AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ

ದೆಹಲಿಯಲ್ಲಿ ಇರುವಾಗ ಮಂಡ್ಯದಲ್ಲಿ ಇರಲ್ಲ ಎಂದು ಟ್ರೋಲ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ನನ್ನ ಟ್ರೋಲ್ ಮಾಡಿದ್ರೆ ಜನ ನಂಬಲ್ಲ. ಜನರಿಗೂ ಗೊತ್ತಿದೆ. ಸಂಸತ್ ನಡೆಯುವುದರಿಂದ ನಾನು ಅಲ್ಲಿ ಇರುತ್ತೀನಿ.

ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 11, 2021 | 12:28 PM

Share

ಬೆಂಗಳೂರು: ಅಂಬರೀಶ್ ಅಭಿಮಾನಿಗಳು ನೊಂದುಕೊಳ್ಳುವುದು ಸಹಜ ಎಂದು ರಾಜಭವನದಲ್ಲಿ ಹೇಳಿಕೆ ನೀಡಿದ ಮಂಡ್ಯ ಸಂಸದೆ ಸುಮಲತಾ, ನಾವು ಅಡ್ಡದಾರಿಯಲ್ಲಿ ಹೋಗುವುದು ಬೇಡ. ನಮ್ಮ ನೋವನ್ನು ಶಾಂತಿಯುತವಾಗಿ ಹೇಳೋಣ. ನಾನು ಅವರ ವಿರುದ್ಧ ಹೋರಾಟ ಮಾಡಿಲ್ಲ. ನನ್ನ ಹೋರಾಟ ಅಕ್ರಮ ಗಣಿಗಾರಿಕೆ ವಿರುದ್ಧ ಅಷ್ಟೆ. ನಾನು ಯಾರನ್ನೂ ಟಾರ್ಗೆಟ್ ಮಾಡಿ ಪಾಲಿಟಿಕ್ಸ್ ಮಾಡಿಲ್ಲ. ಈಗಾಗಲೇ 2 ಬಾರಿ ಗಣಿಗಾರಿಕೆ ವಿಚಾರ ಪ್ರಸ್ತಾಪಿಸಿದ್ದೇನೆ. ಇನ್ನುಮುಂದೆ ಮತ್ತಷ್ಟು ಹೆಚ್ಚಾಗಿ ವಿಚಾರ ಪ್ರಸ್ತಾಪಿಸುತ್ತೇನೆಂದು ಹೇಳಿದರು.

ಮೂರ್ನಾಲ್ಕು ದಿನಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಭೇಟಿಗೆ ಅವಕಾಶ ನೀಡಲಿದ್ದಾರೆ. ದಾಖಲೆ ಕೊಡಬೇಕಾಗಿರುವುದು ನಾನಲ್ಲ, ಅಧಿಕಾರಿಗಳು. ಕಠಿಣ ಕ್ರಮಕೈಗೊಳ್ಳಲು ನಾನು ಮನವಿ ಮಾಡುತ್ತೇನೆ ಅಷ್ಟೆ ಎಂದು ಮಾತನಾಡಿದ ಸಂಸದೆ, ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ ಎಂಬುದು ಗೊತ್ತಿದೆ. ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಇರುವಾಗ ಮಂಡ್ಯದಲ್ಲಿ ಇರಲ್ಲ ಎಂದು ಟ್ರೋಲ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ನನ್ನ ಟ್ರೋಲ್ ಮಾಡಿದ್ರೆ ಜನ ನಂಬಲ್ಲ. ಜನರಿಗೂ ಗೊತ್ತಿದೆ. ಸಂಸತ್ ನಡೆಯುವುದರಿಂದ ನಾನು ಅಲ್ಲಿ ಇರುತ್ತೀನಿ. ಜನರಿಗೂ ಇದು ಗೊತ್ತಾಗುತ್ತೆ ಅಂತಾ ಹೇಳಿದರು. ಕುಮಾರಸ್ವಾಮಿ ಕದನ ವಿರಾಮ ಬಗ್ಗೆ ನನ್ನ ಗಮನ ಇಲ್ಲ. ನನ್ನ ಗಮನ ಅಕ್ರಮ ಗಣಿಗಾರಿಕೆ ನಿಲ್ಲಿಸುವುದು. ನಾನು ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನಾನು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.

ನಡೆಯುತ್ತಿರುವ ವಿಚಾರದ ಬಗ್ಗೆ ಬೆಳಗ್ಗೆ ಟ್ವೀಟ್ ಮಾಡಿದ್ದೇನೆ. ಈಗ ನಡೆಯುತ್ತಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಸಾರ್ವಜನಿಕ ವಲಯದಲ್ಲಿ ಇದ್ದಾಗ ಯಾವ ರೀತಿ ಇರಬೇಕು ಅನ್ನೋದನ್ನ ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಮಾರ್ಗದರ್ಶನದಲ್ಲಿ ನಾವು ಹೋಗಬೇಕು. 3 ವಾರಗಳ ಹಿಂದೆ ಕೆಆರ್​ಎಸ್​ ಡ್ಯಾಮ್ ಉಳಿಸಬೇಕು. ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಹೇಳಿದ್ದೇನೆ. ಇದರ ಬಗ್ಗೆ ನಿರಂತರವಾಗಿ ನಮ್ಮ ಹೋರಾಟ ಇರುತ್ತದೆ. ಯಾರು ಪ್ರತಿಭಟನೆಯನ್ನು ಮುಂದುವರಿಸಬಾರದು ಎಂದು ಅಂಬರೀಶ್ ಅಭಿಮಾನಿಗಳಲ್ಲಿ ಸುಮಲತಾ ಮನವಿ ಮಾಡಿದರು.

ಇದನ್ನೂ ಓದಿ

ಸುಮಲತಾ, ಕುಮಾರಸ್ವಾಮಿ ವಾಕ್ ಸಮರ; ಅಂಬಿ ಅಭಿಮಾನಿಗಳಿಂದ ಪ್ರತಿಭಟನೆ

ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್

Preventing illegal mining is difficult but we will continue our fight said Sumalatha Ambareesh

Published On - 12:14 pm, Sun, 11 July 21

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್