AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate change: ವಿಶ್ವ ಹವಾಮಾನ ವಿಪರೀತ ಎನಿಸುವಷ್ಟು ಹಾಳಾಗುತ್ತಿದೆ: ಸರಳವಾಗಿ ಈ 10 ಚಟುವಟಿಕೆಗಳ ಕಡೆಗೆ ಗಮನ ಕೊಡಿ!

ಹವಾಮಾನ ವೈಪರೀತ್ಯಗಳಿಂದಾಗಿ ಗುಣಮಟ್ಟದ ಆಹಾರ ಮತ್ತು ಆಹಾರದ ಲಭ್ಯತೆ ಮೇಲೆ ಪರಿಣಾಮ ಬೀರುತ್ತಿದೆ. ಮನುಷ್ಯನ ವಿಪರೀತದ ಚಟುವಟಿಕೆಗಳು ಮತ್ತು ಹವಾಮಾನ ಬದಲಾವಣೆಯಿಂದ ಕುಡಿಯುವ ನೀರು ಸಿಗುವುದೇ ಕಡಿಮೆಯಾಗುತ್ತಿದೆ. ಇದು ಹೀಗೆಯೇ ದೀರ್ಘಕಾಲದವರೆಗೆ ಮುಂದುವರಿದರೆ ಹಸಿವು ಮತ್ತು ನಿರ್ಜಲೀಕರಣ ಹೆಚ್ಚಾಗುತ್ತದೆ. ಇದು ಕ್ಷಾಮಕ್ಕೆ ದಾರಿ ಮಾಡಿಕೊಡಬಹುದು. ಇದು ಭೂಮಿಯ ಮೇಲಿಂದ ಅಪಾರ ಸಂಖ್ಯೆಯ ಜನರನ್ನು ಅಳಿಸಿಹಾಕಬಹುದು.

Climate change: ವಿಶ್ವ ಹವಾಮಾನ ವಿಪರೀತ ಎನಿಸುವಷ್ಟು ಹಾಳಾಗುತ್ತಿದೆ: ಸರಳವಾಗಿ ಈ 10 ಚಟುವಟಿಕೆಗಳ ಕಡೆಗೆ ಗಮನ ಕೊಡಿ!
ಹವಾಮಾನ ಹಾಳಾಗುತ್ತಿದೆ: ಸರಳವಾದ ಈ 10 ಚಟುವಟಿಕೆಯಲ್ಲಿ ತೊಡಗಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 25, 2024 | 9:19 AM

Share

ವಿಶ್ವ ಭೂ ದಿನವನ್ನು ವಾರ್ಷಿಕವಾಗಿ ಏಪ್ರಿಲ್ ಅಂತ್ಯದ ವೇಳೆಗೆ (22 ರಂದು) ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಇದು ಸಮಕಾಲೀನ ಪರಿಸರ ಚಳವಳಿಗಳ ಸಾಧನೆಗಳನ್ನು ಗೌರವಿಸಲು ಮತ್ತು ಭೂಮಿ ಮತ್ತು ಅದರ ಸಂಪನ್ಮೂಲಗಳನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಸುಸಂದರ್ಭವಾಗಿದೆ. ಹೆಚ್ಚಿದ ಪ್ಲಾಸ್ಟಿಕ್‌ ಬಳಕೆಯಿಂದ ಉಂಟಾಗುವ ಮಾಲಿನ್ಯದ ಬಗ್ಗೆ ಗಮನ ಸೆಳೆಯಲು ಭೂಮಿಯ ದಿನ 2024 ಅನ್ನು ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್ಸ್’ ಎಂಬ ವಿಷಯವನ್ನಾಗಿ ಮಾಡಲಾಗಿದೆ. ಈ ದಿನದ ಗೌರವಾರ್ಥವಾಗಿ, ತನ್ನಿಮಿತ್ತ ಈ ಹತ್ತಾರು ವಿಷಯಗಳ ಬಗ್ಗೆ ಇರಲಿ ನಿಮ್ಮ ಗಮನ. 1. ಏರುತ್ತಿರುವ ತಾಪಮಾನ ಪ್ರತಿ ವರ್ಷ ಕಳೆದಂತೆ ಭೂ ಗ್ರಹದ ಉಷ್ಣತೆ ಹೆಚ್ಚುತ್ತಿದೆ. USA ಮೂಲದ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ (NOAA) ವರದಿಗಳ ಪ್ರಕಾರ, ದಾಖಲಾದ ಅತ್ಯಂತ ಉಷ್ಣ ವರ್ಷ 2023 ಆಗಿತ್ತು. ಮತ್ತು ಮುಂಬರುವ ವರ್ಷಗಳಲ್ಲಿ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವನ್ನು ಕಾಣುವ ಹೆಚ್ಚಿನ ಅವಕಾಶವಿದೆ ಎಂಬ ಮುನ್ಸೂಚನೆಯಿತ್ತು. ಆದರೆ ಈಗಾಗಲೇ 2024ರ ಬೇಸಿಗೆಯಲ್ಲಿ ಕಡುಬಿಸಿಲು ಅನುಭವ ವೇದ್ಯವಾಗಿದೆ. 2. ಕರಗುತ್ತಿರುವ ಧ್ರುವ ಹಿಮನದಿಗಳು ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದಂತೆ ಆತಂಕಕಾರಿಯಾಗಿ ಆರ್ಕ್ಟಿಕ್ ಮತ್ತು ಅಂಟಾರ್ಕ್ಟಿಕ್ ಪ್ರದೇಶಗಳಲ್ಲಿನ ಹಿಮನದಿಗಳು ಕರಗಲು ಪ್ರಾರಂಭಿಸಿವೆ. ಇದು ಸಮುದ್ರ ಮಟ್ಟದ ಏರಿಕೆಗೆ ಕಾರಣವಾಗಲಿದೆ. ತತ್ಫಲವಾಗಿ ಕರಾವಳಿ ಪ್ರದೇಶಗಳ ಸವೆತವನ್ನು ಹೆಚ್ಚಿಸುತ್ತದೆ. 3. ಹಸಿರುಮನೆ ಪರಿಣಾಮ ಹಸಿರುಮನೆ ಅನಿಲಗಳ ಏರಿಕೆಯು ಗ್ರಹದ ಹವಾಮಾನದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಇಂಗಾಲ ಮತ್ತು ಇತರ ಹಸಿರುಮನೆ ಅನಿಲಗಳ ಹೊರಸೂಸುವಿಕೆಯು ಭೂಮಿಯ ಮೇಲ್ಮೈಯಲ್ಲಿ ಶಾಖದ ಬಲೆಗೆ ಕಾರಣವಾಗಿದೆ. ಇದು ಭೂಮಿ ಬಿಸಿಯಾಗಲು ಕಾರಣವಾಗುತ್ತಿದೆ. 4. ಋತುಮಾನಗಳ ಅವಧಿಯಲ್ಲಿ ಏರುಪೇರು ಭೂಮಿಯ...

Published On - 2:38 pm, Wed, 24 April 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?