ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ದೂರವಾಣಿ ಮೂಲಕ ಮಾತನಾಡಿ ಅವರ ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ಡಿ.ವಿ. ಸದಾನಂದ ಗೌಡರ ಆರೋಗ್ಯ ವಿಚಾರಿಸಿ, ಒಂದಿಷ್ಟು tips ಕೊಟ್ಟರು. ಪ್ರಧಾನಿ ಗೌಡರನ್ನು ನಗಿಸಿ ಹಗುರಾಗಿಸಿ ಫೋನ್ ಇಟ್ಟರು.

ಸದಾನಂದ ಗೌಡರಿಗೆ ಪ್ರಧಾನಿ ಕರೆ; ಆರು ತಿಂಗಳು ಕಡಿಮೆ ಕೆಲಸ, ಆಮೇಲೆ ದುಪ್ಪಟ್ಟು ಮಾಡಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ವಿಚಾರಿಸಿದರು.
Edited By:

Updated on: Jan 04, 2021 | 7:01 PM

ಬೆಂಗಳೂರು: ನಗರದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾಡಿ ಆರೋಗ್ಯ ವಿಚಾರಿಸಿದರು. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ದೂರವಾಣಿ ಮಾಡಿದ್ದ ಪ್ರಧಾನಿ, ಗೌಡರ ಆರೋಗ್ಯ ವಿಚಾರಿಸಿದ್ದಷ್ಟೇ ಅಲ್ಲ, health tips ಕೂಡ ಕೊಟ್ಟರು. ಗೌಡರನ್ನು ನಗಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ತಾವು ಕೊವಿಡ್​ನಿಂದ ಚೇತರಿಸಿಕೊಂಡು ಕೆಲಸ ಪ್ರಾರಂಭಿಸಿದ್ದೀರಿ. ಈಗ ಜಾಸ್ತಿ ಶರೀರಕ್ಕೆ ತ್ರಾಸು ಕೊಡಬೇಡಿ. ನಿಮ್ಮ ಕೆಲಸದಲ್ಲಿ 10 ಪ್ರತಿಶತ ಕಡಿತ ಮಾಡಿ. ಆರು ತಿಂಗಳು ನಿಮ್ಮ ಶರೀರಕ್ಕೆ ವಿರಾಮ ಕೊಡಿ. ಆಮೇಲೆ 20 ಪ್ರತಿಶತ ಜಾಸ್ತಿ ಕೆಲಸ ಮಾಡಿ ಎಂದು ಪ್ರಧಾನಿ ಹೇಳಿದಾಗ ಗೌಡರು ನಕ್ಕು ಹಗುರವಾದರು.

ಗೌಡರಿಗೆ ಸ್ವಸ್ಥ ಆರೋಗ್ಯದ ಅಂಶಗಳನ್ನು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಕಾರಣಕ್ಕೂ ಈ ಅಂಶಗಳನ್ನು ಮರೆಯಬೇಡಿ ಎಂದು ನಗುನಗುತ್ತಲೇ ತಾಕೀತು ಮಾಡಿದರು.

ನಿನ್ನೆ ರವಿವಾರ (ಜ.3) ಶಿವಮೊಗ್ಗದಿಂದ ತಿರುಗಿ ಬೆಂಗಳೂರಿಗೆ ಬರುವಾಗ ಚಿತ್ರದುರ್ಗದಲ್ಲಿ ಊಟಕ್ಕೆ ನಿಲ್ಲಿಸಿ ಕಾರು ಇಳಿದು ಹೋಗುತ್ತಿದ್ದಾಗ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿ ಕುಸಿದು ಬಿದ್ದಿದ್ದ ಗೌಡರನ್ನು ಪ್ರಾಥಮಿಕ ಚಕಿತ್ಸೆಯ ನಂತರ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಇಂದು ಮುಂಜಾನೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮತ್ತು ಅವರ ಸಂಪುಟದ ಹಲವಾರು ಸಚಿವರು ಸದಾನಂದಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಜಿರೋ ಟ್ರಾಫಿಕ್​ನಲ್ಲಿ ಬೆಂಗಳೂರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ: ತಿಪ್ಪಾರೆಡ್ಡಿ

Published On - 6:56 pm, Mon, 4 January 21

Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
Follow Us