AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ‘ಚಿಪ್ ಟು ಕ್ರಾಪ್’ ಹ್ಯಾಕಥಾನ್

ಪ್ರೆಸಿಡೆನ್ಸಿ ಸ್ಕೂಲ್ ಆಫ್ ಎಂಜಿನಿಯರಿಂಗ್ ಮತ್ತು ಪ್ರೆಸಿಡೆನ್ಸಿ ಸ್ಕೂಲ್ ಆಫ್ ಕಂಪ್ಯೂಟರ್ ಸೈನ್ಸ್ ಆ್ಯಂಡ್​ ಎಂಜಿನಿಯರಿಂಗ್ ವತಿಯಿಂದ 'ಚಿಪ್ ಟು ಕ್ರಾಪ್' ಎಂಬ ಶೀರ್ಷಿಕೆಯ 24 ಗಂಟೆಗಳ ಹ್ಯಾಕಥಾನ್ ನಡೆಯಿತು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR) ಬೆಂಗಳೂರಿನ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮಕ್ಕೆ, ನೂರಕ್ಕೂ ಹೆಚ್ಚು ನೋಂದಣಿಗಳು ಆಗಿದ್ದವು.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ 'ಚಿಪ್ ಟು ಕ್ರಾಪ್' ಹ್ಯಾಕಥಾನ್
'ಚಿಪ್ ಟು ಕ್ರಾಪ್' ಹ್ಯಾಕಥಾನ್
ಪ್ರಸನ್ನ ಹೆಗಡೆ
|

Updated on:Oct 17, 2025 | 4:41 PM

Share

ಬೆಂಗಳೂರು, ಅಕ್ಟೋಬರ್​ 17: ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR) ಬೆಂಗಳೂರಿನ ಸಹಯೋಗದೊಂದಿಗೆ ಪ್ರೆಸಿಡೆನ್ಸಿ ಸ್ಕೂಲ್ ಆಫ್ ಎಂಜಿನಿಯರಿಂಗ್ ಮತ್ತು ಪ್ರೆಸಿಡೆನ್ಸಿ ಸ್ಕೂಲ್ ಆಫ್ ಕಂಪ್ಯೂಟರ್ ಸೈನ್ಸ್ ಆ್ಯಂಡ್​ ಎಂಜಿನಿಯರಿಂಗ್ ವತಿಯಿಂದ ‘ಚಿಪ್ ಟು ಕ್ರಾಪ್’ ಎಂಬ ಶೀರ್ಷಿಕೆಯ 24 ಗಂಟೆಗಳ ಹ್ಯಾಕಥಾನ್ ನಡೆಯಿತು.

ಐಸಿಎಆರ್-IIHR ಬೆಂಗಳೂರಿನ ನಿರ್ದೇಶಕ ಡಾ.ತುಸಾರ್ ಕಾಂತಿ ಬೆಹೆರಾ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಡಾ.ನಿಸ್ಸಾರ್ ಅಹ್ಮದ್ ಹ್ಯಾಕಥಾನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ಬೆಹೆರಾ, ಐಸಿಎಆರ್-ಐಐಎಚ್ಆರ್ ಮತ್ತು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ನಡುವಿನ ಸಹಯೋಗದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಡಾ.ನಿಸ್ಸಾರ್ ಅಹ್ಮದ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶವಾಗಿದ್ದು, ಉದ್ಯಮ ತಜ್ಞರಿಂದ ಕಲಿಯಲು ನೆರವಾಗುತ್ತವೆ ಎಂದರು.  ಹ್ಯಾಕಥಾನ್​ನ ಉಪ ನಿರ್ದೇಶಕಿ ಮತ್ತು ಸಂಘಟಕಿ ಡಾ. ಎಂ.ಎಸ್. ದಿವ್ಯಾರಾಣಿ,  ಅತಿಥಿಗಳು ಮತ್ತು ವಿಶ್ವವಿದ್ಯಾಲಯದ ಪ್ರೋತ್ಸಾಹ ಮತ್ತು ಬೆಂಬಲಕ್ಕಾಗಿ ಧನ್ಯವಾದ ಅರ್ಪಿಸಿದರು.

Hackathon 2

‘ಚಿಪ್ ಟು ಕ್ರಾಪ್’ ಹ್ಯಾಕಥಾನ್

ಇದನ್ನೂ ಓದಿ: NEET SS ಪರೀಕ್ಷೆ ಮುಂದೂಡಿಕೆ, ಹೊಸ ಪರೀಕ್ಷಾ ವೇಳಾಪಟ್ಟಿ ಇಲ್ಲಿದೆ

ಸುಮಾರು 100 ಹೆಚ್ಚು ನೋಂದಣಿಗಳು ಕಾರ್ಯಕ್ರಮದಲ್ಲಾಗಿದ್ದು, ಅದರಲ್ಲಿ 30 ಸಂಭಾವ್ಯ ತಂಡಗಳನ್ನು ಮೂಲಮಾದರಿ ಅಭಿವೃದ್ಧಿಗಾಗಿ ಆಯ್ಕೆ ಮಾಡಲಾಯಿತು. ಅಂತಿಮ ಸುತ್ತು ತಂಡಗಳಿಂದ ನೇರ ಪ್ರದರ್ಶನ ಮತ್ತು IIHR ವಿಜ್ಞಾನಿಗಳಿಂದ ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರ್ಣಾಯಕ ಸವಾಲುಗಳು, ಪರಿಹಾರದ ಬಗ್ಗೆ ಮಾರ್ಗದರ್ಶನ ಒಳಗೊಂಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:39 pm, Fri, 17 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್