AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಗರ್ಭಿಣಿಯರ ಪರದಾಟ; ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಒತ್ತಾಯ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 2 ತಿಂಗಳಿಂದ ವೈದ್ಯರಿಲ್ಲದೆ ಗರ್ಭಿಣಿಯರು, ರೋಗಿಗಳು ಪರದಾಟ ಪಡುವಂತಾಗಿದೆ. ಇರುವ ನಾಲ್ವರು ನರ್ಸ್ಗಳು ವ್ಯಾಕ್ಸಿನ್, ಕೊವಿಡ್ ಟೆಸ್ಟ್ ಜೊತೆಗೆ ಗರ್ಬಿಣಿಯರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಚಿಕಿತ್ಸೆ ಜೊತೆಗೆ ಎಮರ್ಜೆನ್ಸಿ ಹೆರಿಗೆಗೆ ಬರುವವರಿಗೆ ಹೆರಿಗೆ ಮಾಡಿಸಲಾಗುತ್ತಿಲ್ಲ ಅಂತ ನರ್ಸ್ ಕಣ್ಣೀರು ಹಾಕಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಗರ್ಭಿಣಿಯರ ಪರದಾಟ; ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಒತ್ತಾಯ
ಗರ್ಭಿಣಿ ಮಹಿಳೆಯರು
sandhya thejappa
|

Updated on: May 13, 2021 | 2:40 PM

Share

ದೇವನಹಳ್ಳಿ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಗರ್ಭಿಣಿಯರು ಪರದಾಡುತ್ತಿದ್ದಾರೆ. ಪ್ರತಿನಿತ್ಯ ಹತ್ತಾರು ಹಳ್ಳಿಗಳಿಂದ ಆರೋಗ್ಯ ಕೇಂದ್ರದ ಬರುವ ರೋಗಿಗಳು ವೈದ್ಯರಿಲ್ಲದೆ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ನಾಲ್ಕು ದಾದಿಯರು ಸದ್ಯ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಎಲ್ಲಾ ಕೆಲಸವನ್ನು ದಾದಿಯರು ನಿಭಾಯಿಸಲಾಗದೆ ನರಳಾಟ ಅನುಭವಿಸುತ್ತಿದ್ದಾರೆ.

ಬೆಟ್ಟಹಲಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 2 ತಿಂಗಳಿಂದ ವೈದ್ಯರಿಲ್ಲದೆ ಗರ್ಭಿಣಿಯರು, ರೋಗಿಗಳು ಪರದಾಟ ಪಡುವಂತಾಗಿದೆ. ಇರುವ ನಾಲ್ವರು ನರ್ಸ್ಗಳು ವ್ಯಾಕ್ಸಿನ್, ಕೊವಿಡ್ ಟೆಸ್ಟ್ ಜೊತೆಗೆ ಗರ್ಬಿಣಿಯರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಚಿಕಿತ್ಸೆ ಜೊತೆಗೆ ಎಮರ್ಜೆನ್ಸಿ ಹೆರಿಗೆಗೆ ಬರುವವರಿಗೆ ಹೆರಿಗೆ ಮಾಡಿಸಲಾಗುತ್ತಿಲ್ಲ ಅಂತ ನರ್ಸ್ ಕಣ್ಣೀರು ಹಾಕಿದ್ದಾರೆ.

ಕಳೆದ ರಾತ್ರಿ ಪಾಸಿಟಿವ್ ಬಂದ ಗರ್ಭಿಣಿಗೆ ಹೆರಿಗೆ ಮಾಡಿಸಲು ಪರದಾಡಿದ್ದೇವೆ. ಆಸ್ಪತ್ರೆ ವೈದ್ಯ ಸಾವನ್ನಪ್ಪಿದ ನಂತರ ಯಾವೊಬ್ಬ ವೈದ್ಯರನ್ನು ನೇಮಕ ಮಾಡಿಲ್ಲ. ದಿನದ 24 ಗಂಟೆ ನಾವೆ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲು ಹಲವರಿಗೆ ಪಾಸಿಟಿವ್ ಬಂದಿದೆ ಅಂತ ನರ್ಸ್​ಗಳು ಅಸಮಾಧಾನ ಹೊರಹಾಕಿದ್ದರೆ, ಕೊರೊನಾ ಸಂಕಷ್ಟದ ನಡುವೆ ಗ್ರಾಮಸ್ಥರಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ ಅಂತ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನೇಮಕ ಮಾಡುವಂತೆ ಆಸ್ಪತ್ರೆ ಬಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ₹5 ಸಾವಿರ ಪಿಂಚಣಿ, ಉಚಿತ ಶಿಕ್ಷಣ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಘೋಷಣೆ

ಮಹಾರಾಷ್ಟ್ರದಲ್ಲಿ ಜೂನ್ 1ರವರೆಗೆ ಲಾಕ್​ಡೌನ್ ವಿಸ್ತರಣೆ; ಆರ್​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

(Pregnant women without a doctor at the primary care center are suffering in devanahalli)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ