AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ನಾಯಿಯ ಸಹಾಯದಿಂದ ಪತ್ತೆ

ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ವಿಚಾರಣಾಧೀನ ಕೈದಿಯಾಗಿದ್ದ ಶಂಕರಪ್ಪ ಚಿಂತಾಮಣಿ ತಾಲೂಕು ಉಪ ಕಾರಾಗೃಹದಿಂದ ಎಸ್ಕೇಪ್ ಆಗಿದ್ದ. ಸದ್ಯ ಜೈಲಿನ 200 ಮೀಟರ್ ದೂರದಲ್ಲೇ ಇದ್ದ ಲಾಯರ್ ಮನೆಯ ಬಳಿ ಸಿಕ್ಕಿಬಿದ್ದಿದ್ದಾನೆ.

ಚಿಕ್ಕಬಳ್ಳಾಪುರ ಕಾರಾಗೃಹದಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ನಾಯಿಯ ಸಹಾಯದಿಂದ ಪತ್ತೆ
ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: May 27, 2021 | 8:04 AM

Share

ಚಿಕ್ಕಬಳ್ಳಾಪುರ: ಜೈಲಿನಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಜೈಲಿನ 200 ಮೀಟರ್ ದೂರದಲ್ಲೇ ಪತ್ತೆಯಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಣಿಯ ಜೈಲು ಬಳಿಯ ವಕೀಲರೊಬ್ಬರ ಮನೆಯ ಬಳಿ ಅವಿತುಕೊಂಡಿದ್ದ ಕೈದಿಯನ್ನ ನೋಡಿ ಮನೆಯಲ್ಲಿದ್ದ ನಾಯಿ ಬೊಗಳಿದ ಹಿನ್ನೆಲೆಯಲ್ಲಿ ವಕೀಲ ಪೊಲೀಸರಿಗೆ ಕೈದಿ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ತೆರಳಿದ ಪೊಲೀಸರು ಕೈದಿಯನ್ನು ವಶಕ್ಕೆ ಪಡೆದಿದ್ದಾರೆ. ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿ ಸಿನಿಮೀಯ ರೀತಿಯಲ್ಲಿ ಪತ್ತೆಯಾಗಿದ್ದಾನೆ.

ಒಂಟಿ ಮಹಿಳೆ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ವಿಚಾರಣಾಧೀನ ಕೈದಿಯಾಗಿದ್ದ ಶಂಕರಪ್ಪ ಚಿಂತಾಮಣಿ ತಾಲೂಕು ಉಪ ಕಾರಾಗೃಹದಿಂದ ಎಸ್ಕೇಪ್ ಆಗಿದ್ದ. ಸದ್ಯ ಜೈಲಿನ 200 ಮೀಟರ್ ದೂರದಲ್ಲೇ ಇದ್ದ ಲಾಯರ್ ಮನೆಯ ಬಳಿ ಸಿಕ್ಕಿಬಿದ್ದಿದ್ದಾನೆ. ಸಿಕ್ಕಿಬಿದ್ದ ಬಳಿಕ ಸಿಬ್ಬಂದಿ ಮತ್ತು ಅಧಿಕಾರಿಗಳು ಕೈದಿಯನ್ನು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಿನ್ನಿಂದ ಎಷ್ಟು ಟೆನ್ಷನ್ ಎಂದು ಥಳಿಸಿ ಸಮಾಧಾನ ಪಟ್ಟು ಕೈದಿಯನ್ನು ಚಿಂತಾಮಣಿ ನಗರಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇನ್ನು ಜೈಲಿನ 30 ಅಡಿ ಎತ್ತರದ ಗೋಡೆ ಹತ್ತಿ ಜಿಗಿದಿದ್ದ ಹಿನ್ನೆಲೆಯಲ್ಲಿ ಕೈದಿ ಶಂಕರಪ್ಪ ಕಾಲುಗಳಿಗೆ ಗಂಭೀರ ಗಾಯವಾಗಿದ್ದು ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಕೈದಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಕಾರಾಗೃಹದಿಂದ ವಿಚಾರಣಾಧೀನ ಕೈದಿ ಪರಾರಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್