AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ
ಡಿ. ಶಶಿಕುಮಾರ್
ಪೃಥ್ವಿಶಂಕರ
| Edited By: |

Updated on: Jan 30, 2021 | 10:37 AM

Share

ಬೆಂಗಳೂರು: ಸರ್ಕಾರದಿಂದ ಖಾಸಗಿ ಶಾಲೆಗಳ ಶುಲ್ಕಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ, ಸರ್ಕಾರದ ವಿರುದ್ಧ ಖಾಸಗಿ‌ ಶಾಲೆಗಳ ಒಕ್ಕೂಟಗಳು ಅಸಮಾಧಾನ ಹೊರಹಾಕಿವೆ.

ನೆನ್ನೆ ಖಾಸಗಿ ಶಾಲೆಗಳ ಶುಲ್ಕ ನಿಗಧಿಯ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ವಿಧಾನಸೌದದಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಲಾ ಶುಲ್ಕವನ್ನ ಶೇ.30ರಷ್ಟು ಕಡಿಮೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ಆಕ್ರೋಶಗೊಂಡಿರುವ ಖಾಸಗಿ ಶಾಲೆಗಳ ಒಕ್ಕೂಟ, ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಸರ್ಕಾರ ನಿಗದಿ ಪಡಿಸಿರುವ ಶುಲ್ಕ ಒಪ್ಪುವಂತದಲ್ಲ. ಖಾಸಗಿ ಶಾಲೆಗಳ ಶುಲ್ಕವನ್ನು 30% ರಷ್ಟು ಕಡಿಮೆ ಮಾಡಿರುವು ಒಪ್ಪವುವಂತದಲ್ಲ.

ಬೇಕಿದ್ದರೆ 15 ರಿಂದ 20, 25 % ಟರ್ಮ್ ಶುಲ್ಕ ಸ್ಪೆಷಲ್ ಶುಲ್ಕದಲ್ಲಿ, ಡೆವಲಪ್ಮೆಂಟ್ ಶುಲ್ಕದಲ್ಲಿ ಇತರೆ ಕಂಪ್ಯೂಟರ್, ಟ್ರಾನ್ಪೋರ್ಟ್ ಚಾರ್ಜ್​ನಲ್ಲಿ ತಗಲುವ ವೆಚ್ಚದಲ್ಲಿ ಕಡಿಮೆ ಮಾಡಲು ಶಿಫಾರಸು ಮಾಡಬಹುದಿತ್ತು. ಆದರೆ ಏಕರೂಪದಲ್ಲಿ ಒಟ್ಟಾರೆ ಕಡಿತ ಮಾಡಿರುವುದು 30%. ಅದು 40 ರಿಂದ 50% ರಷ್ಟು ಆಗುತ್ತದೆ. ಟೆಕ್ನಿಕಲ್ ಆಗಿ ಈ ಅಂಶಗಳು ಈಗಾಗಲೇ ಶಿಕ್ಷಣ ಮಂತ್ರಿಗಳಿಗೆ, ಪ್ರಧಾನ ಕಾರ್ಯದರ್ಶಿ, ಹಾಗೂ ಅಯುಕ್ತರಿಗೆ ಗೊತ್ತಿತ್ತು. ಆದರೂ ಸ್ಪಷ್ಟೀಕರಣ ಕೊಡದೆ ಏಕಾಏಕಿ‌ ಕಡಿತ ಮಾಡಿದೆ.

ಹಾಗಾದ್ರೆ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಕೇವಲ 70% ರಷ್ಟು ಮಾತ್ರ ಸಂಬಳ ಕೊಡಬೇಕಾ..? ಇದಕ್ಕೆ ಶಿಕ್ಷಣ ಸಚಿವರು ಏನು ಉತ್ತರ ಕೊಡ್ತಾರೆ..? ಕಳೆದ ವರ್ಷ ಶುಲ್ಕವನ್ನೇ ಪಾವತಿ ಮಾಡಿಲ್ಲ. ಈ ವರ್ಷದ ದಾಖಲಾತಿ ಮಾಡಿಲ್ಲ. ಈ ಧೋರಣೆಯನ್ನು ಸಂಪೂರ್ಣವಾಗಿ ಒಪ್ಪುವಂತದಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪೋಷಕರಿಂದ 70 % ಮಾತ್ರವೇ ಶುಲ್ಕ ಪಡೆಯುತ್ತೇವೆ.. ಸರ್ಕಾರದ ನಿರ್ಧಾರ ಸ್ವಾಗತಿಸಿದ ರೂಪ್ಸಾ

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು