AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಕ್ವಾರಂಟೈನ್​ ಕೇಂದ್ರದಲ್ಲಿ ಗರ್ಭಿಣಿಯರ ಗೋಳಾಟ.. ಊಟದಲ್ಲಿ ಹುಳು, ಮಾತ್ರೆ ತಿಂದ್ರೆ ಹೊಟ್ಟೆ ನೋವು, ಸ್ವಚ್ಛತೆ ಇಲ್ಲವೇ ಇಲ್ಲ

ರಾಮನಗರದ ಸುಗ್ನಳ್ಳಿ ಆಯುಷ್ ತರಬೇತಿ ಕೇಂದ್ರದಲ್ಲಿ ಈ ತೆರನಾದ ಸಮಸ್ಯೆಗಳು ತಲೆದೋರಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗುತ್ತೇವೆಂದು ಮನವಿ ಮಾಡಿದರೂ ಬಿಡದೇ ಕ್ವಾರಂಟೈನ್​ ಕೇಂದ್ರಗಳಿಗೆ ಕರೆತಂದು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಗರ್ಭಿಣಿಯರು ಅಳಲು ತೋಡಿಕೊಂಡಿದ್ದಾರೆ.

ರಾಮನಗರ ಕ್ವಾರಂಟೈನ್​ ಕೇಂದ್ರದಲ್ಲಿ ಗರ್ಭಿಣಿಯರ ಗೋಳಾಟ.. ಊಟದಲ್ಲಿ ಹುಳು, ಮಾತ್ರೆ ತಿಂದ್ರೆ ಹೊಟ್ಟೆ ನೋವು, ಸ್ವಚ್ಛತೆ ಇಲ್ಲವೇ ಇಲ್ಲ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Apr 16, 2021 | 8:48 AM

Share

ರಾಮನಗರ: ರಾಜ್ಯದಲ್ಲಿ ಕೊರೊನಾ ವೈರಾಣು ಎರಡನೇ ಅಲೆ ತೀವ್ರತೆ ಹೆಚ್ಚುತ್ತಿದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಕೆಲ ದಿನಗಳಿಂದ ಹೆಚ್ಚು ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿದ್ದು, ಕೆಲವೆಡೆ ಸೋಂಕಿತರು ಸರಿಯಾದ ಸೌಲಭ್ಯ ಸಿಗದೇ ಪರದಾಡುತ್ತಿದ್ದಾರೆ. ರಾಮನಗರದ ಕ್ವಾರಂಟೈನ್​ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ಊಟ ಸಿಗದೆ ಗರ್ಭಿಣಿಯರು ಪರದಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಕ್ವಾರಂಟೈನ್ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿರುವುದು ಗೊತ್ತಾಗಿದೆ.

ರಾಮನಗರದ ಸುಗ್ನಳ್ಳಿ ಆಯುಷ್ ತರಬೇತಿ ಕೇಂದ್ರದಲ್ಲಿ ಈ ತೆರನಾದ ಸಮಸ್ಯೆಗಳು ತಲೆದೋರಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗುತ್ತೇವೆಂದು ಮನವಿ ಮಾಡಿದರೂ ಬಿಡದೇ ಕ್ವಾರಂಟೈನ್​ ಕೇಂದ್ರಗಳಿಗೆ ಕರೆತಂದು ನಿರ್ಲಕ್ಷ್ಯ ತೋರುತ್ತಿರುವುದಕ್ಕೆ ಗರ್ಭಿಣಿಯರು ಅಳಲು ತೋಡಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಊಟವೂ ಇಲ್ಲ, ಶೌಚಾಲಯಗಳೂ ಸರಿಯಾಗಿಲ್ಲವೆಂದು ಗರ್ಭಿಣಿಯರು ಸಂಕಷ್ಟ ವ್ಯಕ್ತಪಡಿಸಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿರುವ ಸುಮಾರು 30 ಸೋಂಕಿತರು ಸಹ ಈ ಸಮಸ್ಯೆ ಬಗ್ಗೆ ಆಕ್ರೋಶ ಹೊರಹಾಕಿದ್ದು, ನಮಗೆ ಕೊರೊನಾ ಲಕ್ಷಣವಿಲ್ಲದಿದ್ದರೂ ಕ್ವಾರೆಂಟೈನ್ ಮಾಡಿದ್ದಾರೆಂದು ದೂರಿದ್ದಾರೆ. ಅಲ್ಲದೇ, ಯುಗಾದಿ ಹಬ್ಬ ಆಚರಣೆ ಮಾಡೋಕೆ ಅವಕಾಶ ಕೊಟ್ಟಿಲ್ಲ. ನಿನ್ನೆ ಊಟದಲ್ಲಿ ಹುಳು ಸಿಕ್ಕಿದೆ. ವೈದ್ಯರು ಕೊಟ್ಟಿರೋ ಮಾತ್ರೆ ಸೇವಿಸಿದ್ರೆ ಹೊಟ್ಟೆನೋವು, ತಲೆನೋವು ಬರ್ತಿದೆ. ಕಳೆದ 5 ದಿನಗಳಿಂದಲೂ ಆಯುಷ್ ತರಬೇತಿ ಕೇಂದ್ರಲ್ಲಿ ಕ್ವಾರೆಂಟೈನ್ ಆಗಿದ್ದೇವೆ. ನಮ್ಮ ಗೋಳು ಕೇಳೋರಿಲ್ಲ ಅಂತ ಒದ್ದಾಡುತ್ತಿದ್ದಾರೆ.

ಇದನ್ನೂ ಓದಿ: ಹೋಂ ಕ್ವಾರಂಟೈನ್​ನಲ್ಲಿದ್ದ ಅಕ್ಷಯ್​ ಕುಮಾರ್ ಏಕಾಏಕಿ​ ಆಸ್ಪತ್ರೆಗೆ ದಾಖಲು! ಅವರ ಆರೋಗ್ಯ ಹೇಗಿದೆ? 

ಕಲಬುರಗಿಯಲ್ಲಿ ರೆಮ್‌ಡಿಸಿವಿರ್ ಇಂಜೆಕ್ಷನ್ ಸಿಗ್ತಾಯಿಲ್ಲಾ.. ಸೋಂಕಿತರ ಅಳಲು; ಆದ್ರೆ ಇದು ಸತ್ಯಕ್ಕೆ ದೂರ ಎಂದ ಸಚಿವರು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್