AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ದೂರವಾಣಿ ಮೂಲಕ ಮಾತನಾಡಿ ಅವರ ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ಡಿ.ವಿ. ಸದಾನಂದ ಗೌಡರ ಆರೋಗ್ಯ ವಿಚಾರಿಸಿ, ಒಂದಿಷ್ಟು tips ಕೊಟ್ಟರು. ಪ್ರಧಾನಿ ಗೌಡರನ್ನು ನಗಿಸಿ ಹಗುರಾಗಿಸಿ ಫೋನ್ ಇಟ್ಟರು.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು.
ಡಾ. ಭಾಸ್ಕರ ಹೆಗಡೆ
| Edited By: |

Updated on:Jan 04, 2021 | 7:01 PM

Share

ಬೆಂಗಳೂರು: ನಗರದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾಡಿ ಆರೋಗ್ಯ ವಿಚಾರಿಸಿದರು. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೂರವಾಣಿ ಮಾಡಿದ್ದ ಪ್ರಧಾನಿ, ಗೌಡರ ಆರೋಗ್ಯ ವಿಚಾರಿಸಿದ್ದಷ್ಟೇ ಅಲ್ಲ, health tips ಕೂಡ ಕೊಟ್ಟರು. ಗೌಡರನ್ನು ನಗಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ತಾವು ಕೊವಿಡ್​ನಿಂದ ಚೇತರಿಸಿಕೊಂಡು ಕೆಲಸ ಪ್ರಾರಂಭಿಸಿದ್ದೀರಿ. ಈಗ ಜಾಸ್ತಿ ಶರೀರಕ್ಕೆ ತ್ರಾಸು ಕೊಡಬೇಡಿ. ನಿಮ್ಮ ಕೆಲಸದಲ್ಲಿ 10 ಪ್ರತಿಶತ ಕಡಿತ ಮಾಡಿ. ಆರು ತಿಂಗಳು ನಿಮ್ಮ ಶರೀರಕ್ಕೆ ವಿರಾಮ ಕೊಡಿ. ಆಮೇಲೆ 20 ಪ್ರತಿಶತ ಜಾಸ್ತಿ ಕೆಲಸ ಮಾಡಿ ಎಂದು ಪ್ರಧಾನಿ ಹೇಳಿದಾಗ ಗೌಡರು ನಕ್ಕು ಹಗುರವಾದರು.

ಗೌಡರಿಗೆ ಸ್ವಸ್ಥ ಆರೋಗ್ಯದ ಅಂಶಗಳನ್ನು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಕಾರಣಕ್ಕೂ ಈ ಅಂಶಗಳನ್ನು ಮರೆಯಬೇಡಿ ಎಂದು ನಗುನಗುತ್ತಲೇ ತಾಕೀತು ಮಾಡಿದರು.

ನಿನ್ನೆ ರವಿವಾರ (ಜ.3) ಶಿವಮೊಗ್ಗದಿಂದ ತಿರುಗಿ ಬೆಂಗಳೂರಿಗೆ ಬರುವಾಗ ಚಿತ್ರದುರ್ಗದಲ್ಲಿ ಊಟಕ್ಕೆ ನಿಲ್ಲಿಸಿ ಕಾರು ಇಳಿದು ಹೋಗುತ್ತಿದ್ದಾಗ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿ ಕುಸಿದು ಬಿದ್ದಿದ್ದ ಗೌಡರನ್ನು ಪ್ರಾಥಮಿಕ ಚಕಿತ್ಸೆಯ ನಂತರ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಇಂದು ಮುಂಜಾನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಅವರ ಸಂಪುಟದ ಹಲವಾರು ಸಚಿವರು ಸದಾನಂದಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಜಿರೋ ಟ್ರಾಫಿಕ್​ನಲ್ಲಿ ಬೆಂಗಳೂರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ: ತಿಪ್ಪಾರೆಡ್ಡಿ

Published On - 6:56 pm, Mon, 4 January 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ