ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶ: ನೆಲ ಕಚ್ಚಿದ ಬೆಳೆ ನೋಡಿ ಕಣ್ಣೀರಿಟ್ಟ ಅನ್ನದಾತರು
ನೆಲ ಕಚ್ಚಿರುವ ಬೆಳೆ ನೋಡಿ ಕಣ್ಣೀರಿಟ್ಟ ರೈತರು

Updated on: Jan 09, 2021 | 9:18 AM

ಗದಗ: ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿರುವುದರಿಂದ ರೈತರು ಕಣ್ಣೀರಿಡುತ್ತಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಅತಿಯಾದ ಮಳೆಗೆ ಈರುಳ್ಳಿ, ಶೇಂಗಾ ಕೊಳೆತು ಹೋಗಿದೆ. ಈಗ ಅಕಾಲಿಕ ಮಳೆಗೆ ಜೋಳ ಸೇರಿ ಹಲವು ಬೆಳೆಗಳು ನಾಶವಾಗಿವೆ. ಹೀಗಾಗಿ ನಮಗೂ ತಿನ್ನೋಕೆ ಜೋಳ ಇಲ್ಲದಂತಾಯಿತು. ಜೊತೆಗೆ ಜಾನುವಾರುಗಳಿಗೂ ಮೇವಿಲ್ಲದಂತಾಗಿದೆ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.

ಅಕಾಲಿಕ ಭಾರಿ ಮಳೆಗೆ ಅನ್ನದಾತರ ಬದುಕು ಸರ್ವನಾಶವಾಗಿದ್ದು, ತಡ ರಾತ್ರಿ ಸುರಿದ ಬಾರಿ ಮಳೆಗೆ ಅಪಾರ ಪ್ರಮಾಣದ ಜೋಳದ ಬೆಳೆ ನೆಲಕ್ಕುರುಳಿದೆ. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳ, ಕಡಲೆ ಸೇರಿ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ಮುಂಜಾನೆ ತಮ್ಮ ಜಮೀನುಗಳತ್ತ ಓಡಿದ ರೈತರಿಗೆ, ಹೊಲದಲ್ಲಿ ಭೂಮಿ ಕಚ್ಚಿರುವ ಬೆಳೆ ನೋಡಿ ಆಕಾಶವೇ ತಲೆಯ ಮೇಲೆ ಬಿದ್ದಂತ್ತಾಗಿದೆ.

ರಾಜ್ಯದ ಹಲವು ಕಡೆ ಧಾರಾಕಾರ ಮಳೆ: ಬೆಳೆ ನಾಶ

Published On - 9:17 am, Sat, 9 January 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us