AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಎದುರಿಸಲು ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ, ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?

Dr Ashwath Narayan CN: ಕೊರೊನಾ ಸೋಂಕು ಎರಡನೆಯ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಡವಿದ್ದು ಸ್ಪಷ್ಟವಾಗಿತ್ತು. ಅದರ ಸರಿಪಡಿಸಿಕೊಂಡು ಮುಂದೆ ಎದುರಾಗಬಹುದಾದ ಮೂರನೆಯ ಕೊವಿಡ್​ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಈ ಬಾರಿ ಮುಂಚಿತವಾಗಿಯೇ ಸಿದ್ಧತೆ ನಡೆಸಿದೆ. ಮುಖ್ಯವಾಗಿ ಪರಿಣತ ವೈದ್ಯರಿಂದ ಸಲಹೆ, ಸೂಚನೆ ಪಡೆಯಲು ತಯಾರಿ ನಡೆಸಿದೆ. ಅಕ್ಟೋಬರ್​- ನವೆಂಬರ್​ ತಿಂಗಳಲ್ಲಿ ಮೂರನೆಯ ಕೊವಿಡ್​ ಅಲೆ ಎದುರಾಗುವ ಸಾಧ್ಯತೆಯಿದೆ.

ಕೊರೊನಾ 3ನೇ ಅಲೆ ಎದುರಿಸಲು ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ, ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?
ಮೋದಿ ಸಂಪುಟದಿಂದ ಹೊರಗಾದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ? ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಏನಂತಾರೆ?
ಸಾಧು ಶ್ರೀನಾಥ್​
|

Updated on:May 26, 2021 | 4:39 PM

Share

ಬೆಂಗಳೂರು: ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಅವರು ಕೊರೊನಾ 3ನೇ ಅಲೆ ಎದುರಿಸಲು ಸಜ್ಜಾಗಿದ್ದಾರೆ. ಈ ಸಂಬಂಧ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ ಮಾಡಿದ್ದಾರೆ. ಸಮಿತಿಯಲ್ಲಿ ಒಟ್ಟು 13 ಮಂದಿ ವೈದ್ಯರು ಇದ್ದಾರೆ. ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಬಗ್ಗೆ ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಟ್ವೀಟ್​ ಮಾಡಿದ್ದಾರೆ. ಟ್ವೀಟ್​ ಸಾರಾಂಶ ಹೀಗಿದೆ: To be better prepared for third wave of #COVID19, if there is one, we have formed a high level committee of medical experts. Our government will proactively work with this committee to control, contain & manage the 3rd wave, while we continue to actively mitigate the 2nd wave.

ಕೊರೊನಾ ಸೋಂಕು ಎರಡನೆಯ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಡವಿದ್ದು ಸ್ಪಷ್ಟವಾಗಿತ್ತು. ಅದರ ಸರಿಪಡಿಸಿಕೊಂಡು ಮುಂದೆ ಎದುರಾಗಬಹುದಾದ ಮೂರನೆಯ ಕೊವಿಡ್​ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಈ ಬಾರಿ ಮುಂಚಿತವಾಗಿಯೇ ಸಿದ್ಧತೆ ನಡೆಸಿದೆ. ಮುಖ್ಯವಾಗಿ ಪರಿಣತ ವೈದ್ಯರಿಂದ ಸಲಹೆ, ಸೂಚನೆ ಪಡೆಯಲು ತಯಾರಿ ನಡೆಸಿದೆ. ಅಕ್ಟೋಬರ್​- ನವೆಂಬರ್​ ತಿಂಗಳಲ್ಲಿ ಮೂರನೆಯ ಕೊವಿಡ್​ ಅಲೆ ಎದುರಾಗುವ ಸಾಧ್ಯತೆಯಿದೆ. ಖ್ಯಾತ ಹೃದಯತಜ್ಞ ಡಾ. ದೇವಿ ಪ್ರಸಾದ್​ ಶೆಟ್ಟಿ ಕೋವಿಡ್​ ವೈದ್ಯಕೀಯ ಉನ್ನತ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಗಮನಾರ್ಹವೆಂದರೆ ಕೇಂದ್ರ ಸರ್ಕಾರವೂ ಸಹ ಕೊರೊನಾ ನಿಯಂತ್ರಣದಲ್ಲಿ ಡಾ. ದೇವಿ ಪ್ರಸಾದ್​ ಶೆಟ್ಟಿ ಅವರ ವೈದ್ಯ ನೆರವು ಪಡೆದಿದೆ.

preparedness of karnataka for third wave of covid 19 high level committee of medical experts formed says dr ashwath narayan cn (2)

ಡಾ. ದೇವಿಶೆಟ್ಟಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ

preparedness of karnataka for third wave of covid 19 high level committee of medical experts formed says dr ashwath narayan cn (1)

(preparedness of karnataka for third wave of covid 19 high level committee of medical experts formed says dr ashwath narayan cn)

Published On - 4:27 pm, Wed, 26 May 21

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!