AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ದೂರವಾಣಿ ಮೂಲಕ ಮಾತನಾಡಿ ಅವರ ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ಡಿ.ವಿ. ಸದಾನಂದ ಗೌಡರ ಆರೋಗ್ಯ ವಿಚಾರಿಸಿ, ಒಂದಿಷ್ಟು tips ಕೊಟ್ಟರು. ಪ್ರಧಾನಿ ಗೌಡರನ್ನು ನಗಿಸಿ ಹಗುರಾಗಿಸಿ ಫೋನ್ ಇಟ್ಟರು.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು.
ಡಾ. ಭಾಸ್ಕರ ಹೆಗಡೆ
| Edited By: |

Updated on:Jan 04, 2021 | 7:01 PM

Share

ಬೆಂಗಳೂರು: ನಗರದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾಡಿ ಆರೋಗ್ಯ ವಿಚಾರಿಸಿದರು. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೂರವಾಣಿ ಮಾಡಿದ್ದ ಪ್ರಧಾನಿ, ಗೌಡರ ಆರೋಗ್ಯ ವಿಚಾರಿಸಿದ್ದಷ್ಟೇ ಅಲ್ಲ, health tips ಕೂಡ ಕೊಟ್ಟರು. ಗೌಡರನ್ನು ನಗಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ತಾವು ಕೊವಿಡ್​ನಿಂದ ಚೇತರಿಸಿಕೊಂಡು ಕೆಲಸ ಪ್ರಾರಂಭಿಸಿದ್ದೀರಿ. ಈಗ ಜಾಸ್ತಿ ಶರೀರಕ್ಕೆ ತ್ರಾಸು ಕೊಡಬೇಡಿ. ನಿಮ್ಮ ಕೆಲಸದಲ್ಲಿ 10 ಪ್ರತಿಶತ ಕಡಿತ ಮಾಡಿ. ಆರು ತಿಂಗಳು ನಿಮ್ಮ ಶರೀರಕ್ಕೆ ವಿರಾಮ ಕೊಡಿ. ಆಮೇಲೆ 20 ಪ್ರತಿಶತ ಜಾಸ್ತಿ ಕೆಲಸ ಮಾಡಿ ಎಂದು ಪ್ರಧಾನಿ ಹೇಳಿದಾಗ ಗೌಡರು ನಕ್ಕು ಹಗುರವಾದರು.

ಗೌಡರಿಗೆ ಸ್ವಸ್ಥ ಆರೋಗ್ಯದ ಅಂಶಗಳನ್ನು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಕಾರಣಕ್ಕೂ ಈ ಅಂಶಗಳನ್ನು ಮರೆಯಬೇಡಿ ಎಂದು ನಗುನಗುತ್ತಲೇ ತಾಕೀತು ಮಾಡಿದರು.

ನಿನ್ನೆ ರವಿವಾರ (ಜ.3) ಶಿವಮೊಗ್ಗದಿಂದ ತಿರುಗಿ ಬೆಂಗಳೂರಿಗೆ ಬರುವಾಗ ಚಿತ್ರದುರ್ಗದಲ್ಲಿ ಊಟಕ್ಕೆ ನಿಲ್ಲಿಸಿ ಕಾರು ಇಳಿದು ಹೋಗುತ್ತಿದ್ದಾಗ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿ ಕುಸಿದು ಬಿದ್ದಿದ್ದ ಗೌಡರನ್ನು ಪ್ರಾಥಮಿಕ ಚಕಿತ್ಸೆಯ ನಂತರ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಇಂದು ಮುಂಜಾನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಅವರ ಸಂಪುಟದ ಹಲವಾರು ಸಚಿವರು ಸದಾನಂದಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಜಿರೋ ಟ್ರಾಫಿಕ್​ನಲ್ಲಿ ಬೆಂಗಳೂರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ: ತಿಪ್ಪಾರೆಡ್ಡಿ

Published On - 6:56 pm, Mon, 4 January 21

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ