AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಕುಮಾರಿ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಬಿಜೆಪಿ ನಾಯಕ ರಾಮದಾಸ್​ಗೆ ಹಿನ್ನಡೆ

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರೇಮಕುಮಾರಿ ಹಾಗೂ ರಾಮದಾಸ್​ ಪ್ರಕರಣ ಮತ್ತೆ ಸುದ್ದಿಯಾಗಿದೆ. ಪ್ರೇಮಕುಮಾರಿ ಪ್ರಕರಣದಲ್ಲಿ ಸುಪ್ರೀಕೋರ್ಟ್​ ಮೊರೆ ಹೋಗಿದ್ದ ಮಾಜಿ ಸಚಿವ ಎಸ್​.ಎ. ರಾಮದಾಸ್​ಗೆ ಹಿನ್ನಡೆಯಾಗಿದೆ. ಇದರಿಂದ ರಾಮದಾಸ್​ಗೆ ನಿರಾಸೆಯಯಾಗಿದೆ.

ಪ್ರೇಮಕುಮಾರಿ ಪ್ರಕರಣ: ಸುಪ್ರೀಂಕೋರ್ಟ್ ನಲ್ಲಿ ಬಿಜೆಪಿ ನಾಯಕ ರಾಮದಾಸ್​ಗೆ ಹಿನ್ನಡೆ
TV9 Web
| Edited By: |

Updated on: Sep 07, 2023 | 8:55 AM

Share

ಮೈಸೂರು, ಸೆಪ್ಟೆಂಬರ್ 07): ಪ್ರೇಮಕುಮಾರಿ ಪ್ರಕರಣದಲ್ಲಿ ಮಾಜಿ ಸಚಿವ ಎಸ್‌.ಎ. ರಾಮದಾಸ್​ಗೆ(SA Ramdas) ಸುಪ್ರೀಂಕೋರ್ಟ್ ನಲ್ಲಿ(supreme court) ಹಿನ್ನಡೆಯಾಗಿದೆ. ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್​​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ. ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.

ಮಾಜಿ ಸಚಿವ ರಾಮದಾಸ್ ನನ್ನನ್ನು ಮದುವೆಯಾಗುವ ನಾಟಕವಾಡಿ ದೈಹಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ. ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ಕೊಲೆ ಬೆದರಿಯೊಡಿದ್ದರು ಎಂದು ಪ್ರೇಮಕುಮಾರಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರಿನಲ್ಲಿ ವಂಚನೆ, ಬೆದರಿಕೆ, ಕೊಲೆ ಯತ್ನ ಸೇರಿ ಹಲವು ಆರೋಪ ಮಾಡಿದ್ದರು.

ಇದಕ್ಕೆ ಪ್ರತಿಯಾಗಿ ರಾಮದಾಸ್ ಕೂಡ ಪ್ರೇಮಕುಮಾರಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ದೂರು ದಾಖಲಿಸಿದ್ದು, ತಮ್ಮನ್ನು ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಆರೋಪಿದ್ದರು.

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು