ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ

ಕಾಂತರಾಜ್ ವರದಿ ಸ್ವೀಕಾರಕ್ಕೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ. ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ. ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಗಿದೆ.

ಸರ್ಕಾರಕ್ಕೆ ಸಂಕಷ್ಟ: ಕಾಂತರಾಜ್, ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಡ
ಸಿದ್ದರಾಮಯ್ಯ
Image Credit source: PTI
Edited By: Rakesh Nayak Manchi

Updated on: Nov 06, 2023 | 4:02 PM

ಬೆಂಗಳೂರು, ನ.6: ಕಾಂತರಾಜ್ ವರದಿ (Kantharaj Report) ಸ್ವೀಕಾರಕ್ಕೆ ಸಿದ್ಧತೆ ನಡೆಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ ನ್ಯಾ. ಸದಾಶಿವ ಆಯೋಗ (Justice Sadashiva Commission) ವರದಿ ಅನುಷ್ಠಾನಕ್ಕೆ ಒತ್ತಡ ಹೇರಲಾಗುತ್ತಿದೆ. ನ್ಯಾ. ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ದಲಿತ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ. ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಗಿದೆ.

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಗರದ ಸ್ಕೌಟ್ ಆ್ಯಂಡ್ ಗೈಡ್ಸ್​ನ ಕೊಂಡಜ್ಜಿ ಬಸವಪ್ಪ ಸಭಾಂಗಣದಲ್ಲಿ ಆಹಾರ ಸಚಿವ ಕೆ.ಎಚ್. ಸಚಿವ ಮುನಿಯಪ್ಪ ಸಮ್ಮುಖದಲ್ಲಿ ಮಾದಿಗ ಸಮುದಾಯದ ಮುಖಂಡರ ಸಭೆ ನಡೆಯಿತು.

ಇದನ್ನೂ ಓದಿ: ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ, ಆಗಲೇ ವಿರೋಧ ಅಂದ್ರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಸಭೆಯಲ್ಲಿ ಕಾಂತರಾಜ್ ವರದಿ, ನ್ಯಾ ಸದಾಶಿವ ವರದಿ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವೇಳೆ ಸಮುದಾಯ ಪರಿಗಣಿಸುವಂತೆ ಆಗ್ರಹಿಸಲಾಯಿತು. ಸಭೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ, ಶಾಸಕ ಬಸವಂತಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಎಂಎಲ್​ಸಿ ಡಿ ತಿಮ್ಮಯ್ಯ ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us