AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು

2020-21ನೇ ವರ್ಷದ ಶುಲ್ಕದ ಸಮಸ್ಯೆಯೇ ಇನ್ನೂ ಬಗೆಹರಿಯದೆ ಕೋರ್ಟ್​ನಲ್ಲಿದೆ. ಇದರ ನಡುವೆ 2021-22ನೇ ಸಾಲಿನ‌ ಶುಲ್ಕ ಪಾವತಿಗೆ ಒತ್ತಡ ಹೇರಲಾಗುತ್ತಿದೆ. ಈಗ ಪೂರ್ತಿ ಶುಲ್ಕ ಕಟ್ಟಿ, ಕೋರ್ಟ್ ಆದೇಶ ಬಂದರೆ ಮುಂದೆ ತೀರ್ಮಾನ ಮಾಡೋಣ ಎಂದಿರುವ ಎನ್​ಪಿಎಸ್ ಶಾಲೆ, ಶುಲ್ಕ ಪಾವತಿಸುವಂತೆ ನಿತ್ಯ ಮೆಸೇಜ್ ಮೆಸೇಜ್ ಮತ್ತು ಮೇಲ್ ಮೂಲಕ ಒತ್ತಡ ಹೇರುತ್ತಿವೆ ಎಂದು ಪೋಷಕರು ತಿಳಿಸಿದ್ದಾರೆ.

ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು
ಬೆಂಗಳೂರು ಜಯನಗರದ ಎನ್​ಪಿಎಸ್ ಶಾಲೆ
preethi shettigar
|

Updated on: May 17, 2021 | 8:15 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ದೇಶದಲ್ಲಿ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಬೆನ್ನೆಲ್ಲೆ ದಿನಗೂಲಿ ಕಾರ್ಮಿಕರು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದರೆ ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಶಾಲೆಗಳು ಮಾತ್ರ ಶುಲ್ಕ ಕಟ್ಟಿಸಿಕೊಳ್ಳಲು ಮುಂದಾಗಿದೆ.

ಮೇ 24ರವರೆಗೆ ಶಾಲೆಗಳ ಬಂದ್​ಗೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಇದನ್ನು ಪರಿಗಣಿಸದ ಖಾಸಗಿ ಶಾಲಾ ಆಡಳಿತ ಮಂಡಳಿ ಶಾಲೆ ಓಪನ್​ ಮಾಡಿ ಪುಸ್ತಕ ಖರೀದಿಗೆ ಆಹ್ವಾನ ನೀಡಿದೆ. ಮೇ 20 ರ ಒಳಗೆ ಪುಸ್ತಕ ಖರೀದಿಸಬೇಕು ಎಂದು ಪೋಷಕರಿಗೆ ತಿಳಿಸಿರುವ ಬೆಂಗಳೂರು ಜಯನಗರದ ಎನ್​ಪಿಎಸ್ (NATIONAL PUBLIC SCHOOL) ​ ಶಾಲೆಯ ವಿರುದ್ಧ ಸದ್ಯ ಪೋಷಕರು ತಿರುಗಿ ಬಿದ್ದಿದ್ದಾರೆ.

2020-21ನೇ ವರ್ಷದ ಶುಲ್ಕದ ಸಮಸ್ಯೆಯೇ ಇನ್ನೂ ಬಗೆಹರಿಯದೆ ಕೋರ್ಟ್​ನಲ್ಲಿದೆ. ಇದರ ನಡುವೆ 2021-22ನೇ ಸಾಲಿನ‌ ಶುಲ್ಕ ಪಾವತಿಗೆ ಒತ್ತಡ ಹೇರಲಾಗುತ್ತಿದೆ. ಈಗ ಪೂರ್ತಿ ಶುಲ್ಕ ಕಟ್ಟಿ, ಕೋರ್ಟ್ ಆದೇಶ ಬಂದರೆ ಮುಂದೆ ತೀರ್ಮಾನ ಮಾಡೋಣ ಎಂದಿರುವ ಎನ್​ಪಿಎಸ್ ಶಾಲೆ, ಶುಲ್ಕ ಪಾವತಿಸುವಂತೆ ನಿತ್ಯ ಮೆಸೇಜ್ ಮೆಸೇಜ್ ಮತ್ತು ಮೇಲ್ ಮೂಲಕ ಒತ್ತಡ ಹೇರುತ್ತಿವೆ ಎಂದು ಪೋಷಕರು ತಿಳಿಸಿದ್ದಾರೆ.

ಇದಷ್ಟೇ ಅಲ್ಲದೆ ಎಲ್​ಕೆಜಿ ಮಗುವಿಗೆ ಮೊದಲ ಕಂತು ಶುಲ್ಕ ಕಟ್ಟುವಂತೆ ಒತ್ತಡ ಹೇರಿರುವ ಖಾಸಗಿ ಶಾಲಾ ಮಂಡಳಿ, ಮೊದಲ ಕಂತಿನಲ್ಲಿ 1 ಲಕ್ಷ ಪಾವತಿಸುವಂತೆ ಸೂಚನೆ ನೀಡಿದೆ. ಬಾಕಿ ಹಣವನ್ನ ಎರಡನೇ ಕಂತಿನಲ್ಲಿ ಪಾವತಿಗೆ ಅವಕಾಶ ನೀಡಿದ್ದು, ಹಣ ಪಾವತಿಸಿದ ರಸೀದಿ ತೋರಿಸಿ ಪುಸ್ತಕ ಖರೀದಿಸುವಂತೆ ಸೂಚಿಸಿದೆ. ಸರ್ಕಾರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ಕೊಟ್ಟಿದೆ. ಈ ಸಂದರ್ಭದಲ್ಲಿ ಪುಸ್ತಕ ಖರೀದಿಗೆ ಹೇಗೆ ಹೋಗುವುದು ಎನ್ನುವ ಗೊಂದಲ ಶುರುವಾಗಿದ್ದು, ಶುಲ್ಕ ಪಾವತಿಯ ಒತ್ತಡ ಮತ್ತು ಪುಸ್ತಕ ಖರೀದಿಯ ಪೀಕಲಾಟದಿಂದ ತಪ್ಪಿಸುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಸರ್ಕಾರದ ಆದೇಶ ಉಲ್ಲಂಘಿಸಿ ಶುಲ್ಕ ಹೆಚ್ಚಳ: ಖಾಸಗಿ ಶಾಲೆ ವಿರುದ್ಧ ಪೋಷಕರ ಆಕ್ರೋಶ

ಪೂರ್ತಿ ಶುಲ್ಕ ಪಾವತಿಗೆ ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ: ಸಚಿವ ಸುರೇಶ್ ಸ್ವಾಗತ

Follow Us
preethi shettigar
preethi shettigar
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ