AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಮಕಾತಿಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ

ನೇಮಕಾತಿ ಆದೇಶ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಸಿಡಿದೆದ್ದಿದ್ದು, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ನೇಮಕಾತಿಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ
ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ
ರಮೇಶ್ ಬಿ. ಜವಳಗೇರಾ
|

Updated on: Jul 03, 2023 | 2:57 PM

Share

ಬೆಂಗಳೂರು: ನೇಮಕಾತಿ ಆದೇಶ(Recruitment order) ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು(Teachers) ಬೆಂಗಳೂರಿನ(Bengaluru) ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ರಾಜ್ಯದ ಮೂಲೆ ಮಲೆಗಳಿಂದ ಆಗಮಿಸಿರುವ ಶಿಕ್ಷಕರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕವಾದ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ. 2022ರ ಮೇ ತಿಂಗಳಿನಲ್ಲಿ ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆಯನ್ನು ಸುಮಾರು 70 ಸಾವಿರ ಅಭ್ಯರ್ಥಿಗಳು ಬರೆದಿದ್ದರು. ಅದರಲ್ಲಿ 13352 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಆದರೆ ಕೆಲವು ಅಭ್ಯರ್ಥಿಗಳು ನೇಮಕದ ವಿಷಯದ ಆಧಾರದಲ್ಲಿ ಕೋರ್ಟ್ ಮೊರೆ ಹೋಗಿದ್ದರ ಪರಿಣಾಮ ಉಳಿದವರ ನೇಮಕಾತಿ ವಿಳಂಬವಾಗುತ್ತಿದೆ. ಯಾವುದೇ ಕಾನೂನು ತೊಡಕು ಇಲ್ಲದಿದ್ದರೂ ನೇಮಕಗೊಂಡಿರುವ 13 ಸಾವಿರ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದ್ದು ಈ ಕೂಡಲೇ ನೇಮಕದ ಪ್ರಕ್ರಿಯೆ ವುರುಕುಗೊಳಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಮುಖ್ಯ ಆಯ್ಕೆಪಟ್ಟಿ ಪ್ರಕಟ

ಖಾಸಗಿ ಸಂಸ್ಥೆಗಳಲ್ಲಿಯೂ ಕೆಲಸ ಇಲ್ಲ

ನೇಮಕಾತಿ ವಿಳಂಬದಿಂದ ಹಲವಾರು ಸಮಸ್ಯೆ ಎದುರಿಸಬೇಕಾಗಿದೆ. ಬಹುಪಾಲು ಅಭ್ಯರ್ಥಿಗಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನೇಮಕಾತಿ ಪಟ್ಟಿಯಲ್ಲಿ ನಮ್ಮ ಹೆರಿಸುವುದರಿಂದ ಖಾಸಗಿ ಸಂಸ್ಥೆಗಳು ಕೆಲಸದಿಂದ ಕೈಬಿಡುತ್ತಿದ್ದು ಅಂತ್ರರಾಗುವ ಸ್ಥಿತಿ ಇದೆ ಎಂದು ಪ್ರತಿಭಟನಾನಿರತ ಶಿಕ್ಷಕರು ನೋವು ತೋಡಿಕೊಂಡರು.

ದಾಖಲಾತಿಗಳ ಪರಿಶೀಲನೆ ಕಾರಣಕ್ಕೆ ಮೂಲ ದಾಖಲಾತಿಗಳನ್ನು ಇಲಾಖೆಗೆ ಕೊಟ್ಟಿರುವುದರಿಂದ ಬೇರೆ ಕಡೆ ಉದ್ಯೋಗ ಹುಡುಕಲು ಸಾಧ್ಯವಾಗುತ್ತಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹತ್ತಿರದಲ್ಲಿದ್ದು ನೀತಿ ಸಂಹಿತೆ ಜಾರಿಯಾಗುವ ಆತಂಕವೂ ನಮ್ಮನ್ನು ಕಾಡುತ್ತಿದೆ ಎಂದರು.

ಸಾಮಾನ್ಯ ವರ್ಗದವರಿಗೂ ಜಾತಿ ಸಿಂಧುತ್ವ ಬೇಕೆ?

ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದವರಿಗೂ ಜಾತಿ ಮತ್ತು ಆದಾಯ ಸಿಂಧುತ್ವ ಕೇಳುತ್ತಿರುವುದು ಯಾವ ನ್ಯಾಯ? ವಿಳಂಬವಾಗಿ ನೇಮಕಾತಿ ಆದೇಶ ನೀಡಿದರೆ ನಮ್ಮ ಮಕ್ಕಳ ಶಿಕ್ಷಣಕ್ಕೂ ಸಮನಸ್ಯೆಯಾಗುತ್ತಿದ್ದು ಈ ಕೂಡಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪರಿಹಾರ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ಕಲಾಪದ ಸಂದರ್ಭದಲ್ಲಿಯೇ ಮುಷ್ಕರ

ವಿಧಾನಸಭೆ ಚುನಾವಣಾ ಫಲಿತಾಂಶದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ವಿಧಾನಸಭೆ ಕಲಾಪ ಆರಂಭವಾಗಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಕುಳಿತಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!