AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Draupadi Murmu: ಎಚ್​ಡಿ ದೇವೇಗೌಡರನ್ನು ಭೇಟಿ ಮಾಡಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರನ್ನು ಭೇಟಿಯಾದರು.

Draupadi Murmu: ಎಚ್​ಡಿ ದೇವೇಗೌಡರನ್ನು ಭೇಟಿ ಮಾಡಿದ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು
Draupadi murmu
TV9 Web
| Edited By: |

Updated on:Jul 10, 2022 | 8:56 PM

Share

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡರನ್ನು ಭೇಟಿಯಾದರು.

ದ್ರೌಪದಿ ಮುರ್ಮು ಅವರು ಎಚ್​ಡಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ, ಎಚ್​ಡಿ ರೇವಣ್ಣ ಅವರ ಬಳಿ ಬೆಂಬಲ ಕೋರಿದ್ದಾರೆ. ಪದ್ಮನಾಭ ನಗರದ ನಿವಾಸದಲ್ಲಿ ಭೇಟಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಸಿಎಂ ಬೊಮ್ಮಾಯಿ, ಸಿಟಿ ರವಿ, ಪ್ರಹ್ಲಾದ ಜೋಷಿ ಹಾಜರಿದ್ದರು. ರಾಷ್ಟ್ರಪತಿ ಚುನಾವಣೆ ಇದೇ 18ರಂದು ನಡೆಯಲಿದ್ದು, ಇಲ್ಲಿನ ಶಾಸಕರ ಬೆಂಬಲವನ್ನು ಕೋರಲು ಆಗಮಿಸಿದ್ದಾರೆ.

ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು.

ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.

Published On - 7:54 pm, Sun, 10 July 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ