AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಎಂಬವರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಎಡಿಜಿಪಿ ಅಲೋಕ್ ಕುಮಾರ್
TV9 Web
| Updated By: Rakesh Nayak Manchi|

Updated on:Jul 28, 2022 | 1:33 PM

Share

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಎಂಬವರನ್ನು ಬಂಧಿಸಲಾಗಿದೆ ಎಂದರು. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, ಬಂಧಿತ ಆರೋಪಿಗಳಿಬ್ಬರು ಕೂಡ ಬೆಳ್ಳಾರೆಯವರಾಗಿದ್ದಾರೆ. ಬಂಧಿತರಿಗಿರುವ ಸಂಘಟನೆಗಳ ಲಿಂಕ್​ ಸೇರಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳ ಸದಸ್ಯರು ಸೇರಿದಂತೆ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಸ್ಥಳೀಯ ಇಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ.

ಬಂಧಿತ ಆರೋಪಿಗಳ ಪೈಕಿ ಓರ್ವ ಪ್ರಕರಣ ನಡೆಯುವ ಮೊದಲು ಮತ್ತು ನಂತರ ಅಲ್ಲೇ ಓಡಾಡಿದ್ದನು. ಸಿಸಿಟಿವಿ ಆಧಾರದ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಂತಕರಿಗೆ ಪೂರ್ವಾಪರ ಮಾಹಿತಿ ನೀಡಿದ ಬಗ್ಗೆ ತಿಳಿದುಬಂದಿದೆ. ಬಂಧಿತ ಮತ್ತೋರ್ವ ಆರೋಪಿ ಮೇಲೆ ಟೆಲಿಗ್ರಾಮ್ ಕರೆ ಆರೋಪ ಇದೆ. ವಿದೇಶದಲ್ಲಿರುವ ವ್ಯಕ್ತಿಯ ಜೊತೆ ಮಾತುಕತೆ ನಡೆಸಲಾಗಿದ್ದು, ವಿದೇಶದಿಂದ ಈ ಕೃತ್ಯಕ್ಕೆ ಯೋಜನೆ ರೂಪಿಸಿರುವ ಸಾಧ್ಯತೆ ಇದೆ. ಹೀಗಾಗಿ ವಿಚಾರಣೆಯನ್ನು ಇನ್ನಷ್ಟು ಆಳಕ್ಕೆ ಕೊಂಡೊಯ್ಯಲಾಗಿದೆ.

ತನಿಖೆಯ ಪ್ರಗತಿ ಬಗ್ಗೆ ಸಿಎಂ ಗಮನಕ್ಕೆ ತಂದ ಡಿಜಿ ಐಜಿಪಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿ ಬಗ್ಗೆ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಹತ್ಯೆ ಸಂಬಂಧ ಇಬ್ಬರ ಬಂಧನವಾಗಿರುವ ಮಾಹಿತಿಯನ್ನು ಗಮನಕ್ಕೆ ತಂದಿದ್ದಾರೆ.

Published On - 1:21 pm, Thu, 28 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ