AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ಆಗಿದೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕೋವಿಡ್ ಕರೆ, ಏನದು?

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನ ದಂಗಾಗಿ ಹೋಗಿದ್ದಾರೆ. ಅದರಲ್ಲೂ ಪಿಪಿಇ ಕಿಟ್ ಧರಿಸಿ ಯುದ್ಧಕ್ಕೆ ಸಜ್ಜಾಗಿರುವ ವೈದ್ಯರಿಗೂ ಕೊರೊನಾ, ಭಯ ಹುಟ್ಟಿಸಿಬಿಟ್ಟಿದೆ. ಈ ನಡುವೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕರೆ ವೈರಲ್ ಆಗಿದೆ. ನಿಜಕ್ಕೂ ನನ್ನ ಕೈ ಕಟ್ಟಿ ಹಾಕಿದಂಗಿದೆ.. ಆಸ್ಪತ್ರೆಗಳಲ್ಲಿ ಸೌಕರ್ಯ ಇದೆ, ಆದರೆ ವೈದ್ಯರು ಮತ್ತು ನರ್ಸ್​ಗಳೇ ಬರ್ತಿಲ್ಲ. ಎಷ್ಟೊಂದು ಜೀವಗಳನ್ನು ಉಳಿಸುವ ಸಾಧ್ಯತೆ ಇದ್ರೂ ಅಸಹಾಯಕತೆ ತೋಡಿಕೊಂಡಿದ್ದಾರೆ ಡಾ. ತಹ ಮತೀನ್. ಎಚ್ಬಿಸಿಎಸ್ ಆಸ್ಪತ್ರೆಯಲ್ಲಿ 30 ಕೊವಿಡ್ ರೋಗಿಗಳಿಗೆ ಚಿಕಿತ್ಸೆ […]

ವೈರಲ್ ಆಗಿದೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕೋವಿಡ್ ಕರೆ, ಏನದು?
ಆಯೇಷಾ ಬಾನು
|

Updated on:Jul 06, 2020 | 11:48 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಅಟ್ಟಹಾಸಕ್ಕೆ ಜನ ದಂಗಾಗಿ ಹೋಗಿದ್ದಾರೆ. ಅದರಲ್ಲೂ ಪಿಪಿಇ ಕಿಟ್ ಧರಿಸಿ ಯುದ್ಧಕ್ಕೆ ಸಜ್ಜಾಗಿರುವ ವೈದ್ಯರಿಗೂ ಕೊರೊನಾ, ಭಯ ಹುಟ್ಟಿಸಿಬಿಟ್ಟಿದೆ. ಈ ನಡುವೆ ಬೆಂಗಳೂರು ಖಾಸಗಿ ಆಸ್ಪತ್ರೆ ವೈದ್ಯರ ಕರೆ ವೈರಲ್ ಆಗಿದೆ.

ನಿಜಕ್ಕೂ ನನ್ನ ಕೈ ಕಟ್ಟಿ ಹಾಕಿದಂಗಿದೆ.. ಆಸ್ಪತ್ರೆಗಳಲ್ಲಿ ಸೌಕರ್ಯ ಇದೆ, ಆದರೆ ವೈದ್ಯರು ಮತ್ತು ನರ್ಸ್​ಗಳೇ ಬರ್ತಿಲ್ಲ. ಎಷ್ಟೊಂದು ಜೀವಗಳನ್ನು ಉಳಿಸುವ ಸಾಧ್ಯತೆ ಇದ್ರೂ ಅಸಹಾಯಕತೆ ತೋಡಿಕೊಂಡಿದ್ದಾರೆ ಡಾ. ತಹ ಮತೀನ್. ಎಚ್ಬಿಸಿಎಸ್ ಆಸ್ಪತ್ರೆಯಲ್ಲಿ 30 ಕೊವಿಡ್ ರೋಗಿಗಳಿಗೆ ಚಿಕಿತ್ಸೆ ಕೊಡುವ ಸೌಕರ್ಯ ಇದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಮತ್ತು ದಾದಿಯರು ಮುಂದೆ ಬರ್ತಿಲ್ಲ. ಇಡೀ ಆಸ್ಪತ್ರೆಯಲ್ಲಿ ಕೊವಿಡ್ ಟ್ರೀಟ್ಮೆಂಟ್​ಗೆ ಒಬ್ಬ ವೈದ್ಯ ಮತ್ತು ಒಬ್ಬ ಸಹಾಯಕ ಮಾತ್ರ ಇದ್ದಾರೆ. ಕನಿಷ್ಟ ದಿನಕ್ಕೆ 6 ಗಂಟೆಗಳಾದ್ರೂ ಕೆಲಸ ಮಾಡಿ, ಸಹಾಯ ಮಾಡಿ ಎಂದು ಎಲ್ಲಾ ವೈದ್ಯರನ್ನು ಡಾ. ತಹ ಮತೀನ್ ಕೇಳಿಕೊಂಡಿದ್ದಾರೆ.

ಇದು ನಾವು ಮಾನವೀಯತೆ ತೋರಿಸುವ ನಿಜವಾದ ಸಮಯ. ಸೈನಿಕರು, ಪೊಲೀಸರು ಪ್ರತಿಯೊಬ್ಬರು ತಮ್ಮ ಸೇವೆ ಮಾಡಿದ್ದಾರೆ. ಈಗ ನಮ್ಮ ಸೇವೆಗೆ ಟೈಮ್ ಬಂದಿದೆ ದಯವಿಟ್ಟು ಬನ್ನಿ ಚಿಕಿತ್ಸೆ ಕೊಡೋಣ ಮೈ ಫ್ರೆಂಡ್ಸ್ ಅಂತಾ ಅವರು ಬೇಡಿಕೊಂಡಿದ್ದಾರೆ. ಅನೇಕ ಆಸ್ಪತ್ರೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಕೊವಿಡ್ ಕಂಡು ಡಾಕ್ಟರ್ಸ್, ನರ್ಸ್ ಓಡಿ ಹೋಗ್ತಿದ್ದಾರೆ. ಇತ್ತೀಚೆಗಷ್ಟೇ ಮತ್ತೊಂದು ಖಾಸಗಿ ಆಸ್ಪತ್ರೆಯ ನರ್ಸ್ ಗೆ ಕೊರೊನಾ ಎಂದಾಗ ಚಿಕಿತ್ಸೆ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಆದ್ದರಿಂದ ಆಕೆಯನ್ನು ವಿಕ್ಟೋರಿಯಾಗೆ ರವಾನೆ ಮಾಡಲಾಗಿತ್ತು ಎಂದಿದ್ದಾರೆ.

Published On - 10:31 am, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್