ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ […]

ಚಿತ್ರದುರ್ಗದ ಗರ್ಭಿಣಿಗೆ ಕೊರೊನಾ, ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರು
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 11, 2020 | 4:22 PM

ಬೆಂಗಳೂರು: ಚಿತ್ರದುರ್ಗದಿಂದ ಬಂದಿದ್ದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಗರ್ಭಿಣಿಯ ಸಂಪರ್ಕದಲ್ಲಿದ್ದ 8 ವೈದ್ಯರು, 8 ನರ್ಸ್​ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.

ಚಿತ್ರದುರ್ಗ ಮೂಲದ ಗರ್ಭಿಣಿ ಜೂ. 8ರಂದು ರಾತ್ರಿ ಕೆ.ಸಿ. ಜನರಲ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ನಿನ್ನೆ ಸ್ವ್ಯ‍ಾಬ್ ರಿಪೋರ್ಟ್‌ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಇದೀಗ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ಮಧ್ಯೆ ಮಹಿಳೆಗೆ ಅಬಾರ್ಶನ್ ಆಗಿದೆ.

Published On - 4:05 pm, Thu, 11 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us