AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು

ಶಿಕ್ಷಣ ಇಲಾಖೆ ಈ ಸಾಲಿನ ಇನ್ನು ಶಾಲಾ ಸುಲ್ಕ ನಿಗದಿ ಮಾಡಿಲ್ಲ. ತರಗತಿ ಪಠ್ಯ ಹಾಗೂ ಬೋಧನಾ ಕ್ರಮ ತಿಳಿಸಿಲ್ಲ. ಕೊವಿಡ್ ಸಂಕಷ್ಟದಲ್ಲಿ ನಮಗೆ ಕೆಲಸ ಇಲ್ಲ. ಇತಂಹ ಸಂಕಷ್ಟದಲ್ಲಿ ಖಾಸಗಿ ಶಾಲೆಗಳು ಸುಲಿಗೆಗೆ ಮುಂದಾಗಿವೆ. ಆನ್​ಲೈನ್​ ಕ್ಲಾಸ್ ಶುರು ಮಾಡಿ ಫೀಸ್​ಗೆ ಡಿಮ್ಯಾಂಡ್ ಮಾಡುತ್ತಿವೆ.

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Jun 12, 2021 | 10:40 AM

Share

ಬೆಂಗಳೂರು: ಇಡೀ ರಾಜ್ಯವೇ ಕೊರೊನಾ ಸೋಂಕಿನಿಂದ ಬಳಲುತ್ತಿದೆ. ಉದ್ಯೋಗವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಜನ ಪರದಾಡುತ್ತಿದ್ದಾರೆ. ಈ ಸಂದಿಗ್ಧ ಕಾಲದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಅಮಾನವೀಯವಾಗಿ ವರ್ತಿಸುತ್ತಿವೆ. ಮಕ್ಕಳ ಫೀಸ್ ವಸೂಲಿಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಅಡ್ಡದಾರಿ ಹಿಡಿದಿವೆ. ಖಾಸಗಿ ಶಾಲೆಗಳ ಸುಲಿಗೆಗೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶಾಲೆಗಳ ಮುಂದೆ ಪ್ರತಿಭಟನೆಗೆ ಮುಂದಾಗಿದ್ದಾರೆ.

ಶಿಕ್ಷಣ ಇಲಾಖೆ ಈ ಸಾಲಿನ ಇನ್ನು ಶಾಲಾ ಸುಲ್ಕ ನಿಗದಿ ಮಾಡಿಲ್ಲ. ತರಗತಿ ಪಠ್ಯ ಹಾಗೂ ಬೋಧನಾ ಕ್ರಮ ತಿಳಿಸಿಲ್ಲ. ಕೊವಿಡ್ ಸಂಕಷ್ಟದಲ್ಲಿ ನಮಗೆ ಕೆಲಸ ಇಲ್ಲ. ಇತಂಹ ಸಂಕಷ್ಟದಲ್ಲಿ ಖಾಸಗಿ ಶಾಲೆಗಳು ಸುಲಿಗೆಗೆ ಮುಂದಾಗಿವೆ. ಆನ್​ಲೈನ್​ ಕ್ಲಾಸ್ ಶುರು ಮಾಡಿ ಫೀಸ್​ಗೆ ಡಿಮ್ಯಾಂಡ್ ಮಾಡುತ್ತಿವೆ. ಪೂರ್ಣ ಪ್ರಮಾಣದ ಫೀಸ್ ಕಟ್ಟುವಂತೆ ಒತ್ತಡ ಹಾಕಿವೆ. ಕಂತುಗಳಲ್ಲಿ ಫೀಸ್ ಕಟ್ಟಬೇಕು ಅಂದರೆ 5 ಸಾವಿರದ ವರೆಗೂ ಬಡ್ಡಿ ಕಟ್ಟುವಂತೆ ಹಿಂಸೆ ಮಾಡುತ್ತಿವೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ರಾಜಾಜಿನಗರದ ಶ್ರೀ ವಾಣಿ ಸ್ಕೂಲ್, ಮಂಗೊಲಿಯಾ ಪಬ್ಲಿಕ್ ಸ್ಕೂಲ್, ರಾಜಾಜಿನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ಚೈತನ್ಯ ಟೆಕ್ನೋ ಶಾಲೆ, ಮಾರತಹಳ್ಳಿ ವಿಬಿಜಿಯೋರ್ ಶಾಲೆ, ನಂದಿನಿ ಲೇಔಟ್ ಪ್ರೆಸಿಡೆನ್ಸಿ ಸ್ಕೂಲ್, ಶಿವಾನಂದ ಸರ್ಕಲ್ ಹಾಗೂ ಹೆಬ್ಬಳಾದಲ್ಲಿರೊ ಸಿಂಧಿ ಶಾಲೆ, ಕಲ್ಕೆರೆಯ ಎನ್​ಪಿಎಸ್​ ಪಬ್ಲಿಕ್ ಶಾಲೆ ಸೇರಿದಂತೆ ಅನೇಕ ಶಾಲೆಗಳಿಂದ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕಲ್ಕೆರೆಯ ಎನ್​ಪಿಎಸ್​ ಪಬ್ಲಿಕ್ ಶಾಲೆ ಕೊವಿಡ್ ಸಂಕಷ್ಟದಲ್ಲೂ ಶೇ.20 ರಷ್ಟು ಫೀಸ್ ಹೆಚ್ಚಳ ಮಾಡಿದೆ. ಶಾಲೆ ಕಳೆದ ವರ್ಷವೂ ಫೀಸ್ ಕಡಿತ ಮಾಡಿರಲಿಲ್ಲ. ಕಳೆದ ವರ್ಷ ಒಂದು ಲಕ್ಷ 35 ಸಾವಿರ ಫೀಸ್ ಇತ್ತು. ಈ ವರ್ಷ ಒಂದು ಲಕ್ಷ 45 ಸಾವಿರಕ್ಕೆ ಏರಿಕೆ ಮಾಡಿದೆ. ಶಾಲೆಯ ನಡೆಗೆ 300 ಕ್ಕೂ ಹೆಚ್ಚು ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಖಾಸಗಿ ಫೈನಾನ್ಸ್​ಗಳ ಜೊತೆ ಖಾಸಗಿ ಶಾಲೆಗಳ ಒಪ್ಪಂದ ಪೋಷಕರಿಗೆ ಸಾಲ ಕೊಡಿಸಿ ಶುಲ್ಕ ಕಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಟಿವಿ9ಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಖಾಸಗಿ ಶಾಲೆಗಲೂ ತಾವೇ ಸಾಲ ಕೊಡಿಸಿ ಮಕ್ಕಳ ಫೀಸ್ ವಸೂಲಿ ಮಾಡುತ್ತಿವೆ. ಯೋಗಾನಂದ ಎಂಬುವವರು ಈ ಬಗ್ಗೆ ಆರೋಪಿಸಿದ್ದಾರೆ. ಬಡ್ಡಿಗೆ ಹಣ ಪಡೆದು ಶುಲ್ಕ ಕಟ್ಟಲು ಒತ್ತಡ ಹಾಕಿದ ಆರೋಪದ ಬಗ್ಗೆ ಯಾವುದೇ ಶಾಲೆಯ ವಿರುದ್ಧ ನನಗೆ ದೂರು ಬಂದಿಲ್ಲ. ಪೋಷಕರು ನನಗೆ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಶುಲ್ಕ ಕಟ್ಟಿಲ್ಲವೆಂದು ಆನ್​ಲೈನ್​ ಕ್ಲಾಸ್ ಬಂದ್ ಮಾಡುವಂತಿಲ್ಲ. ಸುಪ್ರೀಂ ಕೋರ್ಟ್, ಹೈಕೋರ್ಟ್ ಕೂಡ ಸ್ಪಷ್ಟವಾಗಿ ಹೇಳಿದೆ. ಶುಲ್ಕಕ್ಕೆ ಒತ್ತಡ ಹಾಕುತ್ತಿರುವ ಬಗ್ಗೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ. ನನಗೆ ದೂರು ನೀಡಬೇಕೆಂದು ಇಲ್ಲ. ಬಿಇಒಗೆ ನೀಡಬಹುದು. ದೂರು ನೀಡಿದರೆ ಅಂತಹ ಶಾಲೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಶಿಕ್ಷಣ ಸಚಿವ ಹೇಳಿದರು.

ಇದನ್ನೂ ಓದಿ

Pvt Schools Fees Torcher : ‘ಸಚಿವರು ಖಾಸಗಿ ಶಾಲೆಗಳ ಜತೆ ಶಾಮೀಲಾದಂತೆ ಕಾಣ್ತಿದೆ’

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ

(Private educational institutions are wayward for fees)

Follow Us
TV9 Web
TV9 Web

TV9 Kannada

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ