AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ನಾಯಿಯ ಸಹಾಯದಿಂದ ಪತ್ತೆ

ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ವಿಚಾರಣಾಧೀನ ಕೈದಿಯಾಗಿದ್ದ ಶಂಕರಪ್ಪ ಚಿಂತಾಮಣಿ ತಾಲೂಕು ಉಪ ಕಾರಾಗೃಹದಿಂದ ಎಸ್ಕೇಪ್ ಆಗಿದ್ದ. ಸದ್ಯ ಜೈಲಿನ 200 ಮೀಟರ್ ದೂರದಲ್ಲೇ ಇದ್ದ ಲಾಯರ್ ಮನೆಯ ಬಳಿ ಸಿಕ್ಕಿಬಿದ್ದಿದ್ದಾನೆ.

ಚಿಕ್ಕಬಳ್ಳಾಪುರ ಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ನಾಯಿಯ ಸಹಾಯದಿಂದ ಪತ್ತೆ
ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: May 27, 2021 | 8:04 AM

Share

ಚಿಕ್ಕಬಳ್ಳಾಪುರ: ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಜೈಲಿನ 200 ಮೀಟರ್ ದೂರದಲ್ಲೇ ಪತ್ತೆಯಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಣಿಯ ಜೈಲು ಬಳಿಯ ವಕೀಲರೊಬ್ಬರ ಮನೆಯ ಬಳಿ ಅವಿತುಕೊಂಡಿದ್ದ ಕೈದಿಯನ್ನ ನೋಡಿ ಮನೆಯಲ್ಲಿದ್ದ ನಾಯಿ ಬೊಗಳಿದ ಹಿನ್ನೆಲೆಯಲ್ಲಿ ವಕೀಲ ಪೊಲೀಸರಿಗೆ ಕೈದಿ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ತೆರಳಿದ ಪೊಲೀಸರು ಕೈದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿ ಸಿನಿಮೀಯ ರೀತಿಯಲ್ಲಿ ಪತ್ತೆಯಾಗಿದ್ದಾನೆ.

ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ವಿಚಾರಣಾಧೀನ ಕೈದಿಯಾಗಿದ್ದ ಶಂಕರಪ್ಪ ಚಿಂತಾಮಣಿ ತಾಲೂಕು ಉಪ ಕಾರಾಗೃಹದಿಂದ ಎಸ್ಕೇಪ್ ಆಗಿದ್ದ. ಸದ್ಯ ಜೈಲಿನ 200 ಮೀಟರ್ ದೂರದಲ್ಲೇ ಇದ್ದ ಲಾಯರ್ ಮನೆಯ ಬಳಿ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಬಳಿಕ ಸಿಬ್ಬಂದಿ ಮತ್ತು ಅಧಿಕಾರಿಗಳು ಕೈದಿಯನ್ನು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಿನ್ನಿಂದ ಎಷ್ಟು ಟೆನ್ಷನ್ ಎಂದು ಥಳಿಸಿ ಸಮಾಧಾನ ಪಟ್ಟು ಕೈದಿಯನ್ನು ಚಿಂತಾಮಣಿ ನಗರಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇನ್ನು ಜೈಲಿನ 30 ಅಡಿ ಎತ್ತರದ ಗೋಡೆ ಹತ್ತಿ ಜಿಗಿದಿದ್ದ ಹಿನ್ನೆಲೆಯಲ್ಲಿ ಕೈದಿ ಶಂಕರಪ್ಪ ಕಾಲುಗಳಿಗೆ ಗಂಭೀರ ಗಾಯವಾಗಿದ್ದು ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಕೈದಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಕಾರಾಗೃಹದಿಂದ ವಿಚಾರಣಾಧೀನ ಕೈದಿ ಪರಾರಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ