AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ, ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ: ನಾಲ್ಕೈದು ದಿನ ರಜೆಗೆಂದು ಬೆಂಗಳೂರಿನಿಂದ ಊರಿಗೆ ಹೊರಟವರಿಗೆ ಶಾಕ್

ಸಾಲು-ಸಾಲು ರಜೆ ಬಂತು ಅಂದರೆ ಖಾಸಗಿ ಬಸ್​ಗಳಿಗೆ ಹಬ್ಬವೋ ಹಬ್ಬ. ಎರಡ್ಮೂರು ಪಟ್ಟು ದರ ಏರಿಕೆ ಮಾಡಿ, ಜನರಿಂದ ದುಪ್ಪಟ್ಟು ದರ ವಸೂಲಿ ಶುರು ಮಾಡುತ್ತವೆ. ಈಗ ಮತ್ತದೇ ಚಾಳಿ ಮುಂದುವರಿದಿದೆ. ಈ ಬಾರಿ ಸಾಲಾಗಿ ನಾಲ್ಕೈದು ರಜೆಗಳು ಬಂದಿದ್ದು, ಊರಿಗೆ ಹೋಗೋಣ ಅಂದುಕೊಂಡಿದ್ದವರಿಗೆ ಖಾಸಗಿ ಬಸ್​ಗಳು ಶಾಕ್ ನೀಡಲು ಮುಂದಾಗಿದೆ. ಈ ಬಾರಿ ಕೆಎಸ್​ಆರ್​ಟಿಸಿ ಬಸ್​ಗಳೂ ದರ ಹೆಚ್ಚಳ ಮಾಡಿವೆ. ದರ ವಿವರ ಇಲ್ಲಿದೆ.

ಖಾಸಗಿ, ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ: ನಾಲ್ಕೈದು ದಿನ ರಜೆಗೆಂದು ಬೆಂಗಳೂರಿನಿಂದ ಊರಿಗೆ ಹೊರಟವರಿಗೆ ಶಾಕ್
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Apr 10, 2025 | 8:44 AM

Share

ಬೆಂಗಳೂರು, ಏಪ್ರಿಲ್ 10: ಯುಗಾದಿ, ಗೌರಿ- ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ… ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ದುಪ್ಪಟ್ಟು ವಸೂಲಿಗೆ ಇಳಿದು ಬಿಡುತ್ತಾರೆ. ರಜೆ (Holidays) ಅಂತ ಮನೆ ಕಡೆ ಹೊರಟವರ ಜೇಬಿಗೆ ಗುನ್ನ ಇಡುತ್ತಾರೆ. ಹೀಗೆ ಅವಕಾಶ ಸಿಕ್ಕಗಾಲೆಲ್ಲ ದರ ಏರಿಸುವ ಪ್ರವೇಟ್ ಬಸ್ (Private Bus Ticket Price Hike) ಮಾಲೀಕರು, ಈ ಬಾರಿಯೂ ವಸೂಲಿಗೆ ಮುಂದಾಗಿದ್ದಾರೆ. ಈ ಬಾರಿ ಸಾಲಾಗಿ ನಾಲ್ಕೈದು ದಿನ ರಜೆ ಸಿಕ್ಕಿದ್ದು ಜನ ತಮ್ಮ ತಮ್ಮ ಊರಿನ ಕಡೆ ಮುಖ ಮಾಡಿದ್ದಾರೆ. ಇಂದು (ಗುರುವಾರ) ಮಹಾವೀರ ಜಯಂತಿ, ಶುಕ್ರವಾರ ಒಂದು ದಿನ ರಜೆ ಹಾಕಿಕೊಂಡರೆ ಶನಿವಾರ ಸೆಕೆಂಡ್ ಸ್ಯಾಟರ್​ಡೇ ಮತ್ತು ಹನುಮಜಯಂತಿ ರಜೆ, ಭಾನುವಾರ ಹೇಗೂ ರಜೆ ಸಿಗುತ್ತದೆ. ಸೋಮವಾರ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ. ಸರ್ಕಾರಿ ರಜೆ. ಅಲ್ಲಿಗೆ ಶುಕ್ರವಾರ ಒಂದು ದಿನ ರಜೆ ಹಾಕಿಕೊಂಡರೆ ಐದು ದಿನ ರಜೆ ಸಿಗುತ್ತದೆ. ಈ ಹಿನ್ನೆಲೆ ಜನ ಬೆಂಗಳೂರಿನಿಂದ (Bengaluru) ಊರಿಗೆ ಹೋಗಲು ಮುಂದಾಗುತ್ತಿದ್ದಾರೆ.

ಆದರೆ ಖಾಸಗಿ ಬಸ್ ದರ ದುಪ್ಪಟ್ಟು ಆಗಿರುವುದು ಊರಿಗೆ ಹೊರಟವರಿಗೆ ಶಾಕ್ ನೀಡಿದೆ. ಇದಕ್ಕೆ ಜನ ಆಕ್ರೋಶ ವ್ಯಕ್ತಪಡಿದ್ದಾರೆ. ಮಂಗಳವಾರ ದೇವದುರ್ಗದಿಂದ ಬೆಂಗಳೂರಿಗೆ ಖಾಸಗಿ ಬಸ್​ನಲ್ಲಿ 750 ರುಪಾಯಿ ಟಿಕೆಟ್ ದರ ಇತ್ತು. ಗುರುವಾರ ಆನ್​​ಲೈನ್​​ನಲ್ಲಿ 2 ಸಾವಿರ ರುಪಾಯಿ ತೋರಿಸುತ್ತಿದೆ ಎಂದು ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಬಸ್ ದರ ಏರಿಕೆ ವಿವರ (ರೂಪಾಯಿಗಳಲ್ಲಿ)

ಬೆಂಗಳೂರು-ಧಾರವಾಡ

ಇದನ್ನೂ ಓದಿ
Image
ವಾಹನ ಪಾರ್ಕ್ ಮಾಡಿ ಮೆಟ್ರೋದಲ್ಲಿ ಸಂಚರಿಸುವವರಿಗೆ ಸಿಗಲಿದೆ ಡಿಸ್ಕೌಂಟ್
Image
ರಜೆಯೆಂದು ಮನೆಗೆ ಬೀಗ ಹಾಕಿ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಸಲಹೆ ಗಮನಿಸಿ
Image
ಇಂದು, ನಾಳೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ
  • ಹಿಂದಿನ ದರ = 750 – 2999
  • ಪ್ರಸ್ತುತ ದರ = 850 – 10,000

ಬೆಂಗಳೂರು- ಧರ್ಮಸ್ಥಳ

  • ಹಿಂದಿನ ದರ = 600-850
  • ಪ್ರಸ್ತುತ ದರ = 1250-2000

ಬೆಂಗಳೂರು-ಮೈಸೂರು

  • ಹಿಂದಿನ ದರ = 190-1600
  • ಪ್ರಸ್ತುತ ದರ = 300-5999

ಬೆಂಗಳೂರು-ಕೊಡಗು

  • ಹಿಂದಿನ ದರ = 580-990
  • ಪ್ರಸ್ತುತ ದರ = 1000-1900

ಬೆಂಗಳೂರು-ಚಿಕ್ಕಮಗಳೂರು

  • ಹಿಂದಿನ ದರ = 500-700
  • ಪ್ರಸ್ತುತ ದರ = 599-1150

ಬೆಂಗಳೂರು-ಮಂಗಳೂರು

  • ಹಿಂದಿನ ದರ = 600-2999
  • ಪ್ರಸ್ತುತ ದರ = 900-3000

ಬೆಂಗಳೂರು-ಹುಬ್ಬಳ್ಳಿ

  • ಹಿಂದಿನ ದರ = 759-3,800
  • ಪ್ರಸ್ತುತ ದರ = 819-10,000

ಬೆಂಗಳೂರು- ಕಾರವಾರ

  • ಹಿಂದಿನ ದರ = 850-2999
  • ಪ್ರಸ್ತುತ ದರ = 1499-3000

ಬೆಂಗಳೂರು-ಕಲ್ಬುರ್ಗಿ

  • ಹಿಂದಿನ ದರ = 850-4000
  • ಪ್ರಸ್ತುತ ದರ = 1399-2400

ಬೆಂಗಳೂರು-ಶಿವಮೊಗ್ಗ

  • ಹಿಂದಿನ ದರ = 350-1899
  • ಪ್ರಸ್ತುತ ದರ = 799-2299

ಕೆಎಸ್​ಆರ್​ಟಿಸಿ ಬಸ್​ಗಳಿಂದಲೂ ಟಿಕೆಟ್ ದರ ಏರಿಕೆ

ಈ ಬಾರಿ ರಜೆಗೆ ಊರಿಗೆ ಹೋಗುವವರಿಗೆ ಖಾಸಗಿ ಬಸ್​ಗಳು ಮಾತ್ರ ದರ ಏರಿಕೆ ಮಾಡಿಲ್ಲ. ಕೆಎಸ್ಆರ್​​ಟಿಸಿ ಬಸ್​ಗಳೂ ದರ ಏರಿಕೆ ಮಾಡಿವೆ. ಕೆಎಸ್ಆರ್​​ಟಿಸಿ ಬಸ್​ಗ ಶೇ 15 ರಿಂದ 20 ರಷ್ಟು ದರ ಏರಿಕೆ ಮಾಡಿವೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯವಾಗಿ ಬೆಂಗಳೂರು – ಹುಬ್ಬಳ್ಳಿಗೆ ಎಸಿ ಸ್ಲೀಪರ್ ಸಾಮಾನ್ಯ ದರ – 1100 ರುಪಾಯಿ. ಆದ್ರೆ ಬುಧವಾರ -1350 ಆಗಿದೆ. ನಾನ್ ಎಸಿ ಸ್ಲೀಪರ್ ಸಾಮಾನ್ಯ ದರ -800 ರುಪಾಯಿ ಬುಧವಾರ – 1100 ರೂ ಆಗಿದೆ. ಬೆಂಗಳೂರು – ಬೀದರ್ ಎಸಿ ಸ್ಲೀಪರ್ ಸಾಮಾನ್ಯ ದರ – 1500 ಇತ್ತು. ಈಗ 1900 ರಿಂದ 2100 ಆಗಿದೆ. ನಾನ್ ಎಸಿ ಸ್ಲೀಪರ್ ಸಾಮಾನ್ಯ ದರ – 1200 ಯಿಂದ 1850 ರೂ.ಗೆ ಜಾಸ್ತಿ ಆಗಿದೆ. ಬೆಂಗಳೂರು – ಮಂಗಳೂರು ಎಸಿ ಸ್ಲೀಪರ್ ಸಾಮಾನ್ಯ ದರ – 1500 ರೂ. ಈಗಿನ ದರ – 1850 ರೂ. ಆಗಿದೆ. ನಾನ್ ಎಸಿ ಸಾಮಾನ್ಯ ದರ – 1100 ರೂ, ಈಗಿನ ದರ – 1500 ಆಗಿದೆ.

ಇದನ್ನೂ ಓದಿ: ವಾಹನ ಪಾರ್ಕ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಸಿಗಲಿದೆ ಡಿಸ್ಕೌಂಟ್

ಒಟ್ಟಿನಲ್ಲಿ ಖಾಸಗಿ ಬಸ್​ಗಳೇನೋ ದುಪ್ಪಟ್ಟು ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದ್ದರೆ, ಇತ್ತ ಸಾರ್ವಜನಿಕ ಸಾರಿಗೆಯಾಗಿರುವ ಕೆಎಸ್​ಆರ್​ಟಿಸಿ ಕೂಡ ಹೆಚ್ಚಿನ ದರ ಪಡೆಯಲು ಮುಂದಾಗಿರುವುದು ದುರಂತವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!