AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌರ್ಯ ಸರ್ಕಲ್​ನಲ್ಲಿ ಖಾಸಗಿ ಶಾಲಾ ವಾಹನ ಚಾಲಕರ ಪ್ರತಿಭಟನೆ.. ಬೇಡಿಕೆಗಳು ಹೀಗಿವೆ

ಒಂದು ವರ್ಷದಿಂದ ಕೆಲಸವಿಲ್ಲದೆ ಕಂಗಾಲಾಗಿರುವ ಖಾಸಗಿ ಶಾಲಾ ವಾಹನ ಚಾಲಕರು ಕರ್ನಾಟಕ ಖಾಸಗಿ ಶಾಲಾ ವಾಹನ ಚಾಲಕರ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಖಾಸಗಿ ಶಾಲಾ ವಾಹನಗಳ ಚಾಲಕರು ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಮೌರ್ಯ ಸರ್ಕಲ್​ನಲ್ಲಿ ಖಾಸಗಿ ಶಾಲಾ ವಾಹನ ಚಾಲಕರ ಪ್ರತಿಭಟನೆ.. ಬೇಡಿಕೆಗಳು ಹೀಗಿವೆ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Mar 06, 2021 | 12:31 PM

Share

ಬೆಂಗಳೂರು: ಪೋಷಕರದ್ದಾಯ್ತು, ಖಾಸಗಿ ಶಾಲಾ ಒಕ್ಕೂಟವಾಯ್ತು, ಈಗ ಖಾಸಗಿ ಶಾಲಾ ವಾಹನ ಚಾಲಕರಿಂದಲೂ ಪ್ರತಿಭಟನೆ ನಡಯುತ್ತಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ವಾಹನ ಚಾಲಕರು ಮೌರ್ಯ ಸರ್ಕಲ್​ನಲ್ಲಿ ಧರಣಿ ಮಾಡುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ಕೆಲಸವಿಲ್ಲದೆ ಕಂಗಾಲಾಗಿರುವ ಖಾಸಗಿ ಶಾಲಾ ವಾಹನ ಚಾಲಕರು ಕರ್ನಾಟಕ ಖಾಸಗಿ ಶಾಲಾ ವಾಹನ ಚಾಲಕರ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಖಾಸಗಿ ಶಾಲಾ ವಾಹನಗಳ ಚಾಲಕರು ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಸರ್ಕಾರ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಮೆರವಣಿಗೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಶಾಲಾ ವಾಹನ ಚಾಲಕರ ಬೇಡಿಕೆಗಳೇನು? 1. ಖಾಸಗಿ ಶಾಲಾ ವಾಹನಗಳಿಗೆ ಪರ್ಮಿಟ್ ನೀಡಬೇಕು. 2. ಪೂರ್ಣ ಪ್ರಮಾಣದಲ್ಲಿ ಶಾಲಾ ಆರಂಭಿಸಬೇಕು. 3. ಶಾಲಾ ವಾಹನದ ತೆರಿಗೆಯನ್ನು ಮಾರ್ಚ್ 2020 ರಿಂದ ಮಾರ್ಚ್ 2021ರ ವರೆಗೆ ಮುನ್ನ ಮಾಡಬೇಕು. 4. ಶಾಲಾ ವಾಹನಗಳಿಗೆ ಶಾಲೆಗಳ ಬಳಿ ನಿಲ್ದಾಣ ಮಾಡಬೇಕು. 5. ಶಾಲಾ ವಾಹನ ಚಾಲಕರಿಗೆ ವಸತಿ/ನಿವೇಶನ ನೀಡುವುದು. 6. ಶಾಲಾ ವಾಹನಗಳಿಗೆ ಇನ್ಶುರೆನ್ಸ್ ರಿಯಾಯಿತಿ ನೀಡುವುದು 7. ಚಾಲಕರ ದಿನಾಚರಣೆಯನ್ನ ಸರ್ಕಾರ ಘೋಷಣೆ ಮಾಡಬೇಕು. 8. ಖಾಸಗಿ ಶಾಲಾ ವಾಹನಗಳಿಗೆ ಆಯಾ ಶಾಲೆಗಳ ಹತ್ತಿರ ಶಾಲೆಯ ಸಮಯದಲ್ಲಿ ನಿಲ್ದಾಣ ನೀಡುವುದು. 9. ಖಾಸಗಿ ಫೈನಾನ್ಸ್​ನಿಂದ ಅಧಿಕ ಬಡ್ಡಿ ಮತ್ತು ದೌರ್ಜನ್ಯವನ್ನ ತಡೆಗಟ್ಟುವುದು. 10. ಕೋವಿಡ್ 19ರಿಂದ ಚಾಲಕರ ಆದಾಯಕ್ಕೆ ನಷ್ಟವಾಗಿರುವುದರಿಂದ 15 ವರ್ಷದ ಹಳೆಯ ವಾಹನಗಳಿಗೆ ಎಫ್​ಸಿ ಮಾಡುವುದು. 11. ಅಸಂಘಟಿತ ವಾಣಿಜ್ಯ ವಾಹನ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದು.

ಖಾಸಗಿ ಶಾಲೆಗಳ ಬೇಡಿಕೆಗಳೇನು? ರಾಜ್ಯ ಸರ್ಕಾರ ಶೇ.30 ರಷ್ಟು ಶುಲ್ಕ ಕಡಿತದ ಆದೇಶವನ್ನು ಪುನರ್ ಪರಿಶೀಲನೆ‌ ಮಾಡಬೇಕು. ರಾಜ್ಯ ಸರ್ಕಾರ ಶೇ.30 ರಷ್ಟು ಕಡಿತ ಅಂತ ಹೇಳಿದೆ, ಆದ್ರೆ ಆದೇಶದ ಪ್ರಕಾರ ಶೇ.55 ರಿಂದ 65 ರಷ್ಟು ಶುಲ್ಕ ಕಡಿತವಾಗ್ತಿದೆ. ಹಾಗೇ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗೆ ಅನುದಾನ ನೀಡಬೇಕು ಹಾಗೇಕಟ್ಟಡ ಸುರಕ್ಷತೆ ಪ್ರಮಾಣ ಪತ್ರ ಹಳೆಯ ಶಾಲೆಗಳಿಗೆ ಕೈ ಬಿಡುವಂತೆ ಒತ್ತಾಯಿಸಿವೆ. 1 ರಿಂದ 5 ನೇ ತರಗತಿಯನ್ನ ಆದಷ್ಟು ಬೇಗ ಆರಂಭ ಮಾಡಬೇಕು. ಬಿಇಓ, ಡಿಡಿಪಿಐಗಳ ಭ್ರಷ್ಟಾಚಾರ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

ಇದನ್ನೂ ಓದಿ

ಇಂದು ಖಾಸಗಿ ಶಾಲಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ.. ಶೇ.30ರಷ್ಟು ಶಾಲಾ ಶುಲ್ಕ ಕಡಿತ ವಿರೋಧಿಸಿ ಹೋರಾಟ

ಶಾಲೆಗಳಿಗೆ ಸರ್ಕಾರ ಅನುದಾನ ನೀಡದಿದ್ದಕ್ಕೆ ಗರಂ.. ಕಲ್ಯಾಣ ಕರ್ನಾಟಕ ಭಾಗದ 1500 ಖಾಸಗಿ ಶಾಲೆಗಳು ಇಂದು ಬಂದ್‌ಗೆ ನಿರ್ಧಾರ

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ