AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನೌಷಧ ದಿನಾಚರಣೆ: ಮಂಗಳೂರು ವೈದ್ಯ ಡಾ. ಪದ್ಮನಾಭ್ ಕಾಮತ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತು

ಜನೌಷಧಿ ಕೇಂದ್ರದಲ್ಲಿ ಇಸಿಜಿ ಆರಂಭಿಸಿದ್ದಕ್ಕೆ ಮೋದಿ‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಲ್ಪನೆಯ ಮೂರ್ತ ರೂಪ ನೀವು ಮಾಡಿತೋರಿಸಿದ್ದೀರಿ ಎಂದು ಮೋದಿ ಮಾತನಾಡಿದ್ದಾರೆ.

ಜನೌಷಧ ದಿನಾಚರಣೆ: ಮಂಗಳೂರು ವೈದ್ಯ ಡಾ. ಪದ್ಮನಾಭ್ ಕಾಮತ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ (ಎಡ), ಡಾ. ಪದ್ಮನಾಭ ಕಾಮತ್ (ಬಲ)
ganapathi bhat
|

Updated on:Mar 07, 2021 | 11:56 AM

Share

ಉಡುಪಿ: ಜನೌಷಧ ದಿನಾಚರಣೆ ಪ್ರಯುಕ್ತ ಇಂದು (ಮಾರ್ಚ್ 7) ದೇಶದ ನಾಲ್ಕು ಭಾಗಗಳ ಜನೌಷಧ ಕೇಂದ್ರದ ಮಾಲೀಕರು ಮತ್ತು ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಸಂವಾದದಲ್ಲಿ, ಮಂಗಳೂರಿನ ಖ್ಯಾತ ವೈದ್ಯ ಡಾ. ಪದ್ಮನಾಭ ಕಾಮತ್ ಭಾಗವಹಿಸಿದರು. ಜನೌಷಧಿ ಕೇಂದ್ರಗಳನ್ನು ಪ್ರೋತ್ಸಾಹಿಸುತ್ತಿರುವ ವೈದ್ಯ ಡಾಕ್ಟರ್ ಪದ್ಮನಾಭ ಕಾಮತ್ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂವಾದದಲ್ಲಿ ಮಾತನಾಡಿದ ಮಂಗಳೂರಿನ ಖ್ಯಾತ ಹೃದಯ ವೈದ್ಯ ಡಾ. ಪದ್ಮನಾಭ ಕಾಮತ್, ಮೂರು ವರ್ಷದಿಂದ ಜನೌಷಧಿ ಅಭಿಯಾನದಲ್ಲಿ ಭಾಗಿಯಾಗಿದ್ದೇನೆ. ಗ್ರಾಮೀಣ ಭಾಗದ ಬಡಜನರಿಗೆ ಹೃದಯಾಘಾತ ಆಗುತ್ತಿತ್ತು. ಅವರಿಗೆ ತಕ್ಷಣದ ಚಿಕಿತ್ಸೆ ನೀಡುವುದು ಕಷ್ಟ ಆಗುತ್ತಿತ್ತು. ಹಾಗಾಗಿ ಜನೌಷಧಿ ಕೇಂದ್ರದಲ್ಲಿ ಇಸಿಜಿ ಯಂತ್ರ ಹಾಕಿದೆ ಎಂದು ಮಾತನಾಡಿದ್ದಾರೆ.

DR PADMANABH KAMAT MODI TALK

ಜನಔಷಧ ದಿನದಂದು ಪ್ರಧಾನಿ ಮೋದಿ ಜೊತೆ ಡಾ. ಪದ್ಮನಾಭ ಕಾಮತ್ ಮಾತು

ಆರಂಭದಲ್ಲಿ ಜನರು ನನಗೆ ಹುಚ್ಚು ಅಂದರು. ಆದರೆ ನನಗೆ ಜನರ ಕಷ್ಟಗಳಿಗೆ ಸ್ಪಂದಿಸುವುದು ಮುಖ್ಯವಾಗಿತ್ತು. ಆರು ಕಡೆ ಜನೌಷಧಿ‌ ಕೇಂದ್ರದಲ್ಲಿ ಇಸಿಜಿ ಯಂತ್ರ ಅಳವಡಿಸಿದೆ. ಇದರ ಫಲಾನುಭವಿಗಳ ಸಂತೋಷ ಕಂಡರೆ ಸಾರ್ಥಕ ಅನುಭವ ಆಗುತ್ತದೆ. ಈ ಮೂಲಕ ನೂರು ಹೃದಯಾಘಾತವಾಗುವ ಪ್ರಕರಣ ಪತ್ತೆ ಮಾಡಿದ್ದೇವೆ. ರೋಗಿಗಳ ಜೀವ ಉಳಿಸಿದ್ದೇವೆ. ಜನೌಷಧಿ, ಸೇವೆ ಮತ್ತು ಉದ್ಯೋಗದ ಉತ್ತಮ ಸಂದೇಶ ನೀಡಿದೆ. ಓರ್ವ ನಿರುದ್ಯೋಗಿ ಯುವಕನಿಗೆ ಹಣ ಕೊಟ್ಟು ಜನೌಷಧ ಆರಂಭಿಸಲು ಪ್ರೇರಣೆ ನೀಡಿದೆ. ಈಗ ಆ ಕೇಂದ್ರ ಅಗ್ರಪಂಕ್ತಿಯಲ್ಲಿದೆ ಎಂದು ಮಾತನಾಡಿದ್ದಾರೆ. ಜನೌಷಧಿ ಕೇಂದ್ರದಲ್ಲಿ ಇಸಿಜಿ ಆರಂಭಿಸಿದ್ದಕ್ಕೆ ಮೋದಿ‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಮ್ಮ ಕಲ್ಪನೆಯ ಮೂರ್ತ ರೂಪ ನೀವು ಮಾಡಿತೋರಿಸಿದ್ದೀರಿ ಎಂದು ಮೋದಿ ಮಾತನಾಡಿದ್ದಾರೆ.

ಇದನ್ನೂ ಓದಿ:

Assembly Election 2021: ಕೊವಿಡ್​ ಲಸಿಕೆ ಸರ್ಟಿಫಿಕೇಟ್​ನಿಂದ ಪ್ರಧಾನಿ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

Covid 19 Vaccination: ಕೊರೊನಾ ಲಸಿಕೆಗೆ ‘ತೋಳು ಮಡಚಿದ’ ಆರೋಗ್ಯ ಸಚಿವ ಡಾ.ಹರ್ಷವರ್ಧನ್​, ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ

Published On - 11:47 am, Sun, 7 March 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು