AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಚಿಕ್ಕಮಗಳೂರಿನ ಹಿಂದೂ ಪರ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್​ಗೆ ಕರೆ ನೀಡಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗೆ ಆಗಮನಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಂಘಟನೆಗಳು ಮನವಿ ಮಾಡಿವೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೊಪ್ಪ ಪಟ್ಟಣ ಬಂದ್​​ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು
ಕೊಪ್ಪ ಬಂದ್​ಗೆ ಕರೆ ಮತ್ತು ಕೊಲೆಯಾದ ಪ್ರವೀಣ್ ನೆಟ್ಟಾರು
TV9 Web
| Updated By: Rakesh Nayak Manchi|

Updated on:Jul 28, 2022 | 8:01 AM

Share

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲೂ ನಮ್ಮದೇ ಸರ್ಕಾರದ ಇದ್ದಾಗಲೂ ಕಾರ್ಯಕರ್ತರಿಗೆ ಈ ದುಸ್ಥಿತಿ ಬಂದರೆ ಹೇಗೆ ಎಂದು ಬಿಜೆಪಿ ಸರ್ಕಾರವನ್ನೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಹತ್ಯೆ ಖಂಡಿಸಿ ನಿನ್ನೆ ಸುಳ್ಯ ತಾಲೂಕು, ಪುತ್ತೂರು ಸೇರಿದಂತೆ ಹಲವೆಡೆ ಅಘೋಷಿತ ಬಂದ್ ನಡೆಸಲಾಗಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣ ಬಂದ್ (Koppa Town Bandh)​​ಗೆ ಕರೆ ನೀಡಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆಗೆ ಕಾಫಿನಾಡಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಹತ್ಯೆ ಖಂಡಿಸಿ‌ ಹಾಗೂ ಸೂಕ್ತ ನ್ಯಾಯಕ್ಕೆ ಆಗ್ರಹಿಸುತ್ತಿರುವ ಕೊಪ್ಪ ಪಟ್ಟಣದ ವಿವಿಧ ಹಿಂದೂ ಸಂಘಟನೆಗಳು ಇಂದು ಬಂದ್​ಗೆ ಕರೆ ನೀಡಿವೆ. ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಅಲ್ಲದೆ ಪ್ರತಿಭಟನೆ ನಡೆಸಲು ಮುಂದಾಗಿರುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ವಿರುದ್ಧ ಸಿಡಿದೆದ್ದ ನೆಲಮಂಗಲದ ಕಾರ್ಯಕರ್ತರು

ಬೆಂಗಳೂರು: ಪ್ರವೀಣ್ ಹತ್ಯೆಗೆ ಗ್ರಾಮಾಂತರ ಜಿಲ್ಲೆಯಲ್ಲೂ ಖಂಡನೆ, ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಸ್ವತಃ ಕಾರ್ಯಕರ್ತರೇ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನೆಲಮಂಗಲದ ಬಜರಂಗದಳ, ಸರ್ಕಾರದ ಜನೋತ್ಸವ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಧರಿಸಿ ಬರುವಂತೆ ಕರೆ ನೀಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್​ಗಳನ್ನು ಹಂಚಿಕೊಂಡು ವೈರಲ್ ಮಾಡಿತ್ತು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದ ಬಿಜೆಪಿ ನಾಯಕರು ಇನ್ನಷ್ಟು ಮುಜುಗರಕ್ಕೆ ಎಡೆಮಾಡಿಕೊಡುವುದು ಬೇಡ ಎಂದು ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ.

ಅಸಮರ್ಥ ನಾಯಕರಿಂದ ಕಾರ್ಯಕರ್ತನ ಕೊಲೆ

ಯಾದಗಿರಿ: ಯುವ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸ್ವಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ಸದಸ್ಯರು ಆಕ್ರೋಶಗೊಂಡಿದ್ದಾರೆ. ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರವೀಣ್​ಗೆ ಶ್ರದ್ಧಾಂಜಲಿ ಕಾರ್ಯಕ್ರವನ್ನು ಹಮ್ಮಿಕೊಂಡು ಕಾರ್ಯಕರ್ತರು, ನಗರಸಭೆ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು. ಈ ವೇಳೆ ಸ್ವಪಕ್ಷದ ನಾಯಕರ ವಿರುದ್ಧ ಕೆಂಡಾಮಂಡಲರಾದ ನಗರಸಭೆ ಸದಸ್ಯ ಅಂಬಯ್ಯ ಶಾಬಾದಿ, ನಮ್ಮ ಅಸಮರ್ಥ ನಾಯಕರಿಂದ ನಮ್ಮ ನಿಷ್ಠಾವಂತ ಕಾರ್ಯಕರ್ತನ ಕೊಲೆಯಾಗಿದೆ. ನಮ್ಮ ಅಸಮರ್ಥ ನಾಯಕರಿಂದ ನಾವು ನೋವು ಅನುಭವಿಸುತ್ತಿದ್ದೇವೆ ಎಂದರು. ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರವೀಣ್ ನಿವಾಸಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆ ಇಂದು ಮೃತ ಪ್ರವೀಣ್ ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ ಸಾಂತ್ವಾನ ಹೇಳಲಿದ್ದಾರೆ. ಮಧ್ಯಾಹ್ನದ ವೇಳೆಗೆ ಬೆಳ್ಳಾರೆಗೆ ವಿಜಯೇಂದ್ರ ಅವರು ತಲುಪಲಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ನಾಯಕರು, ಶಾಸಕರು ಕೂಡ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಸಾಧ್ಯತೆ ಇದೆ.

Published On - 7:46 am, Thu, 28 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ