AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ದಾಹಕ್ಕೆ ರೋಗಿ ಪರದಾಟ; ಮುಂಗಡ ಹಣ ಪಾವತಿಸಲಾಗದೆ ಚಿಕಿತ್ಸೆ ಪಡೆಯದೆ ವೃದ್ಧೆ ಮನೆಗೆ ವಾಪಸ್

ಖಾಸಗಿ ಆಸ್ಪತ್ರೆ ಮುಂಗಡವಾಗಿ 20 ಸಾವಿರ ಪಾವತಿಸಲು ಸೂಚಿಸಿದೆ. ಹಣ ಪಾವತಿಸಲು ಸಾಧ್ಯವಾಗದೆ ವೃದ್ಧೆ ತಮ್ಮ ಊರಿಗೆ ವಾಪಸ್ ಆಗಿದ್ದಾರೆ. ದಾವಣಗೆರೆಯಲ್ಲಿ ಬಡವರಿಗೆ ಸರಿಯಾದ ಚಿಕಿತ್ಸೆ ಸಿಗುವುದು ಕೂಡ ಕಷ್ಟವಾಗಿದೆ.

ಹಣದ ದಾಹಕ್ಕೆ ರೋಗಿ ಪರದಾಟ; ಮುಂಗಡ ಹಣ ಪಾವತಿಸಲಾಗದೆ ಚಿಕಿತ್ಸೆ ಪಡೆಯದೆ ವೃದ್ಧೆ ಮನೆಗೆ ವಾಪಸ್
ಮುಂಗಡ ಹಣ ಪಾವತಿಸಲಾಗದೆ ಚಿಕಿತ್ಸೆ ಪಡೆಯದೆ ವೃದ್ಧೆ ಮನೆಗೆ ವಾಪಸ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 27, 2021 | 12:32 PM

Share

ದಾವಣಗೆರೆ: ಮಹಾಮಾರಿ ಕೊರೊನಾ ಸಮಯದಲ್ಲಿ ಅನೇಕ ಮುಖವಾಡಗಳು ಬಯಲಾಗುತ್ತಿವೆ. ಖಾಸಗಿ ಆಸ್ಪತ್ರೆಗಳು ತಮ್ಮ ಹಣದ ದಾಹಕ್ಕೆ ಏನೆನೋ ಹೀನ ಕೃತ್ಯಕ್ಕೆ ಮುಂದಾಗಿರುವ ಬಗ್ಗೆ ಅನೇಕ ಸಂಗತಿಗಳು ಹರಿದಾಡುತ್ತಿವೆ. ಈಗ ಇದಕ್ಕೆ ಪುಷ್ಟಿಕೊಡುವಂತೆ ಖಾಸಗಿ ಆಸ್ಪತ್ರೆಯ ಹಣದ ದಾಹಕ್ಕೆ ಉಸಿರಾಟ ಸಮಸ್ಯೆಯಿಂದ ವೃದ್ಧೆ ಪರದಾಡಿದಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮುಂಗಡ ಹಣ ಪಾವತಿಸಲಾಗದೆ ವೃದ್ಧೆ ಮನೆಗೆ ವಾಪಸ್ ಆಗಿದ್ದಾರೆ. ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಕೋಡಿಯಾಲ ಗ್ರಾಮದ ಅನುಸೂಯಮ್ಮಗೆ ಉಸಿರಾಟ ಸಮಸ್ಯೆ ಇತ್ತು. ಹೀಗಾಗಿ ದಾವಣೆಗೆರೆ ಆಸ್ಪತ್ರೆಗೆ ಬಂದಿದ್ದರು. ಆದ್ರೆ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಹೋಗುವಂತೆ ಅಲ್ಲಿನ ಸಿಬ್ಬಂದಿ ಸೂಚಿಸಿದ್ದರು. ಬಳಿಕ ಹಲವು ಆಸ್ಪತ್ರೆಗಳು ಸುತ್ತಾಡಿದ್ದ ವೃದ್ಧೆ ಅನುಸೂಯಮ್ಮಗೆ ಬೆಡ್ ಸಿಕ್ಕಿಲ್ಲ. ಜಿಲ್ಲಾಸ್ಪತ್ರೆಯಿಂದ ರೆಫರೆನ್ಸ್ ಲೆಟರ್ ಇದ್ದರೂ ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಂಡಿಲ್ಲ. ಕೊವಿಡ್ ನೆಗೆಟಿವ್ ಇದ್ದರೂ ಆಕೆಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ಹಿಂದೇಟು ಹಾಕಿವೆ.

ಅದರಲ್ಲೂ ಒಂದು ಖಾಸಗಿ ಆಸ್ಪತ್ರೆ ಮುಂಗಡವಾಗಿ 20 ಸಾವಿರ ಪಾವತಿಸಲು ಸೂಚಿಸಿದೆ. ಹಣ ಪಾವತಿಸಲು ಸಾಧ್ಯವಾಗದೆ ವೃದ್ಧೆ ತಮ್ಮ ಊರಿಗೆ ವಾಪಸ್ ಆಗಿದ್ದಾರೆ. ದಾವಣಗೆರೆಯಲ್ಲಿ ಬಡವರಿಗೆ ಸರಿಯಾದ ಚಿಕಿತ್ಸೆ ಸಿಗುವುದು ಕೂಡ ಕಷ್ಟವಾಗಿದೆ.

ಇದನ್ನೂ ಓದಿ: ನಾಲ್ಕು ತಿಂಗಳಲ್ಲಿ ಹುಬ್ಬಳ್ಳಿಯ ತೋಳನಕೆರೆ ಉದ್ಯಾನವನ ಲೋಕಾರ್ಪಣೆಗೊಳ್ಳುತ್ತದೆ; ಪ್ರಹ್ಲಾದ್ ಜೋಶಿ ಮಾಹಿತಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು