
ಬೆಂಗಳೂರು, ಏಪ್ರಿಲ್ 10: ಯುಗಾದಿ, ಗೌರಿ- ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ… ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ದುಪ್ಪಟ್ಟು ವಸೂಲಿಗೆ ಇಳಿದು ಬಿಡುತ್ತಾರೆ. ರಜೆ (Holidays) ಅಂತ ಮನೆ ಕಡೆ ಹೊರಟವರ ಜೇಬಿಗೆ ಗುನ್ನ ಇಡುತ್ತಾರೆ. ಹೀಗೆ ಅವಕಾಶ ಸಿಕ್ಕಗಾಲೆಲ್ಲ ದರ ಏರಿಸುವ ಪ್ರವೇಟ್ ಬಸ್ (Private Bus Ticket Price Hike) ಮಾಲೀಕರು, ಈ ಬಾರಿಯೂ ವಸೂಲಿಗೆ ಮುಂದಾಗಿದ್ದಾರೆ. ಈ ಬಾರಿ ಸಾಲಾಗಿ ನಾಲ್ಕೈದು ದಿನ ರಜೆ ಸಿಕ್ಕಿದ್ದು ಜನ ತಮ್ಮ ತಮ್ಮ ಊರಿನ ಕಡೆ ಮುಖ ಮಾಡಿದ್ದಾರೆ. ಇಂದು (ಗುರುವಾರ) ಮಹಾವೀರ ಜಯಂತಿ, ಶುಕ್ರವಾರ ಒಂದು ದಿನ ರಜೆ ಹಾಕಿಕೊಂಡರೆ ಶನಿವಾರ ಸೆಕೆಂಡ್ ಸ್ಯಾಟರ್ಡೇ ಮತ್ತು ಹನುಮಜಯಂತಿ ರಜೆ, ಭಾನುವಾರ ಹೇಗೂ ರಜೆ ಸಿಗುತ್ತದೆ. ಸೋಮವಾರ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ. ಸರ್ಕಾರಿ ರಜೆ. ಅಲ್ಲಿಗೆ ಶುಕ್ರವಾರ ಒಂದು ದಿನ ರಜೆ ಹಾಕಿಕೊಂಡರೆ ಐದು ದಿನ ರಜೆ ಸಿಗುತ್ತದೆ. ಈ ಹಿನ್ನೆಲೆ ಜನ ಬೆಂಗಳೂರಿನಿಂದ (Bengaluru) ಊರಿಗೆ ಹೋಗಲು ಮುಂದಾಗುತ್ತಿದ್ದಾರೆ.
ಆದರೆ ಖಾಸಗಿ ಬಸ್ ದರ ದುಪ್ಪಟ್ಟು ಆಗಿರುವುದು ಊರಿಗೆ ಹೊರಟವರಿಗೆ ಶಾಕ್ ನೀಡಿದೆ. ಇದಕ್ಕೆ ಜನ ಆಕ್ರೋಶ ವ್ಯಕ್ತಪಡಿದ್ದಾರೆ. ಮಂಗಳವಾರ ದೇವದುರ್ಗದಿಂದ ಬೆಂಗಳೂರಿಗೆ ಖಾಸಗಿ ಬಸ್ನಲ್ಲಿ 750 ರುಪಾಯಿ ಟಿಕೆಟ್ ದರ ಇತ್ತು. ಗುರುವಾರ ಆನ್ಲೈನ್ನಲ್ಲಿ 2 ಸಾವಿರ ರುಪಾಯಿ ತೋರಿಸುತ್ತಿದೆ ಎಂದು ಪ್ರಯಾಣಿಕರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಧಾರವಾಡ
ಬೆಂಗಳೂರು- ಧರ್ಮಸ್ಥಳ
ಬೆಂಗಳೂರು-ಮೈಸೂರು
ಬೆಂಗಳೂರು-ಕೊಡಗು
ಬೆಂಗಳೂರು-ಚಿಕ್ಕಮಗಳೂರು
ಬೆಂಗಳೂರು-ಮಂಗಳೂರು
ಬೆಂಗಳೂರು-ಹುಬ್ಬಳ್ಳಿ
ಬೆಂಗಳೂರು- ಕಾರವಾರ
ಬೆಂಗಳೂರು-ಕಲ್ಬುರ್ಗಿ
ಬೆಂಗಳೂರು-ಶಿವಮೊಗ್ಗ
ಈ ಬಾರಿ ರಜೆಗೆ ಊರಿಗೆ ಹೋಗುವವರಿಗೆ ಖಾಸಗಿ ಬಸ್ಗಳು ಮಾತ್ರ ದರ ಏರಿಕೆ ಮಾಡಿಲ್ಲ. ಕೆಎಸ್ಆರ್ಟಿಸಿ ಬಸ್ಗಳೂ ದರ ಏರಿಕೆ ಮಾಡಿವೆ. ಕೆಎಸ್ಆರ್ಟಿಸಿ ಬಸ್ಗ ಶೇ 15 ರಿಂದ 20 ರಷ್ಟು ದರ ಏರಿಕೆ ಮಾಡಿವೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಬೆಂಗಳೂರು – ಹುಬ್ಬಳ್ಳಿಗೆ ಎಸಿ ಸ್ಲೀಪರ್ ಸಾಮಾನ್ಯ ದರ – 1100 ರುಪಾಯಿ. ಆದ್ರೆ ಬುಧವಾರ -1350 ಆಗಿದೆ. ನಾನ್ ಎಸಿ ಸ್ಲೀಪರ್ ಸಾಮಾನ್ಯ ದರ -800 ರುಪಾಯಿ ಬುಧವಾರ – 1100 ರೂ ಆಗಿದೆ. ಬೆಂಗಳೂರು – ಬೀದರ್ ಎಸಿ ಸ್ಲೀಪರ್ ಸಾಮಾನ್ಯ ದರ – 1500 ಇತ್ತು. ಈಗ 1900 ರಿಂದ 2100 ಆಗಿದೆ. ನಾನ್ ಎಸಿ ಸ್ಲೀಪರ್ ಸಾಮಾನ್ಯ ದರ – 1200 ಯಿಂದ 1850 ರೂ.ಗೆ ಜಾಸ್ತಿ ಆಗಿದೆ. ಬೆಂಗಳೂರು – ಮಂಗಳೂರು ಎಸಿ ಸ್ಲೀಪರ್ ಸಾಮಾನ್ಯ ದರ – 1500 ರೂ. ಈಗಿನ ದರ – 1850 ರೂ. ಆಗಿದೆ.
ನಾನ್ ಎಸಿ ಸಾಮಾನ್ಯ ದರ – 1100 ರೂ, ಈಗಿನ ದರ – 1500 ಆಗಿದೆ.
ಇದನ್ನೂ ಓದಿ: ವಾಹನ ಪಾರ್ಕ್ ಮಾಡಿ ಮೆಟ್ರೋ ಪ್ರಯಾಣ ಮಾಡುವವರಿಗೆ ಶೀಘ್ರದಲ್ಲೇ ಸಿಗಲಿದೆ ಡಿಸ್ಕೌಂಟ್
ಒಟ್ಟಿನಲ್ಲಿ ಖಾಸಗಿ ಬಸ್ಗಳೇನೋ ದುಪ್ಪಟ್ಟು ದರ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದ್ದರೆ, ಇತ್ತ ಸಾರ್ವಜನಿಕ ಸಾರಿಗೆಯಾಗಿರುವ ಕೆಎಸ್ಆರ್ಟಿಸಿ ಕೂಡ ಹೆಚ್ಚಿನ ದರ ಪಡೆಯಲು ಮುಂದಾಗಿರುವುದು ದುರಂತವೇ ಸರಿ.