AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪ ಹೊಂದಿದ್ದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣು

ನಿನ್ನೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿದ್ದರು. ಭೇಟಿ ನೀಡಿದ ವೇಳೆ ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಬೇಸತ್ತು 30 ವರ್ಷದ ಸ್ಟಾಫ್ ನರ್ಸ್ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ದಾವಣಗೆರೆ: ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪ ಹೊಂದಿದ್ದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on: May 25, 2021 | 4:40 PM

Share

ದಾವಣಗೆರೆ: ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಹುಚ್ಚವನಳ್ಳಿಯಲ್ಲಿಯ ರಂಗಸ್ವಾಮಿ ನೇಣಿಗೆ ಶರಣಾದ ಸ್ಟಾಫ್ ನರ್ಸ್. ರಂಗಸ್ವಾಮಿ ವಿರುದ್ಧ ಸರ್ಕಾರಿ ನೌಕರನಾಗಿದ್ದುಕೊಂಡು ಖಾಸಗಿಯಾಗಿ ಚಿಕಿತ್ಸೆ ನೀಡುತ್ತಿದ್ದ ಎಂಬ ಆರೋಪವಿತ್ತು. ನಿನ್ನೆ ಗ್ರಾಮಕ್ಕೆ ಭೇಟಿ ವೇಳೆ ಜಿಲ್ಲಾಧಿಕಾರಿ ತಾಕೀತು ಮಾಡಿದ್ದರು. ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಸ್ಟಾಫ್ ನರ್ಸ್ಗೆ ತಾಕೀತು ಮಾಡಿದ್ದರು. ಇದರಿಂದ ಮನನೊಂದು ರಂಗಸ್ವಾಮಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಿನ್ನೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿದ್ದರು. ಭೇಟಿ ನೀಡಿದ ವೇಳೆ ಖಾಸಗಿಯಾಗಿ ಚಿಕಿತ್ಸೆ ನೀಡದಂತೆ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಬೇಸತ್ತು 30 ವರ್ಷದ ಸ್ಟಾಫ್ ನರ್ಸ್ ರಂಗಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ತಾನು ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಕಟ್ಟಡದಲ್ಲೇ ರಂಗಸ್ವಾಮಿ ನೇಣು ಬಿಗಿದುಕೊಂಡಿದ್ದಾರೆ.

6 ತಿಂಗಳ ಮಗುವಿಗೂ ಕೊರೊನಾ ಸೋಂಕು ಬಾಗಲಕೋಟೆ: ಆರು ತಿಂಗಳ ಹಸುಗೂಸಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಎಫ್ಎನ್ಸಿ ಬೆಡ್ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಬಸವನ ಬಾಗೇವಾಡಿ ಮೂಲದ ಮಗುವಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. ಸೋಂಕಿತ ಮಗುವಿನ ಜೊತೆ ಮಗುವಿನ ತಾಯಿ ಇದ್ದಾರೆ.

ನಿನ್ನೆ ಮಗುವಿಗೆ ತೇಗು ಬರಲು ಆರಂಭಿಸಿತ್ತು. ಇಳಕಲ್ ನಗರದ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಅಲ್ಲಿಂದ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ಕಳುಹಿಸಿದ್ದರು. ಮಗು ಮತ್ತು ತಾಯಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಲಾಗಿತ್ತು. ಈ ವೇಳೆ ಮಗುವಿಗೆ ಕೊವಿಡ್ ಇರುವುದು ದೃಢಪಟ್ಟಿದೆ. ತಾಯಿಯ ವರದಿ ಇನ್ನೂ ಬಂದಿಲ್ಲ. ಸದ್ಯ ಮಕ್ಕಳ ತಜ್ಞರು ಮಗುವಿನ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

ಇದನ್ನೂ ಓದಿ

ಬೊಜ್ಜು ಮತ್ತು ಅಧಿಕ ತೂಕವಿರುವವರು ತೀವ್ರ ಬ್ಯಾಕ್ಟೀರಿಯಾ ಸೋಂಕಿನಿಂದ ಸಾವಿಗೀಡಾಗಿದ್ದು ಕಡಿಮೆ: ವರದಿ

ಟೂಲ್​ಕಿಟ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ನೊಟೀಸ್ ಜಾರಿ, ಬಿಜೆಪಿಯ ಸಂಬಿತ್​ ಪಾತ್ರಾ ವಿಚಾರಣೆ ಸಾಧ್ಯತೆ

(Primary Health Centre commits suicide at Davanagere)

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು