನಿದೆ. ಈಗಾಗಲೇ ಆ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದರು.

ನನಗೆ ನನ್ನ ಕಾರ್ಯಕರ್ತನ ಹಾಗೂ ಪ್ರತೀ ಸಾರ್ವಜನಿಕನ ಜೀವವೂ ಅಗತ್ಯ. ದುಷ್ಕ್ರೃತ್ಯವೆಸಗುವವರ ಪಾಪದ ಕೊಡ ತುಂಬಿದೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮವವನ್ನ ನೀವೂ ನೋಡಲಿದ್ದೀರಿ. ನಾನು ಯುವಜನತೆಯ ಆಕ್ರೋಶವನ್ನ ಅರ್ಥ ಮಾಡಿಕೊಳ್ಳುತ್ತೇನೆ. ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗುವ ಭರವಸೆ ನೀಡುತ್ತೇನೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ‌ ಗಲಭೆ, ಪಾದರಾಯನಪುರ ಗಲಾಟೆ, ಮಂಗಳೂರು ಗಲಭೆ ಸಂದರ್ಭದಲ್ಲಿ ನಾನು ಗೃಹ ಸಚಿವನಾಗಿದ್ದೆ. ಆಗಲೂ ಕೂಡ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಿದೆ. ಪ್ರವೀಣನ ಹತ್ಯೆ ಪ್ರಕರಣದಲ್ಲಿಯೂ ಶಿಕ್ಷೆಯಾಗಲಿದೆ ಎಂದರು.

ನಡ್ಡಾ, ಅರುಣ್ ಸಿಂಗ್ ರಾಜ್ಯ ಭೇಟಿ ರದ್ದು

ಇಂದು ನಿಗದಿಯಾಗಿದ್ದ ಜನೋತ್ಸವ ಸಮಾವೇಶ ರದ್ದು ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಕರ್ನಾಟಕ ರಾಜ್ಯ ಭೇಟಿ ರದ್ದುಗೊಳಿಸಲಾಗಿದೆ.

Published On - 6:41 am, Thu, 28 July 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ