AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

ಮೈಸೂರು ಅರಮನೆಯಲ್ಲಿ ಇಂದು ಯುವರಾಜ ಚಿರಂಜೀವಿ ಶ್ರೀ ಆಧ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಯಿತು.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ
ಅಮ್ಮನ ತೋಳಲ್ಲಿ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್
ಆಯೇಷಾ ಬಾನು
|

Updated on:Jan 03, 2021 | 1:35 PM

Share

ಮೈಸೂರು: ಇಂದು ಅರಮನೆಯಲ್ಲಿ ವಿಶೇಷ ಸಂಭ್ರಮ, ಸಡಗರ ಮನೆ ಮಾಡಿತ್ತು. ಯಾಕಂದ್ರೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಯ ಏಕೈಕ ಕುಲ ಪುತ್ರ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರ್​ ಹುಟ್ಟುಹಬ್ಬವನ್ನು ಇಂದು ಆಚರಿಸಲಾಗಿದೆ.

ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರ ಮೂರನೇ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗಿದ್ದು, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ಆಧ್ಯವೀರರಿಗೆ ಸಮಸ್ತ ಸನ್ಮಂಗಳವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಹಾಗೂ ಅಮ್ಮನ ತೋಳಲ್ಲಿ ಆಧ್ಯವೀರ್ ನಲಿದಾಡಿದ ಫೋಟೋಗಳನ್ನು ಫೋಸ್ಟ್ ಮಾಡಿದ್ದಾರೆ.

ಡಿಸೆಂಬರ್ 6ಕ್ಕೆ ಮೈಸೂರಿನ ಯುವರಾಜ ಚಿರಂಜೀವಿ ಶ್ರೀ ಆದ್ಯವೀರ ನರಸಿಂಹರಾಜ ಒಡೆಯರವರಿಗೆ 3 ವರ್ಷ ತುಂಬುತ್ತೆ. ಆದರೆ ಅರಮನೆಯ ವಿಶಿಷ್ಟ ಪದ್ದತಿಯಂತೆ ಅಂದೇ ಹುಟ್ಟುಹಬ್ಬವನ್ನು ಆಚರಿಸುವ ರೂಢಿ ಇಲ್ಲ. ಬದಲಿಗೆ ಹುಟ್ಟುಹಬ್ಬವನ್ನು ಹೆಚ್ಚಿಸಿ ಆಚರಿಸಲಾಗುತ್ತೆ. ಈ ರೀತಿ ಮಾಡುವುದರಿಂದ ಯುವರಾಜನ ಆಯುಷ್ಯ ವೃದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ರೂಢಿ.

Published On - 1:33 pm, Sun, 3 January 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?