AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರದೆ ಮೇಲೆ ಕುಟುಂಬದ ದರ್ಶನ: ಜೈಲುಹಕ್ಕಿಗಳ ಮಾನಸಿಕ ಒತ್ತಡ ಕಳೆಯುತ್ತಿದೆ ಇ-ಮುಲಾಕಾತ್

ಕಾರಾಗೃಹದಲ್ಲಿರುವ ಬಂಧಿಗಳಿಗೆ ಅವರ ಕುಟುಂಬದರವನ್ನು ಸಂಪರ್ಕಿಸಲು ಈ ಮುಲಾಕಾತ್ ಆ್ಯಪ್ ಸಹಕಾರಿಯಾಗಿದೆ. ಈ ಯೋಜನೆಯನ್ನು ಬಿಸಿಲನಾಡು ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ.

ಪರದೆ ಮೇಲೆ ಕುಟುಂಬದ ದರ್ಶನ: ಜೈಲುಹಕ್ಕಿಗಳ ಮಾನಸಿಕ ಒತ್ತಡ ಕಳೆಯುತ್ತಿದೆ ಇ-ಮುಲಾಕಾತ್
ವರ್ಚುವಲ್ ವ್ಯವಸ್ಥೆಯ ಮೂಲಕ ಕುಟುಂಬವನ್ನು ಸಂಪರ್ಕಿಸುತ್ತಿರುವ ಜೈಲುಹಕ್ಕಿ (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on: Dec 17, 2020 | 3:32 PM

Share

ರಾಯಚೂರು: ಬಂಧಿಖಾನೆಗಳಲ್ಲಿರುವ ವಿಚಾರಣಾಧೀನ ಖೈದಿಗಳಿಗೆ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ ಕಳೆದ ಮಾರ್ಚ್​ನಿಂದ ಸಂಬಂಧಿಕರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಆದರೆ ಎರಡು ದಿನಗಳ ಹಿಂದಷ್ಟೇ, ರಾಜ್ಯ ಸರ್ಕಾರ ಇ-ಮುಲಾಕಾತ್ ವ್ಯವಸ್ಥೆಯಡಿ ಆನ್​ಲೈನ್ ಮೂಲಕ ವಿಚಾರಣಾಧೀನ ಖೈದಿಗಳು ಕುಟುಂಬದ ಸದಸ್ಯರ ಜತೆಗೆ ಸಮಾಲೋಚನೆ ನಡೆಸುವ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯನ್ನು ಬಿಸಿಲನಾಡು ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ಸರ್ಕಾರದ ನಿಯಮಾವಳಿಗಳ ಅನುಸಾರ ಅನುಷ್ಠಾನಗೊಳಿಸಲಾಗಿದೆ.

ಖೈದಿಗಳನ್ನು ಸಂಪರ್ಕಿಸಲು ಏನು ಮಾಡಬೇಕು? ಸಂಬಂಧಿಗಳು ಇ-ಮುಲಾಕಾತ್ ಆ್ಯಪ್ ಡೌನ್​ಲೌಡ್ ಮಾಡಿಕೊಂಡು ಅಲ್ಲಿ ಕೇಳಲಾದ ಮಾಹಿತಿಯನ್ನು ಒದಗಿಸಬೇಕು. ಕಾರಾಗೃಹ ಇಲಾಖೆಯು ಸಂಬಂಧಿಕರ ಮೊಬೈಲಿಗೆ ಒಟಿಪಿ ಕಳಿಸಿ ನೋಂದಣಿ ಮಾಡುತ್ತದೆ. ಎಂದು? ಯಾವ ಸಮಯಕ್ಕೆ ಅವರು ಬಂಧಿತ ವ್ಯಕ್ತಿಯೊಂದಿಗೆ ಮಾತುಕತೆ ನಡೆಸಲು ಅವಕಾಶ ದೊರೆಯುತ್ತದೆ ಎಂಬ ಮಾಹಿತಿ ಕುಟುಂಬದವರಿಗೆ ರವಾನೆಯಾಗುತ್ತದೆ. ಅದೇ ಸಮಯಕ್ಕೆ ಸರಿಯಾಗಿ ಕಾರಾಗೃಹದಲ್ಲಿರುವ ವ್ಯಕ್ತಿಯನ್ನು ಜಿಲ್ಲಾ ಕಾರಾಗೃಹದ ಹಿರಿಯ ಅಧಿಕಾರಿಗಳು ಲ್ಯಾಪ್​ಟಾಪ್ ಬಳಿ ಕರೆತರುತ್ತಾರೆ. ಈ ಮೂಲಕ ಕುಟುಂಬದವರನ್ನು ವರ್ಚುವಲ್ ಆಗಿ ಜೈಲುಹಕ್ಕಿಗಳನ್ನು ಭೇಟಿ ಆಗಬಹುದು.

ಮಾನಸಿಕ ಒತ್ತಡ ನಿವಾರಣೆ ಕಳೆದ 9 ತಿಂಗಳಿಂದ ಕುಟುಂಬದ ಸದಸ್ಯರ ಸಂಪರ್ಕ ಕಳೆದುಕೊಂಡು ಮಾನಸಿಕವಾಗಿ ಒತ್ತಡದಲ್ಲಿರುವ ಖೈದಿಗಳಿಗೆ ಇ-ಮುಲಾಕಾತ್ ನೆರವಾಗುತ್ತಿದೆ. ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ಒಟ್ಟು 171 ಖೈದಿಗಳಿದ್ದಾರೆ. ಈ ಪೈಕಿ 164 ಮಂದಿ ಪುರುಷರು ಮತ್ತು 7 ಮಹಿಳೆಯರು. ತಮ್ಮ ಸಂಬಂಧಿಕರ ಭೇಟಿಗೆ ಬ್ರೇಕ್ ಬಿದ್ದಿದ್ದರಿಂದ ಅನೇಕರು ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು. ಇಂಥವರಿಗೆ ಒ-ಮುಲಾಕಾತ್ ನೆರವಾಗಿದೆ. ದೇಶದ ನಾನಾ ಕಡೆಗೆ ಎರಡನೇ ಅಲೆಯಲ್ಲಿ ಸೊಂಕು ಹರಡುತ್ತಿರುವ ಮಾತು ವ್ಯಾಪಕವಾಗಿದೆ. ಚಳಿಗಾಲದಲ್ಲಿ ಇದರ ತೀವ್ರತೆ ಹೆಚ್ಚಾಗುವ ಭೀತಿಯು ಎದುರಾಗಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಹೆಚ್ಚಿನ ಮುಂಜಾಗ್ರತೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಹೀಗಾಗಿ ಕಾರಾಗೃಹದಲ್ಲಿರುವ ಬಂಧಿಗಳಿಗೆ ಅವರ ಕುಟುಂಬದರವನ್ನು ಸಂಪರ್ಕಿಸಲು ಈ ಮುಲಾಕಾತ್ ಆ್ಯಪ್ ಸಹಕಾರಿಯಾಗಿದೆ.

ಸರ್ಕಾರದ ಸೂಚನೆಗಳ ಅನ್ವಯ ಇ-ಮುಲಾಕಾತ್ ಮೂಲಕ ಜೈಲುಹಕ್ಕಿಗಳಿಗೆ ಅವರ ಕುಟುಂಬದವರೊಂದಿಗೆ ಸಂಪರ್ಕ ಕಲ್ಪಿಸಿಕೊಡಲಾಗುತ್ತಿದೆ. ಸರ್ಕಾರದ ಆದೇಶದಂತೆ ರಾಯಚೂರು ಜಿಲ್ಲಾ ಕಾರಾಗೃಹದಲ್ಲೂ ಈ ವ್ಯವಸ್ಥೆ ಮಾಡಲಾಗಿದೆ ಎನ್ನುತ್ತಾರೆ ಜೈಲು ಅಧೀಕ್ಷಕರಾದ ಬಿ.ಆರ್.ಅಂದಾನಿ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು