AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ ಸಂಚಾರ ಇರುತ್ತೆ: ಖಾಸಗಿ ಬಸ್ ಮಾಲೀಕರ ಫೆಡರೇಷನ್ ಸ್ಪಷ್ಟನೆ

ಫ್ರೀಡಂಪಾರ್ಕ್​ನಲ್ಲಿ ಖಾಸಗಿ ಬಸ್​ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಖಾಸಗಿ ಬಸ್​ ಓಡಾಟ ಬಂದ್​ ಮಾಡುತ್ತೇವೆ ಎಂದು ಹೇಳಿದ್ದರು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮೂಡಿಸಿತ್ತು

ಖಾಸಗಿ ಬಸ್​ ಸಂಚಾರ ಇರುತ್ತೆ: ಖಾಸಗಿ ಬಸ್ ಮಾಲೀಕರ ಫೆಡರೇಷನ್ ಸ್ಪಷ್ಟನೆ
ಸಾಂದರ್ಭಿಕ ಚಿ್ತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Dec 13, 2020 | 10:37 PM

Share

ಬೆಂಗಳೂರು: ಖಾಸಗಿ ಬಸ್​ ಮಾಲೀಕರ ಸಂಘವು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಅಲ್ಲದೆ ಸೋಮವಾರ (ಡಿ.14) ಖಾಸಗಿ ಬಸ್​ಗಳ ಸಂಚಾರವೂ ರಾಜ್ಯದಲ್ಲಿ ಸ್ತಬ್ಧವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಸ್ ಮಾಲೀಕರ ಫೆಡರೇಷನ್ ಅಧ್ಯಕ್ಷ ರಾಜಶೇಖರ್ ನಾಳೆ ಖಾಸಗಿ ಬಸ್​ಗಳು ರಸ್ತೆಗೆ ಇಳಿಯಲಿವೆ ಎಂದಿದ್ದಾರೆ.

ಫ್ರೀಡಂಪಾರ್ಕ್​ನಲ್ಲಿ ಖಾಸಗಿ ಬಸ್​ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಮಾತನಾಡಿ, ಖಾಸಗಿ ಬಸ್​ ಓಡಾಟ ಬಂದ್​ ಮಾಡುತ್ತೇವೆ ಎಂದು ಹೇಳಿದ್ದರು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕ ಮೂಡಿಸಿತ್ತು. ಈಗ ಈ ಬಗ್ಗೆ ಸ್ಪಷ್ಟನೆ ಸಿಕ್ಕಿರೋದು ಸಾರ್ವಜನಿಕರಿಗೆ ನಿಟ್ಟುಸಿರು ಬಿಡುವಂತಾಗಿದೆ. ನಾಳೆ ನಾವು ಖಾಸಗಿ ಬಸ್‌ಗಳನ್ನು ರಸ್ತೆಗಿಳಿಸುತ್ತೇವೆ. ಪ್ರಯಾಣಿಕರು ಆತಂಕಪಡುವ ಅಗತ್ಯವಿಲ್ಲ, ಎಂದಿದ್ದಾರೆ.

ಉಲ್ಟಾ ಹೊಡೆದಿದ್ದ ಚಂದ್ರು ವಿಕಾಸಸೌಧದಲ್ಲಿ ಇಂದು KSRTC ಸಂಘದ ರಾಜ್ಯಾಧ್ಯಕ್ಷ ಚಂದ್ರು ಅವರೊಂದಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿ ಅನೇಕರು ಸಂಧಾನ ಮಾತುಕತೆ ನಡೆಸಿದ್ದರು. ಮಾತುಕತೆ ಮುಗಿಸಿ ಹೊರ ಬಂದ ನಂತರ ಮಾತನಾಡಿದ್ದ ಚಂದ್ರು, ಸಂಧಾನ ಯಶಸ್ವಿ ಆಗಿದೆ ಎಂದು ಹೇಳಿದ್ದರು. ಆದರೆ, ಫ್ರೀಡಂ ಪಾರ್ಕ್​ ಬಂದ ನಂತರದಲ್ಲಿ ಚಂದ್ರು ಉಲ್ಟಾ ಹೊಡೆದಿದ್ದರು. ಸರ್ಕಾರದ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಬೇಕಿದೆ. ಈಗಿನ ಮಾತುಕತೆ ವಿಫಲವಾಗಿದೆ. ಹೀಗಾಗಿ, ಯಾರೂ ಬಸ್​ ತೆಗೆಯಬಾರದು ಎಂದು ಕೋರಿದ್ದರು.

ಬಸ್ ಚಾಲನೆಗೆ ಮುಂದಾಗಲಿರುವ ನೌಕರರಿಗೆ ಭದ್ರತೆ ಸಾರಿಗೆ ಮುಷ್ಕರದ ನಡುವೆಯೇ ಸರ್ಕಾರ ಸಿಬ್ಬಂದಿಗೆ ಆಫರ್​ ಒಂದನ್ನು ನೀಡಿದೆ. ನಾಳೆ ಬಸ್​ ಸಂಚಾರ ಮಾಡಲು ಮುಂದಾಗುವ ನೌಕರರಿಗೆ ಭದ್ರತೆ ಒದಗಿಸುತ್ತೇವೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಮುಷ್ಕರದ ನಡುವೆಯೂ ಓಡಾಡಿದ್ದ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಹೀಗಾಗಿ, ಅನೇಕ ಚಾಲಕರು ಬಸ್​ ಚಾಲನೆ ಮಾಡೋಕೆ ಹಿಂಜರಿದಿದ್ದರು. ಅಂಥವರಿಗೆ ಈ ಆಫರ್​ ನೀಡಲಾಗಿದೆ.

ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ

Published On - 10:36 pm, Sun, 13 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ