AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮದುವೆಗೆ ಸಿದ್ಧತೆ; ಸ್ನೇಹಿತೆಯಿಂದ ನಿಂತ ಬಾಲ್ಯ ವಿವಾಹ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್​ಡೌನ್​ ನಡುವೆ ಹಲವು ಬಾಲ್ಯ ವಿವಾಹಗಳು ನಡೆದುಹೋಗಿವೆ. ಇನ್ನು ಬಾಲ್ಯ ವಿವಾಹದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಹೋದ ಅಧಿಕಾರಿಗಳು ವಿವಾಹವನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲದೆ ಪೋಷಕರಿಗೆ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಿದ್ದಾರೆ.

ಮೈಸೂರಿನಲ್ಲಿ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮದುವೆಗೆ ಸಿದ್ಧತೆ; ಸ್ನೇಹಿತೆಯಿಂದ ನಿಂತ ಬಾಲ್ಯ ವಿವಾಹ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 12, 2021 | 8:31 AM

Share

ಮೈಸೂರು: ಜೀವನದಲ್ಲಿ ಏನಾದರೂ ಸಾಧನೆ ಮಾಡಿ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಬೇಕು ಅಂತ ಕನಸು ಕಂಡಿರುತ್ತಾರೆ. ಅದಕ್ಕೆ ವಿದ್ಯಾಭ್ಯಾಸದ ಮೊದಲು ಹಂತದಿಂದ ತಯಾರಿನೂ ನಡೆಸಿಕೊಳ್ಳುತ್ತಾರೆ. ಆದರೆ ಮಕ್ಕಳ ಕನಸು, ಆಸೆ ಆಕಾಂಶೆಗಳಿಗೆ ಮುಳ್ಳಾಗಿರುವುದು ಬಾಲ್ಯ ವಿವಾಹ ಎನ್ನುವ ಕೆಟ್ಟ ಪದ್ಧತಿ. ಈಗ ತಾನೇ ಪ್ರಪಂಚದ ಜ್ಞಾನ ಪಡೆಯುತ್ತಿರುವ ಮಕ್ಕಳನ್ನು ಬಾಲ್ಯ ವಿವಾಹಕ್ಕೆ ಒಡ್ಡಿ ಭವಿಷ್ಯಕ್ಕೆ ಕಡಿವಾಣ ಹಾಕಲು ಪೋಷಕರೇ ನಿಂತಿದ್ದಾರೆ. ತಾವೇ ಸ್ವತಃ ಮುಂದೆ ನಿಂತು ಸಂಸಾರದ ಬಗ್ಗೆ ಜ್ಞಾನವೇ ಇಲ್ಲದ ಮಕ್ಕಳನ್ನು ಸಂಸಾರ ಜೀವನಕ್ಕೆ ತಳ್ಳುತ್ತಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್​ಡೌನ್​ ನಡುವೆ ಹಲವು ಬಾಲ್ಯ ವಿವಾಹಗಳು ನಡೆದುಹೋಗಿವೆ. ಇನ್ನು ಬಾಲ್ಯ ವಿವಾಹದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಹೋದ ಅಧಿಕಾರಿಗಳು ವಿವಾಹವನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾತ್ರವಲ್ಲದೆ ಪೋಷಕರಿಗೆ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಿದ್ದಾರೆ. ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯಕ್ಕೆ ಯಾವ ಯಾವ ರೀತಿ ಕೆಟ್ಟ ಪರಿಣಾಮ ಬೀಳುತ್ತದೆ ಎಂದು ಜಾಗೃತಿ ಮೂಡಿಸುತ್ತಿದ್ದರೂ, ಈ ಬಗ್ಗೆ ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಅರಮನೆ ನಗರಿಯಲ್ಲಿ ಲಾಕ್​ಡೌನ್​ ನಡುವೆ ಎಸ್ಎಸ್ಎಲ್​ಸಿ ವಿದ್ಯಾರ್ಥಿನಿ ಮದುವೆಗೆ ಸಿದ್ಧತೆ ನಡೆಸಿಕೊಂಡಿದ್ದರು. ಆದರೆ ಆಕೆಯ ಸ್ನೇಹಿತೆ ನೀಡಿದ ಮಾಹಿತಿಯಿಂದ ಬಾಲ್ಯ ವಿವಾಹ ನಿಂತು ಹೋಗಿದೆ. ಮೈಸೂರಿನ ಹೂಟಗಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರಾಮನಗರದ ಯುವಕನ ಜೊತೆ ಮದುವೆಗೆ ಸಿದ್ಧತೆ ನಡೆದಿತ್ತು. ಆದರೆ ಬಾಲಕಿಯ ಸ್ನೇಹಿತೆಯಿಂದ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ವಿಜಯನಗರ ಪೊಲೀಸ್, ಒಡನಾಡಿ ಸಂಸ್ಥೆಯಿಂದ ಬಾಲಕ ಮನೆಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಪೋಷಕರು ಬಾಲಕಿಯನ್ನು ಬಚ್ಚಿಟ್ಟಿದ್ದರು. ಸದ್ಯ ಬಾಲಕಿಯ ಭವಿಷ್ಯಕ್ಕೆ ಅಡ್ಡಿಯಾಗುತ್ತಿದ್ದ ಬಾಲ್ಯ ವಿವಾಹ ನಿಂತಿದ್ದು, ಈ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ಯಾದಗಿರಿ: ಇಂದು ಒಂದೇ ದಿನ 3 ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬಾಗಲಕೋಟೆಯಲ್ಲಿ ಲಾಕ್​ಡೌನ್​ ನಡುವೆ ಬಾಲ್ಯ ವಿವಾಹ; 28 ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳು

(Preparation to child marriage to SSLC Student in mysuru but her friend stop the child marriage)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?