AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ದೂರವಾಣಿ ಮೂಲಕ ಮಾತನಾಡಿ ಅವರ ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ಡಿ.ವಿ. ಸದಾನಂದ ಗೌಡರ ಆರೋಗ್ಯ ವಿಚಾರಿಸಿ, ಒಂದಿಷ್ಟು tips ಕೊಟ್ಟರು. ಪ್ರಧಾನಿ ಗೌಡರನ್ನು ನಗಿಸಿ ಹಗುರಾಗಿಸಿ ಫೋನ್ ಇಟ್ಟರು.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು.
ಡಾ. ಭಾಸ್ಕರ ಹೆಗಡೆ
| Edited By: |

Updated on:Jan 04, 2021 | 7:01 PM

Share

ಬೆಂಗಳೂರು: ನಗರದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾಡಿ ಆರೋಗ್ಯ ವಿಚಾರಿಸಿದರು. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೂರವಾಣಿ ಮಾಡಿದ್ದ ಪ್ರಧಾನಿ, ಗೌಡರ ಆರೋಗ್ಯ ವಿಚಾರಿಸಿದ್ದಷ್ಟೇ ಅಲ್ಲ, health tips ಕೂಡ ಕೊಟ್ಟರು. ಗೌಡರನ್ನು ನಗಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ತಾವು ಕೊವಿಡ್​ನಿಂದ ಚೇತರಿಸಿಕೊಂಡು ಕೆಲಸ ಪ್ರಾರಂಭಿಸಿದ್ದೀರಿ. ಈಗ ಜಾಸ್ತಿ ಶರೀರಕ್ಕೆ ತ್ರಾಸು ಕೊಡಬೇಡಿ. ನಿಮ್ಮ ಕೆಲಸದಲ್ಲಿ 10 ಪ್ರತಿಶತ ಕಡಿತ ಮಾಡಿ. ಆರು ತಿಂಗಳು ನಿಮ್ಮ ಶರೀರಕ್ಕೆ ವಿರಾಮ ಕೊಡಿ. ಆಮೇಲೆ 20 ಪ್ರತಿಶತ ಜಾಸ್ತಿ ಕೆಲಸ ಮಾಡಿ ಎಂದು ಪ್ರಧಾನಿ ಹೇಳಿದಾಗ ಗೌಡರು ನಕ್ಕು ಹಗುರವಾದರು.

ಗೌಡರಿಗೆ ಸ್ವಸ್ಥ ಆರೋಗ್ಯದ ಅಂಶಗಳನ್ನು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಕಾರಣಕ್ಕೂ ಈ ಅಂಶಗಳನ್ನು ಮರೆಯಬೇಡಿ ಎಂದು ನಗುನಗುತ್ತಲೇ ತಾಕೀತು ಮಾಡಿದರು.

ನಿನ್ನೆ ರವಿವಾರ (ಜ.3) ಶಿವಮೊಗ್ಗದಿಂದ ತಿರುಗಿ ಬೆಂಗಳೂರಿಗೆ ಬರುವಾಗ ಚಿತ್ರದುರ್ಗದಲ್ಲಿ ಊಟಕ್ಕೆ ನಿಲ್ಲಿಸಿ ಕಾರು ಇಳಿದು ಹೋಗುತ್ತಿದ್ದಾಗ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿ ಕುಸಿದು ಬಿದ್ದಿದ್ದ ಗೌಡರನ್ನು ಪ್ರಾಥಮಿಕ ಚಕಿತ್ಸೆಯ ನಂತರ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಇಂದು ಮುಂಜಾನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಅವರ ಸಂಪುಟದ ಹಲವಾರು ಸಚಿವರು ಸದಾನಂದಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಜಿರೋ ಟ್ರಾಫಿಕ್​ನಲ್ಲಿ ಬೆಂಗಳೂರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ: ತಿಪ್ಪಾರೆಡ್ಡಿ

Published On - 6:56 pm, Mon, 4 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ