AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ

ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ
ಪ್ರವೀನ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ಎನ್​ಐಎ ದಾಳಿ
TV9 Web
| Edited By: |

Updated on:Jun 27, 2023 | 4:43 PM

Share

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳವಾರವಷ್ಟೇ ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ದಾಳಿ ನಡೆಸಿದ್ದ ಎನ್​ಐಎ ತಂಡ ಇದೀಗ ಬಂಟ್ವಾಳ ತಾಲೂಕಿನಲ್ಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಹತ್ಯೆ ಪ್ರಕರಣದ ತೀವ್ರ ವಿಚಾರಣೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳ ತಂಡ, ಎಸ್​ಡಿ‌ಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಬೆಳ್ಳಂಬೆಳಗ್ಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ಮನೆ ಬಾಗಿಲು ತಟ್ಟಿದ ಎನ್​ಐಎ ಅಧಿಕಾರಿಗಳು, ರಿಯಾಜ್ ಮೊಬೈಲ್ ವಶಕ್ಕೆ ಪಡೆದು ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣ ಸಂಬಂಧ ಮಂಗಳವಾರ ಬೆಳಗ್ಗೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ 32 ಕಡೆಗಳಿಗೆ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು.

ಕಾರ್ಯಕರ್ತರಿಂದ ಗೋಬ್ಯಾಕ್ ಎನ್​ಐಎ ಘೋಷಣೆ

ರಿಯಾಜ್ ಪರಂಗೀಪೇಟೆ ಮನೆಗೆ ದಾಳಿ ವಿಚಾರ ಸಂಬಂಧ ಸ್ಥಳೀಯ ಎಸ್​ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಎನ್​ಐಎ ಘೋಷಣೆ ಕೂಗುತ್ತಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಬಂಟ್ವಾಳ ಪೊಲೀಸರು ಭದ್ರತೆ ನೀಡಿದ್ದಾರೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಜುಲೈ‌ 26 ರಂದು ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯು ಇಡೀ ರಾಜ್ಯವೇ ದಂಗಾಗುವಂತೆ ಹಾಗೂ ಕರ್ನಾಟಕದ ಬಿಜೆಪಿ ಸರ್ಕಾರದ ಬುಡ ಅಲುಗಾಡಿಸಿತ್ತು. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ಸಚಿವ ಎಸ್. ಅಂಗಾರ ವಿರುದ್ಧ ಕಾರ್ಯಕರ್ತರು ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಕಾರ್ಯಕರ್ತರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರದ ಕಠಿಣ ಕ್ರಮದ ಹೇಳಿಕೆಯನ್ನು ಟೀಕಿಸಿದರು, ಯುವ ಮೂರ್ಚಾದ ಮುಖಂಡರು ರಾಜೀನಾಮೆಯ ಬಿಸಿ ತಟ್ಟಿಸಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 am, Thu, 8 September 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!