AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಕಾರ್ಮಿಕರನ್ನು ಕೂಡಿ ಹಾಕಿರುವ ಪ್ರಕರಣ: ವೀಡಿಯೋ ಮಾಡಿದ್ದಕ್ಕೆ ಗರ್ಭಿಣಿ ಮೇಲೆ ಹಲ್ಲೆ, ಗರ್ಭಪಾತ

ದಲಿತ ಕಾರ್ಮಿಕರನ್ನು ಕೂಡಿ ಹಾಕಿದ ಸಂದರ್ಭದಲ್ಲಿ ಗರ್ಭಿಣಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಸ್ಥಳದಲ್ಲೇ ಆಕೆಗೆ ಗರ್ಭಪಾತವಾಗಿರುವ ಮನಕಲಕುವ ಘಟನೆ ವರದಿಯಾಗಿದೆ.

ದಲಿತ ಕಾರ್ಮಿಕರನ್ನು ಕೂಡಿ ಹಾಕಿರುವ ಪ್ರಕರಣ: ವೀಡಿಯೋ ಮಾಡಿದ್ದಕ್ಕೆ ಗರ್ಭಿಣಿ ಮೇಲೆ ಹಲ್ಲೆ, ಗರ್ಭಪಾತ
Attack On Dalit Workers
TV9 Web
| Edited By: |

Updated on: Oct 11, 2022 | 4:39 PM

Share

ದಲಿತ ಕಾರ್ಮಿಕರನ್ನು ಕೂಡಿ ಹಾಕಿದ ಸಂದರ್ಭದಲ್ಲಿ ಗರ್ಭಿಣಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಸ್ಥಳದಲ್ಲೇ ಆಕೆಗೆ ಗರ್ಭಪಾತವಾಗಿರುವ ಮನಕಲಕುವ ಘಟನೆ ವರದಿಯಾಗಿದೆ.

ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಕ್ಷನ್ 504, 323, 342 ಸೇರಿದಂತೆ ಎಸ್ಸಿ, ಎಸ್ಟಿ ದೌರ್ಜನ್ಯದ ಅಡಿ ಪ್ರಕರಣ ದಾಖಲು. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳಾದ ಜಗದೀಶ್, ತಿಲಕ್ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆ ಮಾಡಿದ ಹಿನ್ನೆಲೆ ಮಹಿಳೆಗೆ ಗರ್ಭಪಾತವಾಗಿತ್ತು. ತೋಟದ ಮಾಲೀಕ ಜಗದೀಶ್ ಗೌಡ ಎಂಬುವರಿದ ಹಲ್ಲೆ ನಡೆದಿತ್ತು. ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆಯ ಪುರ ಗ್ರಾಮದಲ್ಲಿ ನಡೆದಿದ್ದ ಘಟನೆ ನಡೆದಿದೆ. 6 ಕುಟುಂಬದ 14 ಜನರನ್ನ ಕೊಠಡಿಯಲ್ಲಿ ಕೂಡಿ ಹಾಕಿದ್ದರು ಎನ್ನಲಾಗಿದೆ.

ತೋಟದ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ತೋಟದ ಮಾಲೀಕನಲ್ಲಿ ಮುಂಗಡವಾಗಿ 9 ಲಕ್ಷ ರೂ. ಪಡೆದಿದ್ದರು. ಆದರೆ ಈಗ ಕಾರ್ಮಿಕರು ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಮಾಲೀಕರಲ್ಲಿ ಹೇಳಿದ್ದಾರೆ ಅದಕ್ಕೆ ಮಾಲೀಕ ತನ್ನಿಂದ ಮುಂಗಡವಾಗಿ ಪಡೆದಿರುವ ಹಣವನ್ನು ಹೊಂದಿರುಗಿಸುವಂತೆ ಕಾಂಇರ್ಕರಲ್ಲಿ ಕೇಳಿದ್ದಾರೆ.

ಅದಕ್ಕೆ ಕಾರ್ಮಿಕರು ನಮ್ಮ ಬಳಿ ಸಧ್ಯಕ್ಕೆ ಕೊಡಲು ಹಣವಿಲ್ಲ, ಸ್ವಲ್ಪ ಸಮಯ ನೀಡಿ ಬಳಿಕ ಹಂದಿರುಗಿಸುತ್ತೇವೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ತೋಟದ ಮಾಲೀಕ ದುಡ್ಡು ಕೊಡುವವರೆಗೆ ಇಲ್ಲಿಂದ ಹೋಗುವಹಾಗಿಲ್ಲ ಎಂದು ಕಾರ್ಮಿಕರನ್ನು ಕೂಡಿಹಾಕಿದ್ದರು.

ತೋಟದ ಮಾಲೀಕರ ಜತೆ ಮಾತನಾಡುವ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಮಹಿಳೆ ಗರ್ಭಿಣಿ ಎಂದೂ ನೋಡದೆ ಹಲ್ಲೆ ನಡೆಸಿದ್ದು, ಮಹಿಳೆಗೆ ಗರ್ಭಪಾತವಾಗಿದೆ. ಇದನ್ನು ತಡೆಯಲು ಬಂದವರ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಸಧ್ಯ ಮಹಿಳೆಯು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ