AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಕ್ವಾರಂಟೈನ್​ ಕೇಂದ್ರದಲ್ಲಿ ಗರ್ಭಿಣಿಯರ ಗೋಳಾಟ.. ಊಟದಲ್ಲಿ ಹುಳು, ಮಾತ್ರೆ ತಿಂದ್ರೆ ಹೊಟ್ಟೆ ನೋವು, ಸ್ವಚ್ಛತೆ ಇಲ್ಲವೇ ಇಲ್ಲ

ರಾಮನಗರದ ಸುಗ್ನಳ್ಳಿ ಆಯುಷ್ ತರಬೇತಿ ಕೇಂದ್ರದಲ್ಲಿ ಈ ತೆರನಾದ ಸಮಸ್ಯೆಗಳು ತಲೆದೋರಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗುತ್ತೇವೆಂದು ಮನವಿ ಮಾಡಿದರೂ ಬಿಡದೇ ಕ್ವಾರಂಟೈನ್​ ಕೇಂದ್ರಗಳಿಗೆ ಕರೆತಂದು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಗರ್ಭಿಣಿಯರು ಅಳಲು ತೋಡಿಕೊಂಡಿದ್ದಾರೆ.

ರಾಮನಗರ ಕ್ವಾರಂಟೈನ್​ ಕೇಂದ್ರದಲ್ಲಿ ಗರ್ಭಿಣಿಯರ ಗೋಳಾಟ.. ಊಟದಲ್ಲಿ ಹುಳು, ಮಾತ್ರೆ ತಿಂದ್ರೆ ಹೊಟ್ಟೆ ನೋವು, ಸ್ವಚ್ಛತೆ ಇಲ್ಲವೇ ಇಲ್ಲ
ಪ್ರಾತಿನಿಧಿಕ ಚಿತ್ರ
Skanda
| Updated By: ಆಯೇಷಾ ಬಾನು|

Updated on: Apr 16, 2021 | 8:48 AM

Share

ರಾಮನಗರ: ರಾಜ್ಯದಲ್ಲಿ ಕೊರೊನಾ ವೈರಾಣು ಎರಡನೇ ಅಲೆ ತೀವ್ರತೆ ಹೆಚ್ಚುತ್ತಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಕೆಲ ದಿನಗಳಿಂದ ಹೆಚ್ಚು ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದು, ಕೆಲವೆಡೆ ಸೋಂಕಿತರು ಸರಿಯಾದ ಸೌಲಭ್ಯ ಸಿಗದೇ ಪರದಾಡುತ್ತಿದ್ದಾರೆ. ರಾಮನಗರದ ಕ್ವಾರಂಟೈನ್​ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ಊಟ ಸಿಗದೆ ಗರ್ಭಿಣಿಯರು ಪರದಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಕ್ವಾರಂಟೈನ್ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿರುವುದು ಗೊತ್ತಾಗಿದೆ.

ರಾಮನಗರದ ಸುಗ್ನಳ್ಳಿ ಆಯುಷ್ ತರಬೇತಿ ಕೇಂದ್ರದಲ್ಲಿ ಈ ತೆರನಾದ ಸಮಸ್ಯೆಗಳು ತಲೆದೋರಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗುತ್ತೇವೆಂದು ಮನವಿ ಮಾಡಿದರೂ ಬಿಡದೇ ಕ್ವಾರಂಟೈನ್​ ಕೇಂದ್ರಗಳಿಗೆ ಕರೆತಂದು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಗರ್ಭಿಣಿಯರು ಅಳಲು ತೋಡಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಊಟವೂ ಇಲ್ಲ, ಶೌಚಾಲಯಗಳೂ ಸರಿಯಾಗಿಲ್ಲವೆಂದು ಗರ್ಭಿಣಿಯರು ಸಂಕಷ್ಟ ವ್ಯಕ್ತಪಡಿಸಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿರುವ ಸುಮಾರು 30 ಸೋಂಕಿತರು ಸಹ ಈ ಸಮಸ್ಯೆ ಬಗ್ಗೆ ಆಕ್ರೋಶ ಹೊರಹಾಕಿದ್ದು, ನಮಗೆ ಕೊರೊನಾ ಲಕ್ಷಣವಿಲ್ಲದಿದ್ದರೂ ಕ್ವಾರೆಂಟೈನ್ ಮಾಡಿದ್ದಾರೆಂದು ದೂರಿದ್ದಾರೆ. ಅಲ್ಲದೇ, ಯುಗಾದಿ ಹಬ್ಬ ಆಚರಣೆ ಮಾಡೋಕೆ ಅವಕಾಶ ಕೊಟ್ಟಿಲ್ಲ. ನಿನ್ನೆ ಊಟದಲ್ಲಿ ಹುಳು ಸಿಕ್ಕಿದೆ. ವೈದ್ಯರು ಕೊಟ್ಟಿರೋ ಮಾತ್ರೆ ಸೇವಿಸಿದ್ರೆ ಹೊಟ್ಟೆನೋವು, ತಲೆನೋವು ಬರ್ತಿದೆ. ಕಳೆದ 5 ದಿನಗಳಿಂದಲೂ ಆಯುಷ್ ತರಬೇತಿ ಕೇಂದ್ರಲ್ಲಿ ಕ್ವಾರೆಂಟೈನ್ ಆಗಿದ್ದೇವೆ. ನಮ್ಮ ಗೋಳು ಕೇಳೋರಿಲ್ಲ ಅಂತ ಒದ್ದಾಡುತ್ತಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ? 

ಕಲಬುರಗಿಯಲ್ಲಿ ರೆಮ್‌ಡಿಸಿವಿರ್ ಇಂಜೆಕ್ಷನ್ ಸಿಗ್ತಾಯಿಲ್ಲಾ.. ಸೋಂಕಿತರ ಅಳಲು; ಆದ್ರೆ ಇದು ಸತ್ಯಕ್ಕೆ ದೂರ ಎಂದ ಸಚಿವರು

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು