AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ

ಎನ್​ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ
ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: prajavani.net
ಗಣಪತಿ ಶರ್ಮಾ
|

Updated on:Feb 23, 2023 | 1:33 PM

Share

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಕಮ್ಯುನಿಟಿ ಹಾಲ್​ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಇಡುಕ್ಕಿ ಗ್ರಾಮದಲ್ಲಿರುವ ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರ ಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್​ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್ಐಎ ಸಂಪೂರ್ಣ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಈ ವಿಚಾರವಾಗಿ ಆದೇಶದ ಪ್ರತಿಯನ್ನು ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಕಳುಹಿಸಲಾಗಿದೆ ಎಂದು ಎನ್​ಐಎ ಅಧಿಕೃತ ಮೂಲಗಳು ‘ಟಿವಿ9’ಗೆ ತಿಳಿಸಿವೆ.

ಎನ್​ಐಎ ವಶದಲ್ಲಿರುವ ಜಾಗವನ್ನು ಪರಭಾರೆ ಮಾಡುವಂತಿಲ್ಲ. ಬಾಡಿಗೆ, ಭೋಗ್ಯಕ್ಕೆ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ವಸ್ತುಗಳನ್ನು ಸಾಗಿಸುವುದು ಅಥವಾ ನವೀಕರಿಸುವುದನ್ನು ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಿಎಫ್​ಐ ತಂಡಗಳಿಗೆ ಈ ಕಮ್ಯುನಿಟಿ ಹಾಲ್​ನಲ್ಲಿ ಭಯೋತ್ಪಾದಕ ತರಬೇತಿ ನೀಡಲಾಗುತ್ತಿತ್ತು ಎಂಬ ಆರೋಪವಿದೆ.

ಇದನ್ನೂ ಓದಿ: Praveen Nettar: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಎನ್​ಐಎ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಅನೇಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಮಧ್ಯೆ, ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್​ಡಿಪಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದು ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿತ್ತು.

ಈ ಮಧ್ಯೆ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಕಳೆದ ತಿಂಗಳು ಎನ್​ಐಎ ಘೋಷಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Thu, 23 February 23

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ